ಬೆಳಗಾವಿ : ಶಕ್ತಿ ಯೋಜನೆಯಿಂದ ನಷ್ಟದಲ್ಲಿದ್ದೇವೆ ಈಗಾಗಿ ಬಸ್ ಟಿಕೆಟ್ ದರ ಹೆಚ್ಚಿಸುವ ಚಿಂತನೆಯಲ್ಲಿದ್ದೇವೆ ಎಂದು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ರಾಜು ಕಾಗೆ ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆ ನಷ್ಟದಲ್ಲಿದೆ. ಡಿಸೇಲ್ ಹಾಗೂ ಬಸ್ ಸ್ಪೇರ್ ಪಾರ್ಟ್ಸ್ ಗಳ ದರ ಕೂಡ ಹೆಚ್ಚಾಗಿದೆ. ಕಳೆದ ೧೦ ವರ್ಷಗಳಿಂದ ಟಿಕೆಟ್ ದರ ಏರಿಕೆ ಮಾಡಿಲ್ಲ. ಶಕ್ತಿಯೋಜನೆಯಿಂದ ನಾವು ಸದ್ಯಕ್ಕೆ ನಷ್ಟ ಅನುಭವಿಸುತ್ತಿದ್ದೇವೆ. ನಷ್ಟದಲ್ಲಿದ್ದರೂ ಕೂಡ ನಾವು ನಡೆಸಿಕೊಂಡು ಹೋಗುತ್ತಿದ್ದೇವೆ. ಈಗಾಗಿ ಟಿಕೆಟ್ ದರ ಏರಿಕೆ ಮಾಡಲು ಚಿಂತಿಸಿದ್ದೇವೆ ಎಂದು ತಿಳಿಸಿದರು.
ಅಲ್ಲದೆ ನಿಗಮದ ಆಸ್ತಿಗಳನ್ನ ಪರಭಾರೆ ಮಾಡ್ತೀವಿ. ಸಂಸ್ಥೆಗೆ ಸೇರಿದ ಹಳೆ ಬಿಲ್ಡಿಂಗ್ ನವೀಕರಿಸಿ ಬಾಡಿಗೆ ಕೊಡುತ್ತೇವೆ ಎಂದು ಮಾಹಿತಿ ನೀಡಿದರು.
ಸುಂಕ ಕದನಕೆ ತೆರೆ! ಕೊನೆಗೂ ಭಾರತ ಅಮೆರಿಕ ಜಂಟಿಯಾಗಿ ಒಪ್ಪಂದಕೆ ಬಂದಿವೆ ಆಮದು ಸುಂಕ ಕಡಿತಗೊಳಿಸಲು ತೆರೆ ಬಿದ್ದಿದೆ ಸುಂಕ…
ನಂಜನಗೂಡು ತಾಲ್ಲೂಕಿನ ಕಾರ್ಯ ಗ್ರಾಮದಲ್ಲಿ ರಸ್ತೆಯ ಪಕ್ಕದಲ್ಲೇ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಿದೆ. ಶಾಲೆಗೆ ಸುತ್ತುಗೋಡೆ ಇಲ್ಲದ ಕಾರಣ ಶಾಲೆಯಿಂದ…
ಮೈಸೂರಿನ ಜಿಲ್ಲಾ ನ್ಯಾಯಾಲಯಗಳಿಗೆ ಸಾಕಷ್ಟು ಬಸ್ ಸೌಲಭ್ಯವಿಲ್ಲದೆ ನ್ಯಾಯಾಲಯದ ಕಲಾಪಗಳಿಗೆ ಬರುವ ವಕೀಲರು ಹಾಗೂ ಕಕ್ಷಿದಾರರಿಗೆ ತೀವ್ರ ತೊಂದರೆಯಾಗಿದೆ. ನಗರ…
ಬೈಕ್ ವ್ಹೀಲಿಂಗ್ ನಿಷೇಧಿಸಿದ್ದರೂ ಮೈಸೂರು ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಬೈಕ್ ವ್ಹೀಲಿಂಗ್ ಮಾಡುವವರ ಸಂಖ್ಯೆ ಹೆಚ್ಚಾಗಿರುವುದು ಆತಂಕಕಾರಿ ಸಂಗತಿಯಾಗಿದೆ. ಯುವ…
ಮೈಸೂರಿನ ಮಹಾರಾಣಿ ಮಹಿಳಾ ಕಲಾ ಕಾಲೇಜಿನಲ್ಲಿ ಸಾವಿರಾರು ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿದ್ದಾರೆ. ತರಗತಿಗಳು ಬೆಳಿಗ್ಗೆ ೮ ಗಂಟೆಗೆ ಪ್ರಾರಂಭವಾಗುವುದರಿಂದ ಬಹುತೇಕ…
‘ಪಿ.ಆರ್.ಸಿಗ್ನಲ್’ ಕಂಪೆನಿ ಸ್ಥಾಪಿಸಿ ವಿಶೇಷಚೇತನರಿಗೆ ನೆರವು ೩೪ ವರ್ಷ ಪ್ರಾಯದ ಸುಮಿತ್ ಅಗರ್ವಾಲ್ ಏಳನೇ ತಿಂಗಳಲ್ಲಿ ಅವಧಿಗೆ ಮೊದಲೇ ಹುಟ್ಟಿದವರು.…