ಬೆಂಗಳೂರು: ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ಬರದಿದ್ದರೆ ಪ್ಲಾನ್ ಬಿ ಸಿದ್ದವಾಗಿದೆ ಎಂದು ಸಚಿವ ಆರ್ ಅಶೋಕ್ ಹೇಳಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಇನ್ನೊಂದು ವರ್ಷದಲ್ಲಿ ಪಾರ್ಲಿಮೆಂಟ್ ಚುನಾವಣೆ ಇದೆ. ಅದನ್ನು ಕೂಡ ಗಮನದಲ್ಲಿಟ್ಟುಕೊಂಡು ಪೂರ್ಣ ಬಹುಮತದಲ್ಲಿ ಈ ಬಾರಿ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ತಯಾರಿ ಮಾಡುತ್ತಿದ್ದೇವೆ. ಅಕಸ್ಮಾತ್ ಬಂದಿಲ್ಲವೆಂದಾದರೆ ಬಿ ಫಾರ್ಮ್ಯುಲಾ ಕೂಡ ರೆಡಿಯಿದೆ ಎಂದರು.
ಸಹಜವಾಗಿ ರಾಜಕೀಯದಲ್ಲಿ ಇಂತಹ ಪ್ರಕ್ರಿಯೆಗಳು ನಡೆಯುತ್ತಿರುತ್ತವೆ. ನಾವು ರಾಜಕೀಯ ಪಕ್ಷದವರು, ಸನ್ಯಾಸಿಗಳಲ್ಲ. ಬಿ ಪ್ಲಾನ್ ಪ್ರಕಾರ ಚುನಾವಣಾ ತಂತ್ರಗಾರಿಕೆಯನ್ನು ಸಿದ್ಧಮಾಡಿದ್ದೇವೆ ಎಂದರು.