ರಾಜ್ಯ

ಗಗನಯಾನಿಯಾಗಲು ದೈಹಿಕ, ಮಾನಸಿಕ ಆರೋಗ್ಯ ಬಹಳ ಮುಖ್ಯ: ಶುಭಾಂಶು ಶುಕ್ಲಾ

ಬೆಂಗಳೂರು: ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಜತೆಗೆ ಜೀವನದಲ್ಲಿ ಶಿಸ್ತು ರೂಢಿಸಿಕೊಂಡಲ್ಲಿ, ನೀವು ನನ್ನ ರೀತಿ ಗಗನಯಾನಿ ಆಗಬಹುದು ಎಂದು ಗಗನಯಾನಿ ಶುಭಾಂಶು ಶುಕ್ಲಾ ತಿಳಿಸಿದರು.

ಕರ್ನಾಟಕ ಸರಕಾರ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ವತಿಯಿಂದ ಜವಾಹರಲಾಲ್ ನೆಹರು ತಾರಾಲಯದಲ್ಲಿ ಆಯೋಜಿಸಿದ್ದ ಆಕ್ಸಿಯಂ ಸ್ಪೇಸ್-4 ಮಿಷನ್ ಯಶಸ್ವಿಯ ರುವಾರಿಯಾಗಿರುವ ಗಗನಯಾತ್ರಿ ಶ್ರೀಶುಭಾಂಶು ಶುಕ್ಲಾ ಅವರಿಗೆ ಅಭಿನಂದನೆ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ, ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.

ಈ ವೇಳೆ ವಿದ್ಯಾರ್ಥಿಗಳ ಹಲವಾರು ಪ್ರಶ್ನೆಗಳಿಗೆ ಉತ್ತರಿಸಿದರು. ನೀವು ಸಹ ನನ್ನಂತೆಯೇ ಗಗನಯಾನಿ ಆಗಬಹುದು. ಆದರೆ, ಇದೊಂದೇ ಆಗಬೇಕೆಂದು ಕನಸು ಕಾಣಬೇಡಿ. ಏಕೆಂದರೆ, ಈ ಅವಕಾಶ ಎಲ್ಲರಿಗೂ ಸಿಗುವುದಿಲ್ಲ. ನಾನು ಹೀರೋ ರೀತಿ ನಿಮಗೆ ಕಾಣಬಹುದು. ಆದರೆ, ನನ್ನ ಯಾತ್ರೆಗೆ ಸಾವಿರಾರೂ ಮಂದಿ ಕೆಲಸ ಮಾಡಿದ್ದಾರೆ. ಎಂಜಿನಿಯರ್, ವೈದ್ಯರು ಹೀಗೆ ಸಾಕಷ್ಟು ಮಂದಿ ಇದ್ದಾರೆ. ಅವರಂತೆ ನೀವು ಆಗಬಹುದು’ ಎಂದರು.

ಇದನ್ನು ಓದಿ: ಮಾನವ ಸಹಿತ ಗಗನಯಾನಕ್ಕೆ ಸಜ್ಜಾದ ಇಸ್ರೋ

ನನ್ನ ಗಗನಯಾನಕ್ಕೆ ಸಾಕಷ್ಟು ಜನರ ಸ್ಪೂರ್ತಿ ಇದೆ. ಹೀಗಾಗಿ ಒಬ್ಬಿಬ್ಬರ ಹೆಸರೇಳುವುದು ಕಷ್ಟ. ಗಗನಯಾನಿ ರಾಕೇಶ್ ಶರ್ಮಾ ಅವರಿಂದ ನಾನು ಸಾಕಷ್ಟು ಕಲಿತಿದ್ದೇನೆ. ನೀವು ಜೀವನದಲ್ಲಿ ಗುರಿ ಇಟ್ಟುಕೊಳ್ಳಬೇಕು. ಅದನ್ನು ಸಾಧಿಸುವ ಛಲ ಇರಬೇಕು. ಎಲ್ಲದಕ್ಕಿಂತ ಮುಖ್ಯವಾಗಿ ತಾಳ್ಮೆ ಇರಬೇಕು. ಏಕೆಂದರೆ, ನಾನು 20 ದಿನಗಳ ಯಾತ್ರೆಗೆ 5 ವರ್ಷಗಳ ತರಬೇತಿ ಪಡೆದಿದ್ದೇನೆ’ ಎಂದರು.

ಗಗನಯಾನ ನೀವು ಅಂದುಕೊಂಡಷ್ಟು ಸುಲಭವಾಗಿಲ್ಲ. ಹೊಸ ವಾತಾವರಣಕ್ಕೆ ಹೊಂದುಕೊಳ್ಳುವುದು ತೀರಾ ಕಷ್ಟ. ಬಾಹ್ಯಾಕಾಶಕ್ಕೆ ಹೋದ ಮೇಲೆ ನಾನು ಗಾಳಿಯಲ್ಲಿ ತೇಲಾಡುವುದು ಅಭ್ಯಾಸ ಮಾಡಿಕೊಂಡೆ. ಅಲ್ಲಿ ಹಲವಾರು ಸಂಶೋಧನೆಗಳನ್ನು ಕೈಗೊಳ್ಳಲಾಯಿತು. ಭೂಮಿಗೆ ಬರುವಾಗ ತುಂಬಾ ಕಷ್ಟವಾಗಿತ್ತು. ಬಂದ ಮೇಲೆ ಒಂದು ವಾರದ ವರೆಗೆ ನನಗೆ ನೇರವಾಗಿ ನಿಂತುಕೊಳ್ಳುವುದಕ್ಕೆ ಸಹ ಆಗುತ್ತಿರಲಿಲ್ಲ ಎನ್ನುವ ಮೂಲಕ ತಮ್ಮ ಅನುಭವನ್ನು ವಿದ್ಯಾರ್ಥಿಗಳ ಎದುರು ಬಿಚ್ಚಿಟ್ಟರು.

ಸಣ್ಣ ನೀರಾವರಿ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಶ್ರೀ ಎನ್.ಎಸ್.ಬೋಸರಾಜು ಮಾತನಾಡಿ, ನಿಮ್ಮ ಕೆಲಸದ ಮೂಲಕ ಭಾರತೀಯ ವಿಜ್ಞಾನಕ್ಕೆ ನೀವು ಕೇವಲ ಕೊಡುಗೆ ನೀಡುವುದು ಮಾತ್ರವಲ್ಲ, ಜಾಗತಿಕ ಜ್ಞಾನವನ್ನು ನಿರೂಪಿಸಿದ್ದೀರಿ. ನೀವು ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರಕ್ಕೆ ಕಾಲಿಟ್ಟಾಗ, ನೀವು ಕೇವಲ ರಾಷ್ಟ್ರಧ್ವಜವನ್ನೇ ಅಲ್ಲ, ಎಲ್ಲಾ ಭಾರತೀಯರ ಕನಸುಗಳನ್ನು ಕೂಡ ನಿಮ್ಮೊಂದಿಗೆ ತೆಗೆದುಕೊಂಡು ಹೋಗಿದ್ದು, ನಮ್ಮ ದೇಶಕ್ಕೆ ಹೆಮ್ಮೆ ತಂದಿದೆ ಎಂದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

9 hours ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

9 hours ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

9 hours ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

9 hours ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

9 hours ago