ರಾಜ್ಯ

ಮಹಿಳೆಯರಿಗಾಗಿ ರಸ್ತೆಗಿಳಿಯಲಿದೆ ʼಪಿಂಕ್‌ ಬಸ್‌ʼ !

ಬೆಂಗಳೂರು : ಈಗಾಗಲೇ 295 ಕೋಟಿ ಮಹಿಳೆಯರು ಕರ್ನಾಟಕ ಸಾರಿಗೆ ಇಲಾಖೆಯ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಿದ್ದಾರೆ.
ಈ ನಡುವಲ್ಲೇ ಸರಕಾರ ಮಹಿಳೆಯರಿಗಾಗಿ ಮತ್ತೊಂದು ಗುಡ್‌ನ್ಯೂಸ್‌ ಕೊಟ್ಟಿದೆ.

ಈ ಯೋಜನೆಯ ಮೂಲಕ ಕರ್ನಾಟಕ ಸಾರಿಗೆ ಇಲಾಖೆಯ ನಾಲ್ಕು ವಿಭಾಗದಲ್ಲಿನ ಸಾಮಾನ್ಯ ಬಸ್ಸುಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದಾಗಿದೆ.

ಹೌದು, ಕರ್ನಾಟಕ ರಾಜ್ಯದಲ್ಲಿ ಸರಕಾರಿ ಬಸ್ಸುಗಳಲ್ಲಿ ಪ್ರಯಾಣಿಸುವ ಮಹಿಳೆಯರ ಸಂಖ್ಯೆಯಲ್ಲಿ ಬಾರೀ ಏರಿಕೆ ಕಂಡಿದೆ. ಇದೇ ಕಾರಣದಿಂದಲೇ ರಾಜ್ಯ ಸರಕಾರ ಹೊಸ ಯೋಜನೆಯೊಂದನ್ನು ಜಾರಿಗೆ ತರಲು ಮುಂದಾಗಿದೆ.

ಸರಕಾರಿ ಬಸ್ಸುಗಳಲ್ಲಿ ನೂಕು ನುಗ್ಗಲು ತಪ್ಪಿಸುವ ಸಲುವಾಗಿಯೇ ಕರ್ನಾಟಕದಲ್ಲಿ ಇನ್ಮುಂದೆ ಮಹಿಳೆಯರಿಗೆ ಪ್ರತ್ಯೇಕ ಬಸ್‌ ರಸ್ತೆಗೆ ಇಳಿಯಲಿವೆ. ಬಿಎಂಟಿಸಿ ಈಗಾಗಲೇ ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಮಹಿಳೆಯರಿಗಾಗಿಯೇ ಪ್ರತ್ಯೇಕ ಬಸ್ಸುಗಳನ್ನು ರಸ್ತೆ ಇಳಿಸಿದೆ.

ರಾಜ್ಯ ಸರಕಾರ ಈಗಾಗಲೇ ಸಾವಿರಕ್ಕೂ ಅಧಿಕ ಹೊಸ ಬಸ್ಸುಗಳನ್ನು ಬುಕ್‌ ಮಾಡಿದ್ದು, ಮುಂದೆ ಕರ್ನಾಟಕದ ನಾಲ್ಕು ಸಾರಿಗೆ ನಿಗಮಗಳ ಬಸ್ಸುಗಳಲ್ಲಿ ಮಹಿಳೆಯರು ಪ್ರತ್ಯೇಕವಾಗಿ ಪ್ರಯಾಣಿಸಬಹುದಾಗಿದೆ.

ಈಗಾಗಲೇ ಪಿಂಕ್‌ ಬಸ್‌ ಯೋಜನೆ ರಾಜ್ಯದಲ್ಲಿ ಜಾರಿಗೆ ಬಂದಿದೆ. ಇದೀಗ ಸರಕಾರ ಮಹಿಳೆಯರಿಗೆ ಪ್ರತ್ಯೇಕ ಬಸ್‌ ವ್ಯವಸ್ಥೆ ಜಾರಿ ಮಾಡಲು ಮುಂದಾಗಿರುವುದರ ಬೆನ್ನಲ್ಲೇ ಮಹಿಳೆಯರ ಬಸ್ಸುಗಳು ಪಿಂಕ್‌ ಬಣ್ಣಕ್ಕೆ ತಿರುಗಲಿವೆ. ಸರಕಾರ ಈಗಾಗಲೇ ಪಿಂಕ್‌ ಬಸ್‌ಗಳನ್ನು ಓಡಿಸಲು ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಮಾಡಿಕೊಳ್ಳುತ್ತಿದೆ.

ನಿತ್ಯವೂ ಸರಕಾರಿ ಬಸ್ಸುಗಳಲ್ಲಿ ಪ್ರಯಾಣಿಸುವ ಸುಮಾರು 60 ರಿಂದ 65 ಲಕ್ಷ ಮಹಿಳೆಯರಿಗಾಗಿ ಪಿಂಕ್‌ ಬಸ್‌ ರಸ್ತೆ ಇಳಿಯಲಿದೆ. ಇದರಿಂದಾಗಿ ನಿತ್ಯವೂ ಕೆಲಸ ಕಾರ್ಯಕ್ಕೆ ತೆರಳುವ ಮಹಿಳೆಯರು ಆರಾಮದಾಯಕವಾಗಿ ಪ್ರಯಾಣಿಸ ಬಹುದಾಗಿದೆ.

andolanait

Recent Posts

ಬ್ರೇಕ್‌ಫಾಸ್ಟ್‌ ಮೀಟಿಂಗ್:‌ ಸಿದ್ದರಾಮಯ್ಯರನ್ನು ತಬ್ಬಿ ಕಾಲಿಗೆ ಬಿದ್ದ ಡಿಸಿಎಂ ಡಿಕೆಶಿ

ಬೆಂಗಳೂರು: ಇಂದು ಬೆಳಿಗ್ಗೆ ಉಪಹಾರಕ್ಕೆ ಕಾವೇರಿ ನಿವಾಸಕ್ಕೆ ಆಗಮಿಸಿದ ಡಿ.ಕೆ.ಶಿವಕುಮಾರ್‌ ಅವರು ಸಿದ್ದರಾಮಯ್ಯರನ್ನು ತಬ್ಬಿಕೊಂಡು ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ.…

14 mins ago

ಓದುಗರ ಪತ್ರ: ತಡೆಯಲಿ ಸರ್ಕಾರ!

ತಡೆಯಲಿ ಸರ್ಕಾರ! ಏರುತ್ತಲೇ ಇದೆ ಇಂಧನ ಬೆಲೆ ಇಳಿಯುತ್ತಲೇ ಇದೆ ಮಾನವ ಬೆಲೆ! ಈ ಪರಿಯ ಹಾವು-ಏಣಿ ಆಟದಲಿ ಅಧೋಗತಿಗೆ…

26 mins ago

ಓದುಗರ ಪತ್ರ: ಬಿಪಿಎಲ್ ಆದಾಯ ಮಿತಿ ಹೆಚ್ಚಿಸಿ

ರಾಜ್ಯಾದ್ಯಂತ ಹೊಸ ಬಿಪಿಎಲ್ ಕಾರ್ಡ್‌ಗಾಗಿ ಸಲ್ಲಿಕೆಯಾಗಿರುವ ಮೂರು ಲಕ್ಷ ಅರ್ಜಿಗಳು ನಾಲ್ಕು ವರ್ಷಗಳಿಂದ ವಿಲೇವಾರಿಯಾಗದೆ ಬಾಕಿ ಉಳಿದಿರುವುದು ಬೇಸರದ ಸಂಗತಿ.…

28 mins ago

ಓದುಗರ ಪತ್ರ: ರಸ್ತೆಗೆ ಡಾಂಬರೀಕರಣ ಮಾಡಿ

ಚಾಮರಾಜನಗರ ಜಿಲ್ಲೆಯ ಮರಿಯಾಲ ಗ್ರಾಮದ ಪ್ರಮುಖ ರಸ್ತೆಯು ಹಾಳಾಗಿದೆ. ಈ ರಸ್ತೆಯು ಕೆಲ್ಲಂಬಳ್ಳಿ, ಕಸ್ತೂರು ಮೂಲಕ ವಿವಿಧ ಗ್ರಾಮಗಳ ಮೂಲಕ…

29 mins ago

ಓದುಗರ ಪತ್ರ: ವಿಷಯದ ಗಂಭೀರತೆ ಮರೆತ ಪೊಲೀಸರು

ತಮಿಳುನಾಡಿನಲ್ಲಿ, ಕಳೆದ ಕೆಲವು ದಿನಗಳ ಹಿಂದೆ, ೧೦ ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಆಕೆಯನ್ನು ಕೊಲೆಗೈದ ವಿಷಯಕ್ಕೆ ಸಂಬಂಧಿಸಿದಂತೆ…

31 mins ago

ಓದುಗರ ಪತ್ರ: ಇಂಧನದ ಮೇಲಿನ ತೆರಿಗೆ ಇಳಿಸಿ

ಅಮೆರಿಕ -ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಇರಾನ್ ಹಾರ್ಮುಜ್ ಜಲಸಂಽಯನ್ನು ಮುಚ್ಚಿದ್ದರಿಂದಾಗಿ ಕಚ್ಚಾತೈಲದ ಆಮದು ಪ್ರಮಾಣವು…

36 mins ago