ರಾಜ್ಯ

ಮಹಿಳೆಯರಿಗಾಗಿ ರಸ್ತೆಗಿಳಿಯಲಿದೆ ʼಪಿಂಕ್‌ ಬಸ್‌ʼ !

ಬೆಂಗಳೂರು : ಈಗಾಗಲೇ 295 ಕೋಟಿ ಮಹಿಳೆಯರು ಕರ್ನಾಟಕ ಸಾರಿಗೆ ಇಲಾಖೆಯ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಿದ್ದಾರೆ.
ಈ ನಡುವಲ್ಲೇ ಸರಕಾರ ಮಹಿಳೆಯರಿಗಾಗಿ ಮತ್ತೊಂದು ಗುಡ್‌ನ್ಯೂಸ್‌ ಕೊಟ್ಟಿದೆ.

ಈ ಯೋಜನೆಯ ಮೂಲಕ ಕರ್ನಾಟಕ ಸಾರಿಗೆ ಇಲಾಖೆಯ ನಾಲ್ಕು ವಿಭಾಗದಲ್ಲಿನ ಸಾಮಾನ್ಯ ಬಸ್ಸುಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದಾಗಿದೆ.

ಹೌದು, ಕರ್ನಾಟಕ ರಾಜ್ಯದಲ್ಲಿ ಸರಕಾರಿ ಬಸ್ಸುಗಳಲ್ಲಿ ಪ್ರಯಾಣಿಸುವ ಮಹಿಳೆಯರ ಸಂಖ್ಯೆಯಲ್ಲಿ ಬಾರೀ ಏರಿಕೆ ಕಂಡಿದೆ. ಇದೇ ಕಾರಣದಿಂದಲೇ ರಾಜ್ಯ ಸರಕಾರ ಹೊಸ ಯೋಜನೆಯೊಂದನ್ನು ಜಾರಿಗೆ ತರಲು ಮುಂದಾಗಿದೆ.

ಸರಕಾರಿ ಬಸ್ಸುಗಳಲ್ಲಿ ನೂಕು ನುಗ್ಗಲು ತಪ್ಪಿಸುವ ಸಲುವಾಗಿಯೇ ಕರ್ನಾಟಕದಲ್ಲಿ ಇನ್ಮುಂದೆ ಮಹಿಳೆಯರಿಗೆ ಪ್ರತ್ಯೇಕ ಬಸ್‌ ರಸ್ತೆಗೆ ಇಳಿಯಲಿವೆ. ಬಿಎಂಟಿಸಿ ಈಗಾಗಲೇ ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಮಹಿಳೆಯರಿಗಾಗಿಯೇ ಪ್ರತ್ಯೇಕ ಬಸ್ಸುಗಳನ್ನು ರಸ್ತೆ ಇಳಿಸಿದೆ.

ರಾಜ್ಯ ಸರಕಾರ ಈಗಾಗಲೇ ಸಾವಿರಕ್ಕೂ ಅಧಿಕ ಹೊಸ ಬಸ್ಸುಗಳನ್ನು ಬುಕ್‌ ಮಾಡಿದ್ದು, ಮುಂದೆ ಕರ್ನಾಟಕದ ನಾಲ್ಕು ಸಾರಿಗೆ ನಿಗಮಗಳ ಬಸ್ಸುಗಳಲ್ಲಿ ಮಹಿಳೆಯರು ಪ್ರತ್ಯೇಕವಾಗಿ ಪ್ರಯಾಣಿಸಬಹುದಾಗಿದೆ.

ಈಗಾಗಲೇ ಪಿಂಕ್‌ ಬಸ್‌ ಯೋಜನೆ ರಾಜ್ಯದಲ್ಲಿ ಜಾರಿಗೆ ಬಂದಿದೆ. ಇದೀಗ ಸರಕಾರ ಮಹಿಳೆಯರಿಗೆ ಪ್ರತ್ಯೇಕ ಬಸ್‌ ವ್ಯವಸ್ಥೆ ಜಾರಿ ಮಾಡಲು ಮುಂದಾಗಿರುವುದರ ಬೆನ್ನಲ್ಲೇ ಮಹಿಳೆಯರ ಬಸ್ಸುಗಳು ಪಿಂಕ್‌ ಬಣ್ಣಕ್ಕೆ ತಿರುಗಲಿವೆ. ಸರಕಾರ ಈಗಾಗಲೇ ಪಿಂಕ್‌ ಬಸ್‌ಗಳನ್ನು ಓಡಿಸಲು ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಮಾಡಿಕೊಳ್ಳುತ್ತಿದೆ.

ನಿತ್ಯವೂ ಸರಕಾರಿ ಬಸ್ಸುಗಳಲ್ಲಿ ಪ್ರಯಾಣಿಸುವ ಸುಮಾರು 60 ರಿಂದ 65 ಲಕ್ಷ ಮಹಿಳೆಯರಿಗಾಗಿ ಪಿಂಕ್‌ ಬಸ್‌ ರಸ್ತೆ ಇಳಿಯಲಿದೆ. ಇದರಿಂದಾಗಿ ನಿತ್ಯವೂ ಕೆಲಸ ಕಾರ್ಯಕ್ಕೆ ತೆರಳುವ ಮಹಿಳೆಯರು ಆರಾಮದಾಯಕವಾಗಿ ಪ್ರಯಾಣಿಸ ಬಹುದಾಗಿದೆ.

andolanait

Recent Posts

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

5 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

5 hours ago

ಓದುಗರ ಪತ್ರ: ಬರ…ಅಬ್ಬರ !

ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…

5 hours ago

ಓದುಗರ ಪತ್ರ: ಪರೀಕ್ಷಾ ವ್ಯವಸ್ಥೆ ಸಮಗ್ರ ಸುಧಾರಣೆ ಅತ್ಯಗತ್ಯ

ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…

5 hours ago

ಆರ್‌ಟಿಇ; ಮಕ್ಕಳು ಅವಕಾಶ ವಂಚಿತರಾಗಬಾರದು

ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…

5 hours ago

ಕೋವಿಡ್: ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಕಟ್ಟೆಚ್ಚರ

ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…

5 hours ago