ಮಡಿಕೇರಿ: ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಶನಿವಾರ ತುಮಕೂರಿನ ಚುನಾವಣಾ ಪ್ರಚಾರ ವೇಳೆ ರಾಜ್ಯ ಕಾಂಗ್ರೆಸ್ ಜಾರಿಗೆ ತಂದಿರುವ ಗ್ಯಾರಂಟಿಗಳಿಂದ ಹಳ್ಳಿಯ ಹೆಣ್ಣು ಮಕ್ಕಳು ದಾರಿ ತಪ್ಪುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆಯನ್ನು ರಾಜ್ಯ ಕಾಂಗ್ರೆಸ್ ನಾಯಕರು ತೀವ್ರವಾಗಿ ಖಂಡಿಸಿದ್ದಾರೆ.
ಎಚ್.ಡಿ ಕುಮಾರಸ್ವಾಮಿಯವರ ಈ ಹೇಳಿಕೆ ಕೇವಲ ಸ್ತ್ರೀಯರಿಗೆ ಮಾತ್ರವಲ್ಲ, ಮಾನವ ಕುಲಕ್ಕೆ ಅವಮಾನ ಮಾಡಿದ್ದಾರೆ. ಇಂತಹ ವ್ಯಕ್ತಿಯನ್ನು ಎನ್ ಡಿ ಎ ಮೈತ್ರಿಕೂಟದಲ್ಲಿಟ್ಟುಕೊಳ್ಳುತ್ತೀರ ಎಂದು ಪ್ರಧಾನಿ ಮೋದಿ ಉತ್ತರಿಸಬೇಕು ಎಂದು ಶನಿವಾರ ಮಡಿಕೇರಿಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಒತ್ತಾಯಿಸಿದರು.
ಹೆಣ್ಣು ಮಕ್ಕಳಿಗೆ ಅವಮಾನ ಮಾಡುವಂತಹ ಇಂತಹ ಹೇಳಿಕೆಗೆ ನನಗೆ ಕುಮಾರಸ್ವಾಮಿಯಿಂದ ಸ್ಪಷ್ಟನೆ ಬೇಕಿಲ್ಲ. ಸ್ವತಃ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೇ ನೀಡಬೇಕು ಎಂದು ಆಗ್ರಹಿಸಿದರು.
ಈ ಹೇಳಿಕೆ ತಾಯಿ ಚಾಮುಂಡೇಶ್ವರಿಗೆ ಮಾಡಿದ ಅವಮಾನ. ಯಾರು ಲೆಕ್ಕ ಇಡದಿದ್ದರೂ ಕರ್ಮ ಲೆಕ್ಕ ಇಡುತ್ತದೆ ಎಂಬುದನ್ನು ಕುಮಮಾರಸ್ವಾಮಿ ಮರೆಯಬಾರದು. ಮುಂದಿನ ದಿನಗಳಲ್ಲಿ ಅವರು ಫಲ ಅನುಭವಿಸಲಿದ್ದಾರೆ ಎಂದು ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದರು.
ಈ ನಡೆ ಶೋಷಿತ ಸಮುದಾಯಗಳ ಪ್ರಗತಿಗೆ ಸಹಕಾರಿ -ಟಿ.ಕೆ.ಹರೀಶ್ ಶಿಕ್ಷಣ ಕೇವಲ ವೈಯಕ್ತಿಕ ಬೆಳವಣಿಗೆಗೆ ಮಾತ್ರ ಸೀಮಿತವಾಗಿರಬಾರದು. ಅದು…
ಡಾ.ಎಂ.ಡಿ.ಉಮೇಶ್, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಮೈಸೂರು ವಿ.ವಿ ಬೆಳಗಾವಿ ಜಿಲ್ಲೆಯ ಹುದಲಿ ಗ್ರಾಮದಲ್ಲಿ ಬಾಲ ಕೃಷ್ಣ ಮತ್ತು ರಾಧಾಬಾಯಿ…
ಡಾಕ್ಟರ್ ಮೆಹತಾ ಮತ್ತು ನಾನು ಅವರ ಮಿತ್ರನ ಮನೆಗೆ ಹೋದೆವು. ಅವರು ನನ್ನ ವಿಷಯದಲ್ಲಿ ತುಂಬಾ ಕರುಣೆ ಮತ್ತು ಆದರವುಳ್ಳವರಾಗಿದ್ದರು.…
ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…
ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…