ಬೆಂಗಳೂರು : ದಯಮಾಡಿ ಯಾರು ನಮ್ಮ ಸಮಾಜದ ಹೆಸರನ್ನು ಉಪಯೋಗ ಮಾಡಿಕೊಳ್ಳಲೇ ಬೇಡಿ ಎಂದು ಹಿರಿಯ ರಾಜಕಾರಣಿ ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ.
ನಗರದ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ರಾಜಕೀಯ ಪಕ್ಷಗಳು ಅಲ್ಪಸಂಖ್ಯಾತ ಹಾಗೂ ಹಿಂದುಳಿದವರ್ಗಗಳ ಹೆಸರನ್ನು ಉಪಯೋಗಿಸಿಕೊಳ್ಳಬೇಡಿ ನಮ್ಮ ಪಾಡಿಗೆ ನಮ್ಮನ್ನು ಬಿಟ್ಟುಬಿಡಿ ಎಂದು ಹೇಳಿದ್ದಾರೆ.
ಅದರಲ್ಲೂ ದೇಶದ ಎರಡು ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದವರು ನಮ್ಮಸಮುದಾಯದ ಹೆಸರು ಬಳಿಸಿಕೊಳ್ಳಬೇಡಿ ಎಂದರು.
ಓಲೈಕೆ ಬಗ್ಗೆ ಮಾತನಾಡುತ್ತಾರೆ, ಸಾಚಾರ್ ಕಮಿಷನ್ ಬಂದು ೭೨ ವರ್ಷವಾಗಿದೆ. ಅವರ ವರದಿ ಪ್ರಕಾರ ದಲಿತರಿಗಿಂತ ಅಲ್ಪಸಂಖ್ಯಾತರು ಕೆಟ್ಟ ಪರಿಸ್ಥಿತಿಯಲ್ಲಿದ್ದಾರೆ ಎಂದು ಹೇಳಿದೆ. ಆದರೂ ನಾವು ಯಾವುದೇ ಚಳುವಳಿ ಮಾಡಿಲ್ಲ ಎಂದರು.
ದೇಶದಲ್ಲಿ ಶಾಂತಿ ಸೌಹಾಧತೆ ಇರಬೇಕು ಎಂಬ ಕಾರಣಕ್ಕೆ ದೇಶದಲ್ಲಿ ಎಂತೆಂತಾ ಕಾನೂನುಗಳು ಬಂದರೂ ತಲೆ ಬಾಗಿ ಹೋಗುತ್ತಿದ್ದೇವೆ ಎಂದರು.
ಇದನ್ನು ಅರ್ಥ ಮಾಡಿಕೊಂಡು ಪ್ರಧಾನಿ ಮೋದಿ ಅವರು ಈಗಲಾದರು ಒಂದು ಸ್ಪಷ್ಠನೆ ನೀಡುತ್ತಾರೆ ಎಂಬ ವಿಶ್ವಾಸ ನನ್ನಲಿದೆ ಎಂದು ಅಭಿಪ್ರಾಯಪಟ್ಟರು.
ಮೋದಿಗೆ ಹತಾಷೆ ಇದೆ : ಈ ಬಾರಿ ಚುನಾವಣೆಯಲ್ಲಿ ಗೆದ್ದು ಮತ್ತೊಮ್ಮೆ ಮೋದಿ ಅವರೆ ಅಧಿಕಾರಕ್ಕೆ ಬರುತ್ತಾರೆ. ಆದರೆ ಅವರು ಊಹಿಸಿದಷ್ಟು ಬಹುಮತ ಬರುವುದಿಲ್ಲ ಎಂಬ ಹತಾಷೆ ಮೋದಿ ಅವರಿಗಿದೆ ಎಂದರು.
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು…
ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್ನಿಂದ ಹೊಲಸು ನೀರು…
ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…
ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…
ಎಚ್.ಎಸ್.ದಿನೇಶ್ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…