ರಾಜ್ಯ

ರೈತರ ನೆರವಿಗೆ ಕ್ರೆಡಲ್‌ನಿಂದ `ಪಿಎಂ ಕುಸುಮ್‌ ಬಿ’ ಸಹಾಯವಾಣಿ ಕೇಂದ್ರ ಸ್ಥಾಪನೆ

ಬೆಂಗಳೂರು : ಮಾಹಿತಿ ಕೊರತೆ ಅಥವಾ ತಾಂತ್ರಿಕ ತೊಂದರೆಗಳಿಂದಾಗಿ ಅರ್ಹ ರೈತರು ಕುಸುಮ್-ಬಿ ಯೋಜನೆಯಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತವು ನಾಗರಬಾವಿಯ ಕೇಂದ್ರ ಕಚೇರಿಯಲ್ಲಿ ಸಹಾಯವಾಣಿ ಕೇಂದ್ರ ಸ್ಥಾಪಿಸಿದೆ.

2025ರ ಡಿಸೆಂಬರ್‌ 23ರಿಂದ 2025ರ ಡಿಸೆಂಬರ್‌ 31ರವರೆಗೆ ಸಹಾಯವಾಣಿ ಕೇಂದ್ರ ಕಾರ್ಯನಿರ್ವಹಿಸಲಿದ್ದು, ಕುಸುಮ್‌ ಬಿ ಯೋಜನೆ ಕುರಿತಂತೆ ರೈತರು ತಮ್ಮ ಸಮಸ್ಯೆಗಳನ್ನು ದೂರವಾಣಿ ಕರೆಯ ಮೂಲಕ ಪರಿಹರಿಸಿಕೊಳ್ಳಬಹುದಾಗಿದೆ. ರಾಜ್ಯದ ಎಲ್ಲ ರೈತರು ಇದರ ನೆರವು ಪಡೆದುಕೊಳ್ಳಬಹುದಾಗಿದ್ದು, ಇದಕ್ಕಾಗಿ ಕ್ರೆಡಲ್‌ ಸಿಬ್ಬಂದಿ, ಪ್ರತಿದಿನ ಬೆಳಿಗ್ಗೆ 6.00 ರಿಂದ ರಾತ್ರಿ 9.00ರವರೆಗೆ ರಜೆ ಇಲ್ಲದೆ ಎರಡು ಪಾಳಿಗಳಲ್ಲಿ ಕೆಲಸ ನಿರ್ವಹಿಸಲಿದ್ದಾರೆ.

ಸಹಾಯವಾಣಿಯಲ್ಲಿ ಕುಸುಮ್ ಯೋಜನೆಯ ಕಾಂಪೊನೆಂಟ್ ಬಿ ಅಡಿ ಸೋಲಾರ್‌ ಪಂಪ್‌ಸೆಟ್‌ ಹಾಕಿಸಿಕೊಳ್ಳುವ ಕುರಿತು ಮಾಹಿತಿ, ಆನ್‌ಲೈನ್ ಪಾವತಿ ಮತ್ತು ಇತರ ಸಂಬಂಧಿತ ಪ್ರಶ್ನೆಗಳಿಗೆ ಉತ್ತರ ಸಿಗಲಿದೆ. ರೈತರು ಮಧ್ಯವರ್ತಿಗಳನ್ನು ಸಂಪರ್ಕಿಸದೆ ಸಹಾಯವಾಣಿಯ ಅಧಿಕೃತ ಫೋನ್ ಸಂಖ್ಯೆ 080-22202100 ಮತ್ತು 8095132100ಅನ್ನು ನೇರವಾಗಿ ಸಂಪರ್ಕಿಸಬಹುದು. ಸೋಲಾರ್‌ ವಿದ್ಯುತ್‌ ಚಾಲಿತ ನೀರಾವರಿ ಪಂಪ್‌ ಸೆಟ್‌ಗಾಗಿ ರೈತರು ತಮ್ಮ ಪಾಲಿನ ವಂತಿಗೆ ಹೊರತುಪಡಿಸಿ ಯಾರಿಗೂ ಹಣ ಪಾವತಿಸಬೇಕಾಗಿಲ್ಲ ಎಂದು ಕ್ರೆಡಲ್‌ ಪ್ರಕಟಣೆ ತಿಳಿಸಿದೆ.

ಇದನ್ನು ಓದಿ: ಮರ್ಯಾದೆ ಹತ್ಯೆಗೆ ಮನುಸ್ಮೃತಿ ನಿಯಮಗಳೇ ಕಾರಣ : ಚಿಂತಕ ಶಿವಸುಂದರ್‌ ಪ್ರತಿಪಾದನೆ

ಪಿಎಂ ಕುಸುಮ್‌ ಬಿ ಯೋಜನೆಗೆ ರೈತ ಸಮುದಾಯದಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, www.souramitra.com ಪೋರ್ಟಲ್‌ ಮೂಲಕ ಈವರೆಗೆ 83,204 ರೈತರು ಆನ್‌ಲೈನ್‌ನಲ್ಲಿ ನೋಂದಾಯಿಸಿಕೊಂಡಿದ್ದಾರೆ. ಪೋರ್ಟಲ್‌ನಲ್ಲಿ ನೋಂದಾಯಿಸಿಕೊಂಡವರು ಲಭ್ಯವಿರುವ ಆಯ್ಕೆಗಳಿಂದ ತಮ್ಮ ಆದ್ಯತೆಯ ಮಾರಾಟಗಾರರು ಅಥವಾ ಏಜೆನ್ಸಿಯನ್ನು ಆಯ್ಕೆ ಮಾಡಿಕೊಡು ತಮ್ಮ ಪಾಲಿನ ವಂತಿಗೆಯನ್ನು ಆನ್‌ಲೈನ್‌ ಮೂಲಕ ಪಾವತಿಸುವ ಮೂಲಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದಾಗಿದೆ.

ವಂತಿಗೆ ಪಾವತಿಗೆ 2025ರ ಡಿಸೆಂಬರ್‌ 31 ಕೊನೆಯ ದಿನಾಂಕ ಆಗಿದ್ದು, ಪ್ರಮುಖ ಪತ್ರಿಕೆಗಳಲ್ಲಿ ಜಾಹಿರಾತಿನ ಮೂಲಕ ಕ್ರೆಡಲ್‌ ಈ ವಿಷಯವನ್ನು ರೈತರ ಗಮನಕ್ಕೆ ತಂದಿದೆ. ಅಂತಿಮ ದಿನಾಂಕದೊಳಗೆ ಪಾವತಿ ಮಾಡಲು ವಿಫಲವಾದರೆ ಯೋಜನೆಗೆ ಅನರ್ಹರಾಗುತ್ತಾರೆ ಎಂದು ಸ್ಪಷ್ಟಪಡಿಸಲಾಗಿದೆ.

ಕುಸುಮ್ ಯೋಜನೆಯ ಕಾಂಪೊನೆಂಟ್ ಬಿ
ನೀರಾವರಿಗೆ ಸಾಂಪ್ರದಾಯಿಕ ವಿದ್ಯುತ್‌ ಅವಲಂಬನೆಯನ್ನು ಕಡಿಮೆ ಮಾಡಿ, ಸೌರಶಕ್ತಿಯ ಬಳಕೆ ಮೂಲಕ ರೈತರು ಸ್ವಾವಲಂಬನೆ ಸಾಧಿಸಲು ಈ ಪ್ರಧಾನ ಮಂತ್ರಿ ಕಿಸಾನ್ ಊರ್ಜಾ ಸುರಕ್ಷಾ ಏವಂ ಉತ್ಥಾನ್ ಮಹಾಭಿಯಾನ್ (ಕುಸುಮ್‌) ರೂಪಿಸಲಾಗಿದೆ.

ಕುಸುಮ್‌ ಬಿ ಯೋಜನೆಯಡಿ ಜಾಲ ಮುಕ್ತ ಸೌರ ಕೃಷಿ ಪಂಪ್‌ಸೆಟ್‌ ಅಳವಡಿಸಲು ಒತ್ತು ನೀಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಸರ್ಕಾರವು ಸಬ್ಸಿಡಿ ಮೊತ್ತವನ್ನು ಶೇ.30ರಿಂದ 50ಕ್ಕೆ ಏರಿಸಿದೆ. ಕೇಂದ್ರ ಸರ್ಕಾರ ಶೇ.30ರಷ್ಟು ಸಬ್ಸಿಡಿ ಒದಗಿಸುತ್ತಿದ್ದು,ರೈತರು ಪಾವತಿಸಬೇಕಿರುವುದು ಶೇ.20ರಷ್ಟು ಮಾತ್ರ. ಯೋಜನೆಯಡಿ ರೈತರಿಗೆ ಸೌರ ಫಲಕಗಳು, ಸಬ್‌ಮರ್ಸಿಬಲ್/ಸರ್ಫೇಸ್ ಡಿಸಿ ಪಂಪ್‌ಗಳು, ಮೌಂಟಿಂಗ್‌ ಸ್ಟ್ರಕ್ಚರ್‌, ಪ್ಯಾನಲ್ ಬೋರ್ಡ್, ಪೈಪ್ ಮತ್ತು ಕೇಬಲ್ ಸರಬರಾಜು ಮಾಡಲಾಗುತ್ತದೆ. ಸೋಲಾರ್ ಪಂಪ್‌ಗಳನ್ನು 5 ವರ್ಷಗಳ ಕಾಲ ಪೂರೈಕೆದಾರರೇ ಉಚಿತವಾಗಿ ನಿರ್ವಹಣೆ ಮಾಡಲಿದ್ದಾರೆ.

ಸೌರ ಪಂಪ್‌ಸೆಟ್‌ಗಳ ಸ್ಥಾಪನೆ ಸುಲಭವಾಗಿದ್ದು, ದೀರ್ಘಕಾಲ ಬಾಳಿಕೆ ಬರುವ ಕಾರಣದಿಂದ ಗ್ರಾಮೀಣ ಪ್ರದೇಶಗಳಲ್ಲೂ ಸೌರ ತಂತ್ರಜ್ಞಾನ ಹೆಚ್ಚು ಜನಪ್ರಿಯವಾಗುತ್ತಿದೆ. ಸೌರ ಪಂಪ್‌ಸೆಟ್‌ ಬಳಕೆಯಿಂದ 8 ಗಂಟೆಗಳ ಕಾಲ ಹಗಲಿನ ವೇಳೆಯಲ್ಲಿ ವಿದ್ಯುತ್ ಪೂರೈಕೆಯಾಗಲಿದೆ.

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

45 mins ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

4 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

4 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

5 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

5 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

5 hours ago