ಮಂಡ್ಯ: ಬೆಂಗಳೂರಿನ ಪ್ರಸಿದ್ಧ ರಾಮೇಶ್ವರಂ ಕಫೆಯ ಮೇಲೆ ನಡೆದ ಬಾಂಬ್ ದಾಳಿ ಅತ್ಯಂತ ಭಯಾನಕ ವಿಚಾರ, ಇದನ್ನು ಯಾರು ಸಮರ್ಥಿಸಿಕೊಳ್ಳುವ ಕೆಲಸ ಮಾಡಬಾರದು ಮತ್ತು ಅವರ ಪರವಾಗಿ ಹೇಳಿಕೆ ನೀಡುವುದು ಅಪರಾಧವಾಗಿದೆ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ.
ನಗರದಲ್ಲಿಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕುಕ್ಕರ್ ಬ್ಲಾಸ್ಟ್ ಗೂ ಇದಕ್ಕೂ ಸಾಮ್ಯತೆಯಿದೆ ಎಂದು ಹೇಳುತ್ತಾರೆ. ಅದೇನೆ ಇರಲಿ, ಪೊಲೀಸರು ಆದಷ್ಟು ಬೇಗ ಆರೋಪಿಗಳನ್ನು ಬಂಧಿಸುತ್ತಾರೆ ಎನ್ನುವ ವಿಶ್ವಾಸವಿದೆ ಎಂದು ಹೇಳಿದರು.
ವಿಧಾನಸೌಧದಲ್ಲಿ ಪಾಕಿಸ್ತಾನ್ ಪರ ಘೋಷಣೆ ಕೂಗಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಪಾಕ್ ಪರ ಘೋಷಣೆ ಕೂಗಿರುವುದು ಎಫ್ಎಲ್ಎಸ್ ವರದಿಯಿಂದ ಸತ್ಯಾಂಶ ಹೊರ ಬಂದಿದ್ದರು, ತಪ್ಪು ಮಾಡಿದವರನ್ನು ಖಂಡಿಸದೇ ರಕ್ಷಣೆ ಮಾಡುವುದು ಸರಿಯಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.
ಬಿಜೆಪಿಯಿಂದ ಲೋಕ ಟಿಕೆಟ್ ಸಿಗಲಿದೆ: ಮಂಡ್ಯ ಕಣದಿಂದ ಶೇ 100 ರಷ್ಟು ನನಗೆ ಬಿಜೆಪಿಯಿಂದ ಟಿಕೆಟ್ ಸಿಗಲಿದೆ. ರಾಜ್ಯದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ವೇಳೆ ನನ್ನ ಹೆಸರು ಇರಲಿದೆ. ಟಿಕೆಟ್ಗಾಗಿ ದೆಹಲಿಗೆ ಹೋಗುವ ಅವಶ್ಯಕತೆಯಿಲ್ಲ. ಹೈ ಕರೆದರೆ ಮಾತ್ರ ಹೋಗುತ್ತೇನೆ ಎಂದು ಸಂಸದೆ ಸುಮಲತಾ ಅಂಬರೀಶ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕಳೆದ ಬಾರಿ ಪಕ್ಷೇತರವಾಗಿ ಸ್ಪರ್ಧೆ ಮಾಡಿದ್ದೆ, ಬೇಕದಾದವರು ಜೊತೆಯಲ್ಲಿದ್ದರು. ಯಾವುದೇ ಅನುಭವ ಇಲ್ಲದೇ ಮೊದಲ ಚುನಾವಣೆ ಗೆದ್ದಿದ್ದೆ. ಈಗ ಚಿಹ್ನೆಯಿಂದ ನಿಲ್ಲುತ್ತಿದ್ದೇನೆ. ಈ ಬಾರಿಯ ಚುನಾವಣೆ ಬೇರೆ ರೀತಿ ಇರಲಿದೆ ಎಂದರು.
ಇನ್ನು ಚುನಾವಣಾ ಪ್ರಚಾರಕ್ಕೆ ಸಂಬಂಧಿಸಿದಂತೆ ನಟರಾದ ದರ್ಶನ್ ಹಾಗೂ ಯಶ್ ಕ್ಯಾಂಪೆನ್ ಮಾಡಲಿದ್ದಾರಾ ಎಂಬ ಪ್ರಶ್ನೆಗೆ, ಕಳೆದ ಚುನಾವಣೆಯಲ್ಲಿ ಅವರು ಕೇವಲ ಬೆಂಬಲ ನೀಡಿಲ್ಲ ಬದಲಾಗಿ ತ್ಯಾಗ ಮಾಡಿದ್ದರು. ಸದ್ಯ ಇಬ್ಬರು ಬೇರೆ ಬೇರೆ ಚಿತ್ರಗಳನ್ನು ಮಾಡುತ್ತಿದ್ದು, ಚುನಾವಣಾ ಪ್ರಚಾರಕ್ಕೆ ಬಂದರೆ ಸ್ವಾಗತಿಸುತ್ತೇನೆ. ಅದರೆ, ಎಲ್ಲವನ್ನು ಬಿಟ್ಟು ಕ್ಯಾಂಪೆನ್ ಮಾಡಿ ಎನ್ನುವುದು ಸರಿಯಲ್ಲ ಎಂದು ಉತ್ತರಿಸಿದರು.
ಯಶ್ ಚುನಾವಣಾ ಪ್ರಚಾರಕ್ಕೆ ಬರುವುದಿಲ್ಲ ಎಂಬ ಹೇಳಿಕೆಗೆ, ಅಂದು ನನ್ನ ಜೊತೆ ಮನೆಯ ಮಕ್ಕಳಂತೆ ಚುನಾವಣಾ ಕಣದಲ್ಲಿ ನಿಂತಿದ್ದಾರು. ಇಂದು ಅವರು ಬಂದರೆ ಸ್ವಾಗತಾರ್ಹ, ಪ್ರಚಾರಕ್ಕೆ ಬರಲಿಲ್ಲ ಎಂದರೂ ಸಹಾ ಯಾವುದೇ ಮನಸ್ಥಾಪ ಇರುವುದಿಲ್ಲ ಎಂದು ಸಂಸದೆ ಸುಮಲತಾ ಅಂಬರೀಶ್ ಸ್ಪಷ್ಟಪಡಿಸಿದರು.
ಪಶ್ಚಿಮ ಏಷ್ಯಾದಲ್ಲಿ ಅಮೆರಿಕ- ಇಸ್ರೇಲ್ ಮತ್ತು ಇರಾನ್ ನಡುವೆ ಯುದ್ಧ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸ್ವಲ್ಪ ಮಟ್ಟಿಗೆ ವಾಣಿಜ್ಯ ಸಿಲಿಂಡರ್ ಅಭಾವ…
ಇರಾನ್-ಅಮೆರಿಕ-ಇಸ್ರೇಲ್ ಯುದ್ಧವು ೩೭ನೇ ದಿನಕ್ಕೆ ಕಾಲಿಟ್ಟಿದೆ. ಇದರ ಪರಿಣಾಮ ಅಗತ್ಯ ವಸ್ತುಗಳ ಬೆಲೆ ಏರಿಕೆಗಳು ಕಣ್ಣೀರು ತರಿಸುತ್ತಿದೆ. ಎಲ್ಪಿಜಿ ಗ್ಯಾಸ್…
ಇಸ್ರೇಲ್-ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ಶುರುವಾಗಿ ತಿಂಗಳೇ ಕಳೆದರೂ ನಿಲ್ಲುವ ಯಾವುದೇ ಲಕ್ಷಣ ಕಾಣುತ್ತಿಲ್ಲ. ಯುದ್ಧದ ಭೀಕರತೆ ದಿನೇ…
ಲಕ್ಷ್ಮೀಕಾಂತ್ ಕೋಮಾರಪ್ಪ ಗ್ರಾಮದೇವತೆ ಸಬ್ಬಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಮಳೆ, ಬೆಳೆಗಾಗಿ ಪ್ರಾರ್ಥನೆ ಸೋಮವಾರಪೇಟೆ: ಗ್ರಾಮೀಣ ಭಾಗದ ಆಚರಣೆಗಳಲ್ಲಿ…
ಅಣ್ಣೂರುಸತೀಶ್ ಶ್ರೀಆದಿಚುಂಚನಗಿರಿ ಮಠದ ನೇತೃತದಲ್ಲಿ ಅದ್ಧೂರಿ ಜಾತ್ರೆ ಭಾರತೀನಗರ: ಚಿಕ್ಕರಸಿನಕೆರೆ ಶ್ರೀ ಕಾಲಭೈರವೇಶ್ವರಸ್ವಾಮಿ ಪುಣ್ಯಕ್ಷೇತ್ರವು ದಕ್ಷಿಣ ಕಾಶಿಯೆಂದೇ ಪರಿಚಿತವಾಗಿ ಹಲವಾರು…
ಭೇರ್ಯ ಮಹೇಶ್ ಇಂದು ಭೇರ್ಯದಲ್ಲಿ ಕರಿಯಮ್ಮ ದೊಡ್ಡಮ್ಮ ದೇವಿ ಸಿಡಿ ಉತ್ಸವ, ನಾಳೆ ಜಾತ್ರಾ ಮಹೋತ್ಸವ ಭೇರ್ಯ: ಭೇರ್ಯ ಗ್ರಾಮದ…