ಬೆಂಗಳೂರು : ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ ಅವರು ಸಲ್ಲಿಸಿದ್ದ ಮನವಿಗೆ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ.
ರಾಜ್ಯ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಡಿಸೆಂಬರ್ 17, 2025 ರಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಪತ್ರ ಬರೆದು, ತಾಂತ್ರಿಕ ಕಾರಣಗಳಿಂದ ರಾಜ್ಯದ ಸುಮಾರು 30,000ಕ್ಕೂ ಹೆಚ್ಚು ಅರ್ಹ ರೈತರು ಯೋಜನೆಯ ಲಾಭದಿಂದ ವಂಚಿತರಾಗುತ್ತಿರುವುದನ್ನು ಗಮನಕ್ಕೆ ತಂದಿದ್ದರು. ಕಳೆದ ವಾರ ನಡೆದ ಅಂತರರಾಷ್ಟ್ರೀಯ ವಾಣಿಜ್ಯ ಮೇಳಕ್ಕೆ ಕೇಂದ್ರ ಸಚಿವರು ಆಗಮಿಸಿದ್ದ ಸಂದರ್ಭದಲ್ಲಿಯೂ ಈ ವಿಚಾರವನ್ನು ಪ್ರಸ್ತಾಪಿಸಿ, ಮನವಿ ಮಾಡಿದ್ದರು. ಇದಕ್ಕೆ ಪೂರಕವಾಗಿ ಸ್ಪಂದಿಸಿರುವ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್, ರಾಜ್ಯ ಸರ್ಕಾರ ನೀಡಿರುವ ದೃಢೀಕರಣದ ಆಧಾರದ ಮೇಲೆ ಈಗಾಗಲೇ 22,000ಕ್ಕೂ ಹೆಚ್ಚು ಫಲಾನುಭವಿಗಳನ್ನು 22ನೇ ಕಂತಿನ ಪಾವತಿ ಪಟ್ಟಿಯಲ್ಲಿ ಸೇರಿಸಲಾಗಿದ್ದು, ಶೀಘ್ರದಲ್ಲೇ ಅವರಿಗೆ ಹಣ ಬಿಡುಗಡೆಯಾಗಲಿದೆ ಎಂದು ತಿಳಿಸಿದ್ದಾರೆ. ಉಳಿದ ಪ್ರಕರಣಗಳನ್ನು ರಾಜ್ಯ ಅಧಿಕಾರಿಗಳು ಪರಿಶೀಲಿಸಿ ದೃಢೀಕರಿಸಿದ ಕೂಡಲೇ ಅವರನ್ನೂ ಯೋಜನೆಯಡಿ ಸೇರಿಸಿಕೊಳ್ಳಲಾಗುವುದು ಎಂದು ಚೌಹಾಣ್ ಅವರು ತಮ್ಮ ಪತ್ರದಲ್ಲಿ ಭರವಸೆ ನೀಡಿದ್ದಾರೆ.
ಈ ಬೆಳವಣಿಗೆಯ ಕುರಿತು ಪ್ರತಿಕ್ರಿಯಿಸಿರುವ ಸಚಿವ ಎನ್. ಚಲುವರಾಯಸ್ವಾಮಿ ಅವರು, “ರಾಜ್ಯದ ರೈತರ ಹಿತದೃಷ್ಟಿಯಿಂದ ನಾವು ಸಲ್ಲಿಸಿದ ಮನವಿಯನ್ನು ಪುರಸ್ಕರಿಸಿ, ತಾಂತ್ರಿಕ ಅಡೆತಡೆಗಳನ್ನು ನಿವಾರಿಸಿ ರೈತರಿಗೆ ನ್ಯಾಯ ಒದಗಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ರಾಜ್ಯ ಸರ್ಕಾರದ ಪರವಾಗಿ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇನೆ,” ಎಂದು ತಿಳಿಸಿದ್ದಾರೆ. ಕೇಂದ್ರದ ಈ ಕ್ರಮದಿಂದಾಗಿ ಅರ್ಹ ರೈತರಿಗೆ ಸಮಯಕ್ಕೆ ಸರಿಯಾಗಿ ಆರ್ಥಿಕ ನೆರವು ಸಿಗುವಂತಾಗಿದ್ದು, ಬಾಕಿ ಇರುವ ಇತರ ರೈತರ ದಾಖಲೆಗಳ ಪರಿಶೀಲನೆಯನ್ನು ಶೀಘ್ರವಾಗಿ ಪೂರ್ಣಗೊಳಿಸಲು ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಅವರು ಇದೇ ಸಂದರ್ಭದಲ್ಲಿ ಸ್ಪಷ್ಟಪಡಿಸಿದ್ದಾರೆ.
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…