ಮಡಿಕೇರಿ: ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಶನಿವಾರ ತುಮಕೂರಿನ ಚುನಾವಣಾ ಪ್ರಚಾರ ವೇಳೆ ರಾಜ್ಯ ಕಾಂಗ್ರೆಸ್ ಜಾರಿಗೆ ತಂದಿರುವ ಗ್ಯಾರಂಟಿಗಳಿಂದ ಹಳ್ಳಿಯ ಹೆಣ್ಣು ಮಕ್ಕಳು ದಾರಿ ತಪ್ಪುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆಯನ್ನು ರಾಜ್ಯ ಕಾಂಗ್ರೆಸ್ ನಾಯಕರು ತೀವ್ರವಾಗಿ ಖಂಡಿಸಿದ್ದಾರೆ.
ಎಚ್.ಡಿ ಕುಮಾರಸ್ವಾಮಿಯವರ ಈ ಹೇಳಿಕೆ ಕೇವಲ ಸ್ತ್ರೀಯರಿಗೆ ಮಾತ್ರವಲ್ಲ, ಮಾನವ ಕುಲಕ್ಕೆ ಅವಮಾನ ಮಾಡಿದ್ದಾರೆ. ಇಂತಹ ವ್ಯಕ್ತಿಯನ್ನು ಎನ್ ಡಿ ಎ ಮೈತ್ರಿಕೂಟದಲ್ಲಿಟ್ಟುಕೊಳ್ಳುತ್ತೀರ ಎಂದು ಪ್ರಧಾನಿ ಮೋದಿ ಉತ್ತರಿಸಬೇಕು ಎಂದು ಶನಿವಾರ ಮಡಿಕೇರಿಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಒತ್ತಾಯಿಸಿದರು.
ಹೆಣ್ಣು ಮಕ್ಕಳಿಗೆ ಅವಮಾನ ಮಾಡುವಂತಹ ಇಂತಹ ಹೇಳಿಕೆಗೆ ನನಗೆ ಕುಮಾರಸ್ವಾಮಿಯಿಂದ ಸ್ಪಷ್ಟನೆ ಬೇಕಿಲ್ಲ. ಸ್ವತಃ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೇ ನೀಡಬೇಕು ಎಂದು ಆಗ್ರಹಿಸಿದರು.
ಈ ಹೇಳಿಕೆ ತಾಯಿ ಚಾಮುಂಡೇಶ್ವರಿಗೆ ಮಾಡಿದ ಅವಮಾನ. ಯಾರು ಲೆಕ್ಕ ಇಡದಿದ್ದರೂ ಕರ್ಮ ಲೆಕ್ಕ ಇಡುತ್ತದೆ ಎಂಬುದನ್ನು ಕುಮಮಾರಸ್ವಾಮಿ ಮರೆಯಬಾರದು. ಮುಂದಿನ ದಿನಗಳಲ್ಲಿ ಅವರು ಫಲ ಅನುಭವಿಸಲಿದ್ದಾರೆ ಎಂದು ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದರು.
ನವದೆಹಲಿ: ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್ಗೆ…
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…