ಬೆಳಗಾವಿ : ಶಕ್ತಿ ಯೋಜನೆಯಿಂದ ನಷ್ಟದಲ್ಲಿದ್ದೇವೆ ಈಗಾಗಿ ಬಸ್ ಟಿಕೆಟ್ ದರ ಹೆಚ್ಚಿಸುವ ಚಿಂತನೆಯಲ್ಲಿದ್ದೇವೆ ಎಂದು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ರಾಜು ಕಾಗೆ ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆ ನಷ್ಟದಲ್ಲಿದೆ. ಡಿಸೇಲ್ ಹಾಗೂ ಬಸ್ ಸ್ಪೇರ್ ಪಾರ್ಟ್ಸ್ ಗಳ ದರ ಕೂಡ ಹೆಚ್ಚಾಗಿದೆ. ಕಳೆದ ೧೦ ವರ್ಷಗಳಿಂದ ಟಿಕೆಟ್ ದರ ಏರಿಕೆ ಮಾಡಿಲ್ಲ. ಶಕ್ತಿಯೋಜನೆಯಿಂದ ನಾವು ಸದ್ಯಕ್ಕೆ ನಷ್ಟ ಅನುಭವಿಸುತ್ತಿದ್ದೇವೆ. ನಷ್ಟದಲ್ಲಿದ್ದರೂ ಕೂಡ ನಾವು ನಡೆಸಿಕೊಂಡು ಹೋಗುತ್ತಿದ್ದೇವೆ. ಈಗಾಗಿ ಟಿಕೆಟ್ ದರ ಏರಿಕೆ ಮಾಡಲು ಚಿಂತಿಸಿದ್ದೇವೆ ಎಂದು ತಿಳಿಸಿದರು.
ಅಲ್ಲದೆ ನಿಗಮದ ಆಸ್ತಿಗಳನ್ನ ಪರಭಾರೆ ಮಾಡ್ತೀವಿ. ಸಂಸ್ಥೆಗೆ ಸೇರಿದ ಹಳೆ ಬಿಲ್ಡಿಂಗ್ ನವೀಕರಿಸಿ ಬಾಡಿಗೆ ಕೊಡುತ್ತೇವೆ ಎಂದು ಮಾಹಿತಿ ನೀಡಿದರು.





