ರಾಜ್ಯ

ದಯವಿಟ್ಟ ನಮ್ಮ ಪಾಡಿಗೆ ನಮ್ಮನ್ನು ಬಿಟ್ಟುಬಿಡಿ : ಇಬ್ರಾಹಿಂ !

ಬೆಂಗಳೂರು : ದಯಮಾಡಿ ಯಾರು ನಮ್ಮ ಸಮಾಜದ ಹೆಸರನ್ನು ಉಪಯೋಗ ಮಾಡಿಕೊಳ್ಳಲೇ ಬೇಡಿ ಎಂದು ಹಿರಿಯ ರಾಜಕಾರಣಿ ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ.

ನಗರದ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ರಾಜಕೀಯ ಪಕ್ಷಗಳು ಅಲ್ಪಸಂಖ್ಯಾತ ಹಾಗೂ ಹಿಂದುಳಿದವರ್ಗಗಳ ಹೆಸರನ್ನು ಉಪಯೋಗಿಸಿಕೊಳ್ಳಬೇಡಿ ನಮ್ಮ ಪಾಡಿಗೆ ನಮ್ಮನ್ನು ಬಿಟ್ಟುಬಿಡಿ ಎಂದು ಹೇಳಿದ್ದಾರೆ.

ಅದರಲ್ಲೂ ದೇಶದ ಎರಡು ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷದವರು ನಮ್ಮಸಮುದಾಯದ ಹೆಸರು ಬಳಿಸಿಕೊಳ್ಳಬೇಡಿ ಎಂದರು.

ಓಲೈಕೆ ಬಗ್ಗೆ ಮಾತನಾಡುತ್ತಾರೆ, ಸಾಚಾರ್‌ ಕಮಿಷನ್‌ ಬಂದು ೭೨ ವರ್ಷವಾಗಿದೆ. ಅವರ ವರದಿ ಪ್ರಕಾರ ದಲಿತರಿಗಿಂತ ಅಲ್ಪಸಂಖ್ಯಾತರು ಕೆಟ್ಟ ಪರಿಸ್ಥಿತಿಯಲ್ಲಿದ್ದಾರೆ ಎಂದು ಹೇಳಿದೆ. ಆದರೂ ನಾವು ಯಾವುದೇ ಚಳುವಳಿ ಮಾಡಿಲ್ಲ ಎಂದರು.

ದೇಶದಲ್ಲಿ ಶಾಂತಿ ಸೌಹಾಧತೆ ಇರಬೇಕು ಎಂಬ ಕಾರಣಕ್ಕೆ ದೇಶದಲ್ಲಿ ಎಂತೆಂತಾ ಕಾನೂನುಗಳು ಬಂದರೂ ತಲೆ ಬಾಗಿ ಹೋಗುತ್ತಿದ್ದೇವೆ ಎಂದರು.

ಇದನ್ನು ಅರ್ಥ ಮಾಡಿಕೊಂಡು ಪ್ರಧಾನಿ ಮೋದಿ ಅವರು ಈಗಲಾದರು ಒಂದು ಸ್ಪಷ್ಠನೆ ನೀಡುತ್ತಾರೆ ಎಂಬ ವಿಶ್ವಾಸ ನನ್ನಲಿದೆ ಎಂದು ಅಭಿಪ್ರಾಯಪಟ್ಟರು.

ಮೋದಿಗೆ ಹತಾಷೆ ಇದೆ : ಈ ಬಾರಿ ಚುನಾವಣೆಯಲ್ಲಿ ಗೆದ್ದು ಮತ್ತೊಮ್ಮೆ ಮೋದಿ ಅವರೆ ಅಧಿಕಾರಕ್ಕೆ ಬರುತ್ತಾರೆ. ಆದರೆ ಅವರು ಊಹಿಸಿದಷ್ಟು ಬಹುಮತ ಬರುವುದಿಲ್ಲ ಎಂಬ ಹತಾಷೆ ಮೋದಿ ಅವರಿಗಿದೆ ಎಂದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಟಿ-20 ವಿಶ್ವಕಪ್‌ | ಸ್ಕಾಟ್ಲೆಂಡ್‌ ವಿರುದ್ಧ ಇಂಗ್ಲೆಂಡ್‌ 5 ವಿಕೆಟ್‌ ಗೆಲುವು

ಕೋಲ್ಕತ್ತ : ಟಿ-20 ವಿಶ್ವಕಪ್‌ನ ಲೀಗ್ ಹಂತದ ಸಿ ಗುಂಪಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಇಂಗ್ಲೆಂಡ್ ತಂಡವು 5 ವಿಕೆಟ್‌ಗಳ…

11 hours ago

ಡಿಕೆಶಿ ಮುಖ್ಯಮಂತ್ರಿ ಆಗೇ ಆಗ್ತರೆ : ಶಾಸಕ ಗಣಿಗ ರವಿಕುಮಾರ್‌

ಮಂಡ್ಯ: ಡಿ.ಕೆ. ಶಿವಕುಮಾರ್ ಅವರು ಅತಿ ಶೀಘ್ರದಲ್ಲೇ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪಿ.ರವಿಕುಮಾರ್‌…

11 hours ago

ಮೈಸೂರು | ಶಿವರಾತ್ರಿಗೆ ಎಲ್ಲೆಡೆ ಸಿದ್ಧತೆ

ಮೈಸೂರು : ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಮಹಾ ಶಿವರಾತ್ರಿ ಆಚರಣೆಗೆ ಶಿವ ದೇವಾಲಯಗಳು ಸಂಪೂರ್ಣ ಸಜ್ಜಾಗಿವೆ. ನಗರದ ಪ್ರಮುಖ…

11 hours ago

ಮೈಸೂರು | 4 ಲಕ್ಷ ಮೌಲ್ಯದ ಡ್ರಗ್ಸ್ ವಶ‌ ; ಆರೋಪಿ ಬಂಧನ

ಮೈಸೂರು : ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಮಂಡಿ ಪೊಲೀಸ್ ಠಾಣಾ ಅಧಿಕಾರಿಗಳು ನಡೆಸಿದ…

11 hours ago

2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ; ಕಂದಾಯ ಇಲಾಖೆಯಲ್ಲಿ ಕ್ರಾಂತಿಕಾರಿ ಪ್ರಗತಿ : ಸಿಎಂ ಮೆಚ್ಚುಗೆ

ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ…

13 hours ago

ರಾಜ್ಯದ 22 ಸಾವಿರಕ್ಕೂ ಹೆಚ್ಚು ರೈತರಿಗೆ ಪಿಎಂ-ಕಿಸಾನ್ ಹಣ ಬಿಡುಗಡೆ

​ಬೆಂಗಳೂರು : ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ…

14 hours ago