darshan (2)
ಬೆಂಗಳೂರು: ದಯವಿಟ್ಟು ನನಗೆ ವಿಷ ಕೊಡಿ ಎಂದು ನಟ ದರ್ಶನ್ ಕೋರ್ಟ್ಗೆ ಮನವಿ ಮಾಡಿದ್ದಾರೆ.
ಜೈಲಿನಲ್ಲಿ ನಿತ್ಯ ನರಕ ದರ್ಶನ ಆಗುತ್ತಿದೆ. ಒಂದು ಮನವಿ ಇದೆ. ಬಿಸಿಲು ನೋಡಿ ಒಂದು ತಿಂಗಳಾಯಿತು. ದಯವಿಟ್ಟು ನನಗೆ ಸ್ವಲ್ಪ ವಿಷ ಕೊಡಿ ಎಂದು ಕೋರ್ಟ್ಗೆ ನಟ ದರ್ಶನ್ ಮನವಿ ಮಾಡಿದ್ದಾರೆ.
ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯದಲ್ಲಿ ಇಂದು ವಿಚಾರಣೆ ನಡೆಯಿತು. ನಟ ದರ್ಶನ್ ದಿಂಬು, ಹಾಸಿಗೆ ನೀಡುವಂತೆ ಕೋರ್ಟ್ಗೆ ಮನವಿ ಸಲ್ಲಿಸಿದ್ದರು. ಈ ವಿಚಾರಣೆ ನಡೆಯುವ ವೇಳೆ ನಟ ದರ್ಶನ್ ನ್ಯಾಯಾಧೀಶರಿಗೆ ನನಗೆ ದಯವಿಟ್ಟು ವಿಷ ನೀಡಿ ಎಂದು ಮನವಿ ಸಲ್ಲಿಸಿದರು. ಆಗ ಜಡ್ಜ್ ಹಾಗೆಲ್ಲಾ ಮಾತನಾಡಬಾರದು ಎಂದು ತಿಳಿ ಹೇಳಿದರು.
ಇಂದು ಮಧ್ಯಾಹ್ನ 3 ಗಂಟೆಗೆ ನಟ ದರ್ಶನ್ ಮನವಿಯ ಆದೇಶವನ್ನು ಕೋರ್ಟ್ ಪ್ರಕಟಿಸಲಿದ್ದು, ಮನೆ ಊಟ, ದಿಂಬು, ಹಾಸಿಗೆ ಕೋರಿ ನಟ ದರ್ಶನ್ ಕೋರ್ಟ್ಗೆ ಮನವಿ ಸಲ್ಲಿಸಿದ್ದರು.
ಇನ್ನು ನಟ ದರ್ಶನ್ರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡುವ ಆದೇಶ ಕೂಡ ಇಂದು ಕೋರ್ಟ್ ಪ್ರಕಟಿಸಲಿದೆ.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…