ಬೆಂಗಳೂರು : ಮಾಹಿತಿ ಕೊರತೆ ಅಥವಾ ತಾಂತ್ರಿಕ ತೊಂದರೆಗಳಿಂದಾಗಿ ಅರ್ಹ ರೈತರು ಕುಸುಮ್-ಬಿ ಯೋಜನೆಯಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತವು ನಾಗರಬಾವಿಯ ಕೇಂದ್ರ ಕಚೇರಿಯಲ್ಲಿ ಸಹಾಯವಾಣಿ ಕೇಂದ್ರ ಸ್ಥಾಪಿಸಿದೆ.
2025ರ ಡಿಸೆಂಬರ್ 23ರಿಂದ 2025ರ ಡಿಸೆಂಬರ್ 31ರವರೆಗೆ ಸಹಾಯವಾಣಿ ಕೇಂದ್ರ ಕಾರ್ಯನಿರ್ವಹಿಸಲಿದ್ದು, ಕುಸುಮ್ ಬಿ ಯೋಜನೆ ಕುರಿತಂತೆ ರೈತರು ತಮ್ಮ ಸಮಸ್ಯೆಗಳನ್ನು ದೂರವಾಣಿ ಕರೆಯ ಮೂಲಕ ಪರಿಹರಿಸಿಕೊಳ್ಳಬಹುದಾಗಿದೆ. ರಾಜ್ಯದ ಎಲ್ಲ ರೈತರು ಇದರ ನೆರವು ಪಡೆದುಕೊಳ್ಳಬಹುದಾಗಿದ್ದು, ಇದಕ್ಕಾಗಿ ಕ್ರೆಡಲ್ ಸಿಬ್ಬಂದಿ, ಪ್ರತಿದಿನ ಬೆಳಿಗ್ಗೆ 6.00 ರಿಂದ ರಾತ್ರಿ 9.00ರವರೆಗೆ ರಜೆ ಇಲ್ಲದೆ ಎರಡು ಪಾಳಿಗಳಲ್ಲಿ ಕೆಲಸ ನಿರ್ವಹಿಸಲಿದ್ದಾರೆ.
ಸಹಾಯವಾಣಿಯಲ್ಲಿ ಕುಸುಮ್ ಯೋಜನೆಯ ಕಾಂಪೊನೆಂಟ್ ಬಿ ಅಡಿ ಸೋಲಾರ್ ಪಂಪ್ಸೆಟ್ ಹಾಕಿಸಿಕೊಳ್ಳುವ ಕುರಿತು ಮಾಹಿತಿ, ಆನ್ಲೈನ್ ಪಾವತಿ ಮತ್ತು ಇತರ ಸಂಬಂಧಿತ ಪ್ರಶ್ನೆಗಳಿಗೆ ಉತ್ತರ ಸಿಗಲಿದೆ. ರೈತರು ಮಧ್ಯವರ್ತಿಗಳನ್ನು ಸಂಪರ್ಕಿಸದೆ ಸಹಾಯವಾಣಿಯ ಅಧಿಕೃತ ಫೋನ್ ಸಂಖ್ಯೆ 080-22202100 ಮತ್ತು 8095132100ಅನ್ನು ನೇರವಾಗಿ ಸಂಪರ್ಕಿಸಬಹುದು. ಸೋಲಾರ್ ವಿದ್ಯುತ್ ಚಾಲಿತ ನೀರಾವರಿ ಪಂಪ್ ಸೆಟ್ಗಾಗಿ ರೈತರು ತಮ್ಮ ಪಾಲಿನ ವಂತಿಗೆ ಹೊರತುಪಡಿಸಿ ಯಾರಿಗೂ ಹಣ ಪಾವತಿಸಬೇಕಾಗಿಲ್ಲ ಎಂದು ಕ್ರೆಡಲ್ ಪ್ರಕಟಣೆ ತಿಳಿಸಿದೆ.
ಇದನ್ನು ಓದಿ: ಮರ್ಯಾದೆ ಹತ್ಯೆಗೆ ಮನುಸ್ಮೃತಿ ನಿಯಮಗಳೇ ಕಾರಣ : ಚಿಂತಕ ಶಿವಸುಂದರ್ ಪ್ರತಿಪಾದನೆ
ಪಿಎಂ ಕುಸುಮ್ ಬಿ ಯೋಜನೆಗೆ ರೈತ ಸಮುದಾಯದಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, www.souramitra.com ಪೋರ್ಟಲ್ ಮೂಲಕ ಈವರೆಗೆ 83,204 ರೈತರು ಆನ್ಲೈನ್ನಲ್ಲಿ ನೋಂದಾಯಿಸಿಕೊಂಡಿದ್ದಾರೆ. ಪೋರ್ಟಲ್ನಲ್ಲಿ ನೋಂದಾಯಿಸಿಕೊಂಡವರು ಲಭ್ಯವಿರುವ ಆಯ್ಕೆಗಳಿಂದ ತಮ್ಮ ಆದ್ಯತೆಯ ಮಾರಾಟಗಾರರು ಅಥವಾ ಏಜೆನ್ಸಿಯನ್ನು ಆಯ್ಕೆ ಮಾಡಿಕೊಡು ತಮ್ಮ ಪಾಲಿನ ವಂತಿಗೆಯನ್ನು ಆನ್ಲೈನ್ ಮೂಲಕ ಪಾವತಿಸುವ ಮೂಲಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದಾಗಿದೆ.
ವಂತಿಗೆ ಪಾವತಿಗೆ 2025ರ ಡಿಸೆಂಬರ್ 31 ಕೊನೆಯ ದಿನಾಂಕ ಆಗಿದ್ದು, ಪ್ರಮುಖ ಪತ್ರಿಕೆಗಳಲ್ಲಿ ಜಾಹಿರಾತಿನ ಮೂಲಕ ಕ್ರೆಡಲ್ ಈ ವಿಷಯವನ್ನು ರೈತರ ಗಮನಕ್ಕೆ ತಂದಿದೆ. ಅಂತಿಮ ದಿನಾಂಕದೊಳಗೆ ಪಾವತಿ ಮಾಡಲು ವಿಫಲವಾದರೆ ಯೋಜನೆಗೆ ಅನರ್ಹರಾಗುತ್ತಾರೆ ಎಂದು ಸ್ಪಷ್ಟಪಡಿಸಲಾಗಿದೆ.
ಕುಸುಮ್ ಯೋಜನೆಯ ಕಾಂಪೊನೆಂಟ್ ಬಿ
ನೀರಾವರಿಗೆ ಸಾಂಪ್ರದಾಯಿಕ ವಿದ್ಯುತ್ ಅವಲಂಬನೆಯನ್ನು ಕಡಿಮೆ ಮಾಡಿ, ಸೌರಶಕ್ತಿಯ ಬಳಕೆ ಮೂಲಕ ರೈತರು ಸ್ವಾವಲಂಬನೆ ಸಾಧಿಸಲು ಈ ಪ್ರಧಾನ ಮಂತ್ರಿ ಕಿಸಾನ್ ಊರ್ಜಾ ಸುರಕ್ಷಾ ಏವಂ ಉತ್ಥಾನ್ ಮಹಾಭಿಯಾನ್ (ಕುಸುಮ್) ರೂಪಿಸಲಾಗಿದೆ.
ಕುಸುಮ್ ಬಿ ಯೋಜನೆಯಡಿ ಜಾಲ ಮುಕ್ತ ಸೌರ ಕೃಷಿ ಪಂಪ್ಸೆಟ್ ಅಳವಡಿಸಲು ಒತ್ತು ನೀಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಸರ್ಕಾರವು ಸಬ್ಸಿಡಿ ಮೊತ್ತವನ್ನು ಶೇ.30ರಿಂದ 50ಕ್ಕೆ ಏರಿಸಿದೆ. ಕೇಂದ್ರ ಸರ್ಕಾರ ಶೇ.30ರಷ್ಟು ಸಬ್ಸಿಡಿ ಒದಗಿಸುತ್ತಿದ್ದು,ರೈತರು ಪಾವತಿಸಬೇಕಿರುವುದು ಶೇ.20ರಷ್ಟು ಮಾತ್ರ. ಯೋಜನೆಯಡಿ ರೈತರಿಗೆ ಸೌರ ಫಲಕಗಳು, ಸಬ್ಮರ್ಸಿಬಲ್/ಸರ್ಫೇಸ್ ಡಿಸಿ ಪಂಪ್ಗಳು, ಮೌಂಟಿಂಗ್ ಸ್ಟ್ರಕ್ಚರ್, ಪ್ಯಾನಲ್ ಬೋರ್ಡ್, ಪೈಪ್ ಮತ್ತು ಕೇಬಲ್ ಸರಬರಾಜು ಮಾಡಲಾಗುತ್ತದೆ. ಸೋಲಾರ್ ಪಂಪ್ಗಳನ್ನು 5 ವರ್ಷಗಳ ಕಾಲ ಪೂರೈಕೆದಾರರೇ ಉಚಿತವಾಗಿ ನಿರ್ವಹಣೆ ಮಾಡಲಿದ್ದಾರೆ.
ಸೌರ ಪಂಪ್ಸೆಟ್ಗಳ ಸ್ಥಾಪನೆ ಸುಲಭವಾಗಿದ್ದು, ದೀರ್ಘಕಾಲ ಬಾಳಿಕೆ ಬರುವ ಕಾರಣದಿಂದ ಗ್ರಾಮೀಣ ಪ್ರದೇಶಗಳಲ್ಲೂ ಸೌರ ತಂತ್ರಜ್ಞಾನ ಹೆಚ್ಚು ಜನಪ್ರಿಯವಾಗುತ್ತಿದೆ. ಸೌರ ಪಂಪ್ಸೆಟ್ ಬಳಕೆಯಿಂದ 8 ಗಂಟೆಗಳ ಕಾಲ ಹಗಲಿನ ವೇಳೆಯಲ್ಲಿ ವಿದ್ಯುತ್ ಪೂರೈಕೆಯಾಗಲಿದೆ.
೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…
ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…
ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…
‘ಸಪೋರ್ಟ್ ಅವರ್ ಹೀರೋಸ್’ ಸರ್ಕಾರೇತರ ಸಂಸ್ಥೆ ಸ್ಥಾಪನೆ ೩೬ವರ್ಷ ಪ್ರಾಯದ ಗೌರವ್ ಶುಕ್ಲಾ(ಕುಳಿತವರಲ್ಲಿ ಎಡ ಬದಿ)ರ ತಂದೆ ೨೮ ವರ್ಷಗಳ…
ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಮಲ್ಲಳ್ಳಿ ಜಲಪಾತದಲ್ಲಿ ಬಹುನಿರೀಕ್ಷಿತ ರೋಪ್ವೇ ಯೋಜನೆಗೆ ವೇಗ ದೊರೆತಿದೆ.…
ಕೆ.ಬಿ.ರಮೇಶನಾಯಕ ಮೈಸೂರು: ಹಲವು ರೋಗಗಳಿಗೆ ರಾಮಬಾಣವಾದ ಹಾಗೂ ಆರೋಗ್ಯಕ್ಕೆ ಹಿತಕರ ಎನ್ನಲಾಗಿರುವ ಮೀನು ಆಹಾರವನ್ನು ಜನಸಾಮಾನ್ಯರಿಗೆ ಸುಲಭವಾಗಿ ದೊರೆಯುವಂತೆ ಮಾಡಲು…