ಮಂಡ್ಯ: ಬೆಂಗಳೂರಿನ ಪ್ರಸಿದ್ಧ ರಾಮೇಶ್ವರಂ ಕಫೆಯ ಮೇಲೆ ನಡೆದ ಬಾಂಬ್ ದಾಳಿ ಅತ್ಯಂತ ಭಯಾನಕ ವಿಚಾರ, ಇದನ್ನು ಯಾರು ಸಮರ್ಥಿಸಿಕೊಳ್ಳುವ ಕೆಲಸ ಮಾಡಬಾರದು ಮತ್ತು ಅವರ ಪರವಾಗಿ ಹೇಳಿಕೆ ನೀಡುವುದು ಅಪರಾಧವಾಗಿದೆ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ.
ನಗರದಲ್ಲಿಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕುಕ್ಕರ್ ಬ್ಲಾಸ್ಟ್ ಗೂ ಇದಕ್ಕೂ ಸಾಮ್ಯತೆಯಿದೆ ಎಂದು ಹೇಳುತ್ತಾರೆ. ಅದೇನೆ ಇರಲಿ, ಪೊಲೀಸರು ಆದಷ್ಟು ಬೇಗ ಆರೋಪಿಗಳನ್ನು ಬಂಧಿಸುತ್ತಾರೆ ಎನ್ನುವ ವಿಶ್ವಾಸವಿದೆ ಎಂದು ಹೇಳಿದರು.
ವಿಧಾನಸೌಧದಲ್ಲಿ ಪಾಕಿಸ್ತಾನ್ ಪರ ಘೋಷಣೆ ಕೂಗಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಪಾಕ್ ಪರ ಘೋಷಣೆ ಕೂಗಿರುವುದು ಎಫ್ಎಲ್ಎಸ್ ವರದಿಯಿಂದ ಸತ್ಯಾಂಶ ಹೊರ ಬಂದಿದ್ದರು, ತಪ್ಪು ಮಾಡಿದವರನ್ನು ಖಂಡಿಸದೇ ರಕ್ಷಣೆ ಮಾಡುವುದು ಸರಿಯಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.
ಬಿಜೆಪಿಯಿಂದ ಲೋಕ ಟಿಕೆಟ್ ಸಿಗಲಿದೆ: ಮಂಡ್ಯ ಕಣದಿಂದ ಶೇ 100 ರಷ್ಟು ನನಗೆ ಬಿಜೆಪಿಯಿಂದ ಟಿಕೆಟ್ ಸಿಗಲಿದೆ. ರಾಜ್ಯದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ವೇಳೆ ನನ್ನ ಹೆಸರು ಇರಲಿದೆ. ಟಿಕೆಟ್ಗಾಗಿ ದೆಹಲಿಗೆ ಹೋಗುವ ಅವಶ್ಯಕತೆಯಿಲ್ಲ. ಹೈ ಕರೆದರೆ ಮಾತ್ರ ಹೋಗುತ್ತೇನೆ ಎಂದು ಸಂಸದೆ ಸುಮಲತಾ ಅಂಬರೀಶ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕಳೆದ ಬಾರಿ ಪಕ್ಷೇತರವಾಗಿ ಸ್ಪರ್ಧೆ ಮಾಡಿದ್ದೆ, ಬೇಕದಾದವರು ಜೊತೆಯಲ್ಲಿದ್ದರು. ಯಾವುದೇ ಅನುಭವ ಇಲ್ಲದೇ ಮೊದಲ ಚುನಾವಣೆ ಗೆದ್ದಿದ್ದೆ. ಈಗ ಚಿಹ್ನೆಯಿಂದ ನಿಲ್ಲುತ್ತಿದ್ದೇನೆ. ಈ ಬಾರಿಯ ಚುನಾವಣೆ ಬೇರೆ ರೀತಿ ಇರಲಿದೆ ಎಂದರು.
ಇನ್ನು ಚುನಾವಣಾ ಪ್ರಚಾರಕ್ಕೆ ಸಂಬಂಧಿಸಿದಂತೆ ನಟರಾದ ದರ್ಶನ್ ಹಾಗೂ ಯಶ್ ಕ್ಯಾಂಪೆನ್ ಮಾಡಲಿದ್ದಾರಾ ಎಂಬ ಪ್ರಶ್ನೆಗೆ, ಕಳೆದ ಚುನಾವಣೆಯಲ್ಲಿ ಅವರು ಕೇವಲ ಬೆಂಬಲ ನೀಡಿಲ್ಲ ಬದಲಾಗಿ ತ್ಯಾಗ ಮಾಡಿದ್ದರು. ಸದ್ಯ ಇಬ್ಬರು ಬೇರೆ ಬೇರೆ ಚಿತ್ರಗಳನ್ನು ಮಾಡುತ್ತಿದ್ದು, ಚುನಾವಣಾ ಪ್ರಚಾರಕ್ಕೆ ಬಂದರೆ ಸ್ವಾಗತಿಸುತ್ತೇನೆ. ಅದರೆ, ಎಲ್ಲವನ್ನು ಬಿಟ್ಟು ಕ್ಯಾಂಪೆನ್ ಮಾಡಿ ಎನ್ನುವುದು ಸರಿಯಲ್ಲ ಎಂದು ಉತ್ತರಿಸಿದರು.
ಯಶ್ ಚುನಾವಣಾ ಪ್ರಚಾರಕ್ಕೆ ಬರುವುದಿಲ್ಲ ಎಂಬ ಹೇಳಿಕೆಗೆ, ಅಂದು ನನ್ನ ಜೊತೆ ಮನೆಯ ಮಕ್ಕಳಂತೆ ಚುನಾವಣಾ ಕಣದಲ್ಲಿ ನಿಂತಿದ್ದಾರು. ಇಂದು ಅವರು ಬಂದರೆ ಸ್ವಾಗತಾರ್ಹ, ಪ್ರಚಾರಕ್ಕೆ ಬರಲಿಲ್ಲ ಎಂದರೂ ಸಹಾ ಯಾವುದೇ ಮನಸ್ಥಾಪ ಇರುವುದಿಲ್ಲ ಎಂದು ಸಂಸದೆ ಸುಮಲತಾ ಅಂಬರೀಶ್ ಸ್ಪಷ್ಟಪಡಿಸಿದರು.
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಬಾಲಕನ…
ಮಡಿಕೇರಿ: ಕೊಡಗು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸರು ಒಂದು ತಿಂಗಳ ಕಾಲ ಕ್ಷಿಪ್ರ ಕಾರ್ಯಾಚರಣೆ ಮಾಡುವ ಮೂಲಕ ನಾಗರಿಕರು ಕಳೆದುಕೊಂಡ…
ಎಚ್.ಡಿ.ಕೋಟೆ: ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಪ್ರಯುಕ್ತ ಅರಣ್ಯ ಮತ್ತು…
ಮಂಡ್ಯ: ಕಾಯಕ ಶರಣರು ಸಮಾಜಕ್ಕೆ ವಚನಗಳ ಮೂಲಕ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಯುವ ಜನತೆಯೂ ಕಾಯಕ ಶರಣರ ಆದರ್ಶ, ಮೌಲ್ಯಗಳನ್ನು…
ಮಂಡ್ಯ: ಪ್ರಸ್ತುತ ಕಾಲದಲ್ಲಿ ಮಕ್ಕಳು ಅಂತರ್ಜಾಲ ಬಳಕೆಯನ್ನು ಹೆಚ್ಚು ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋಗಿದ್ದಾರೆ ಇದರಿಂದ ಮಕ್ಕಳ ಮನಸ್ಥಿತಿ…
ಮಂಡ್ಯ: ಪೌತಿ ಖಾತೆ ಪ್ರಕ್ರಿಯೆಯನ್ನು ಮಂಡ್ಯ ಜಿಲ್ಲೆಯು ಈ ಪೌತಿ ಖಾತೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಈ ಪೌತಿ ಖಾತೆಯನ್ನು…