ರಾಜ್ಯ

ಉತ್ತರ ಪ್ರದೇಶದಂತೆ ಬುಲ್ಡೋಜರ್‌ ಬಳಸಿ ಮುಸ್ಲಿಮರ ಮನೆ ಧ್ವಂಸ: ಕರ್ನಾಟಕದ ವಿರುದ್ಧ ಪಿಣರಾಯಿ ವಿಜಯನ್‌ ಆಕ್ರೋಶ

ಬೆಂಗಳೂರು: ಕರ್ನಾಟಕದಲ್ಲಿ ಬುಲ್ಡೋಜರ್‌ ಬಳಸಿ ಮುಸ್ಲಿಮರ ಮನೆಗಳನ್ನು ಧ್ವಂಸ ಮಾಡಲಾಗಿದೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್‌ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಬೆಂಗಳೂರಿನ ಯಲಹಂಕ ಕೋಗಿಲು ಲೇಔಟ್‌ ಬಳಿ ಸರ್ಕಾರದ ಜಾಗದಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಮನೆಗಳನ್ನು ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ನೆಲಸಮ ಮಾಡಿದ್ದರು.

ಇದನ್ನು ಓದಿ: ಮೈಸೂರು | ಹೀಲಿಯಂ ಸ್ಫೋಟ ಪ್ರಕರಣ: ಶವಗಾರದಲ್ಲಿ ಮೃತ ಲಕ್ಷ್ಮಿಯ ಕುಟುಂಬಸ್ಥರ ಆಕ್ರಂದನ

ಈ ವಿಚಾರದ ಬಗ್ಗೆ ಟ್ವೀಟ್‌ ಮಾಡಿರುವ ಕೇರಳ ಸಿಎಂ ಪಿಣರಾಯಿ ವಿಜಯನ್‌ ಅವರು, ಬೆಂಗಳೂರಿನ ಫಕೀರ್‌ ಕಾಲೋನಿ ಹಾಗೂ ನಸೀಮ್‌ ಲೇಔಟ್‌ನಲ್ಲಿ ವರ್ಷಗಳಿಂದ ವಾಸಿಸುತ್ತಿದ್ದ ಮುಸ್ಲಿಂ ಕುಟುಂಬಗಳ ಮನೆಗಳನ್ನು ಧ್ವಂಸ ಮಾಡಿದ್ದು ಅತ್ಯಂತ ಆಘಾತಕಾರಿ ಮತ್ತು ನೋವಿನ ಸಂಗತಿ. ಉತ್ತರ ಭಾರತದಲ್ಲಿ ಸಂಘ ಪರಿವಾರ ಅನುಸರಿಸುತ್ತಿರುವ ಅಲ್ಪಸಂಖ್ಯಾತ ವಿರೋಧಿ ಆಕ್ರಮಣಕಾರಿ ರಾಜಕೀಯದ ಮತ್ತೊಂದು ಆವೃತ್ತಿಯನ್ನು ಕರ್ನಾಟಕದಲ್ಲಿಯೂ ಕಾಣಬಹುದು ಎಂದು ಸಿಟ್ಟು ಹೊರಹಾಕಿದ್ದಾರೆ.

ಕೊರೆಯುವ ಚಳಿ ಇರುವಾಗಲೇ ಇವರನ್ನು ಹೊರದಬ್ಬಲಾಗಿದೆ. ಉತ್ತರ ಭಾರತದಲ್ಲಿ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆಯುತ್ತಿದ್ದ ರಾಜಕೀಯ ದಾಳಿ ಈಗ ದಕ್ಷಿಣಕ್ಕೂ ಬಂದಿದೆ. ಈ ಕ್ರಮವನ್ನು ಕಾಂಗ್ರೆಸ್‌ ಸರ್ಕಾರ ಯಾವ ರೀತಿ ಸಮರ್ಥಿಸಿಕೊಳ್ಳುತ್ತದೆ ಎಂದು ಪ್ರಶ್ನೆ ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹನೂರು | ಪೊನ್ನಾಚಿ ಗ್ರಾಮದ ಬಳಿ ಬೋನಿಗೆ ಬಿದ್ದ ಚಿರತೆ

ಹನೂರು : ಅನೇಕ ದಿನಗಳಿಂದ ಸಾಕುಪ್ರಾಣಿಗಳನ್ನು ಕೊಂದು ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆಗೆ ತಲೆ ನೋವಾಗಿದ್ದ ಚಿರತೆಯನ್ನು ಕೊನೆಗೂ ಸೆರೆ…

35 mins ago

ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ ಸಮಸ್ಯೆಯಿಲ್ಲ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದ ಮಳೆ ಬಾರದೇ ಇದ್ದರೂ, ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ…

3 hours ago

ಕದನ ವಿರಾಮದ ನಡುವೆ ಮತ್ತೆ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ: 5 ಮಂದಿ ಸಾವು

ಬೈರುತ್:‌ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ ಮುಂದುವರಿದಿದ್ದು, ಇಸ್ರೇಲ್ ಮತ್ತು ಇರಾನ್‌ ಬೆಂಬಲಿತ ಹೆಬ್ಜೊಲ್ಲಾ ನಡುವೆ ಕದನ ವಿರಾಮ ಜಾರಿಗೆ…

4 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಗಾಂಧೀಜಿಯವರ ಜೀವನವೇ ತೆರೆದ ಪುಸ್ತಕ:  ಇಡೀ ವಿಶ್ವವೇ ಗಾಂಧೀಜಿಯವರ ಅಹಿಂಸೆ ಮತ್ತು ಸತ್ಯಾಗ್ರಹಗಳನ್ನು ಗೌರವಿಸುತ್ತದೆ. ಗಾಂಧಿಯವರು ತಮ್ಮ ಶಾಲಾ ದಿನಗಳಲ್ಲಿಯೇ…

8 hours ago

ಗಾಂಧಿ ಹಾದಿಯಲ್ಲಿ ಹತಳಾದ ಮಾತಂಗಿನಿ ಹಜ್ರಾ

ಡಾ.ಟಿ.ಮಂಜು ಸತ್ತಿಗೆಹುಂಡಿ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಗಾಂಧಿ ಭವನ, ಮೈಸೂರು ವಿಶ್ವವಿದ್ಯಾಲಯ ಭಾರತದ ಸ್ವಾತಂತ್ರ್ಯ ಚಳವಳಿಗೆ ಕಾಲೇಜು ವಿದ್ಯಾರ್ಥಿಗಳು,…

8 hours ago

ಧರ್ಮವೆಂದು ತಿಳಿದು ತಿಗಣೆ ಇತ್ಯಾದಿಗಳನ್ನು ಕೊಲ್ಲುತ್ತಿದ್ದೆ

ನನ್ನ ಆರು ಏಳನೆಯ ವಯಸ್ಸಿನಿಂದ ಹದಿನಾರನೆಯ ವಯಸ್ಸಿನವರೆಗೆ ಪಾಠಶಾಲೆಯಲ್ಲಿ ವಿದ್ಯೆಯನ್ನು ಕಲಿತೆ. ಆದರೆ ಸ್ಕೂಲಿನಲ್ಲಿ ನನಗೆ ಯಾವ ಧಾರ್ಮಿಕ ಶಿಕ್ಷಣವೂ…

8 hours ago