Mysore
15
clear sky

Social Media

ಬುಧವಾರ, 11 ಫೆಬ್ರವರಿ 2026
Light
Dark

ಪಾರಿವಾಳದ ಮಲ-ಮೂತ್ರದಿಂದ ಜನರಿಗೆ ಉಸಿರಾಟದ ತೊಂದರೆ: ಸಚಿವ ದಿನೇಶ್‌ ಗುಂಡೂರಾವ್‌ ಎಚ್ಚರಿಕೆ

ಬೆಂಗಳೂರು: ಪಾರಿವಾಳದ ಮಲ-ಮೂತ್ರದಿಂದ ಸೋಂಕು, ಉಸಿರಾಟದ ತೊಂದರೆಯಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಅವರು, ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದರಿಂದ ಅವುಗಳ ದಟ್ಟಣೆ ಹೆಚ್ಚಾಗಿದೆ. ಪರಿಣಾಮ ಅವುಗಳ ಮಲ-ಮೂತ್ರದಿಂದ ಸೋಂಕು ಹರಡುವುದು, ಉಸಿರಾಟದ ತೊಂದರೆ ಸೇರಿದಂತೆ ಶ್ವಾಸಕೋಶಕ್ಕೆ ಸಂಬಂಧಿಸಿದ ಗಂಭೀರ ಆರೋಗ್ಯ ಸಮಸ್ಯೆಗಳಾಗುತ್ತಿವೆ.

ಇದನ್ನು ಓದಿ: ಶಿವಮೊಗ್ಗದಲ್ಲಿ 8 ಮಂದಿಗೆ ಮಂಗನ ಕಾಯಿಲೆ ಪಾಸಿಟಿವ್‌: ಮನೆಮಾಡಿದ ಆತಂಕ

ಹಾಗಾಗಿ ಸರ್ಕಾರ ಹೊಸ ನಿಯಂತ್ರಣ ಮಾರ್ಗಸೂಚಿಗಳನ್ನು ಹೊರಡಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವಂತಿಲ್ಲ. ನಿಯಮ ಉಲ್ಲಂಘಿಸಿದರೆ ದಂಡ ಅಥವಾ ಜೈಲು ಶಿಕ್ಷೆಯನ್ನೂ ವಿಧಿಸಲಾಗುವುದು. ಹಾಗಾಗಿ ಈ ಕುರಿತು ನಿರ್ಲಕ್ಷ್ಯ ಬೇಡ, ನಿಯಮ ಪಾಲಿಸಿ ಶಿಕ್ಷೆಯಿಂದ ಪಾರಾಗಿ ಎಂದು ಹೇಳಿದ್ದಾರೆ.

Tags:
error: Content is protected !!