ರಾಜ್ಯ

ಬಾಂಬ್‌ ಸ್ಫೋಟ ಪ್ರಕರಣವನ್ನು ಸಮರ್ಥಿಸಿಕೊಳ್ಳುವುದು ಅಪರಾಧ: ಸಂಸದೆ ಸುಮಲತಾ

ಮಂಡ್ಯ: ಬೆಂಗಳೂರಿನ ಪ್ರಸಿದ್ಧ ರಾಮೇಶ್ವರಂ ಕಫೆಯ ಮೇಲೆ ನಡೆದ ಬಾಂಬ್‌ ದಾಳಿ ಅತ್ಯಂತ ಭಯಾನಕ ವಿಚಾರ, ಇದನ್ನು ಯಾರು ಸಮರ್ಥಿಸಿಕೊಳ್ಳುವ ಕೆಲಸ ಮಾಡಬಾರದು ಮತ್ತು ಅವರ ಪರವಾಗಿ ಹೇಳಿಕೆ ನೀಡುವುದು ಅಪರಾಧವಾಗಿದೆ ಎಂದು ಸಂಸದೆ ಸುಮಲತಾ ಅಂಬರೀಶ್‌ ಹೇಳಿದ್ದಾರೆ.

ನಗರದಲ್ಲಿಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕುಕ್ಕರ್‌ ಬ್ಲಾಸ್ಟ್‌ ಗೂ ಇದಕ್ಕೂ ಸಾಮ್ಯತೆಯಿದೆ ಎಂದು ಹೇಳುತ್ತಾರೆ. ಅದೇನೆ ಇರಲಿ, ಪೊಲೀಸರು ಆದಷ್ಟು ಬೇಗ ಆರೋಪಿಗಳನ್ನು ಬಂಧಿಸುತ್ತಾರೆ ಎನ್ನುವ ವಿಶ್ವಾಸವಿದೆ ಎಂದು ಹೇಳಿದರು.

ವಿಧಾನಸೌಧದಲ್ಲಿ ಪಾಕಿಸ್ತಾನ್‌ ಪರ ಘೋಷಣೆ ಕೂಗಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಪಾಕ್‌ ಪರ ಘೋಷಣೆ ಕೂಗಿರುವುದು ಎಫ್‌ಎಲ್‌ಎಸ್‌ ವರದಿಯಿಂದ ಸತ್ಯಾಂಶ ಹೊರ ಬಂದಿದ್ದರು, ತಪ್ಪು ಮಾಡಿದವರನ್ನು ಖಂಡಿಸದೇ ರಕ್ಷಣೆ ಮಾಡುವುದು ಸರಿಯಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.

ಬಿಜೆಪಿಯಿಂದ ಲೋಕ ಟಿಕೆಟ್‌ ಸಿಗಲಿದೆ: ಮಂಡ್ಯ ಕಣದಿಂದ ಶೇ 100 ರಷ್ಟು ನನಗೆ ಬಿಜೆಪಿಯಿಂದ ಟಿಕೆಟ್‌ ಸಿಗಲಿದೆ. ರಾಜ್ಯದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ವೇಳೆ ನನ್ನ ಹೆಸರು ಇರಲಿದೆ. ಟಿಕೆಟ್‌ಗಾಗಿ ದೆಹಲಿಗೆ ಹೋಗುವ ಅವಶ್ಯಕತೆಯಿಲ್ಲ. ಹೈ ಕರೆದರೆ ಮಾತ್ರ ಹೋಗುತ್ತೇನೆ ಎಂದು ಸಂಸದೆ ಸುಮಲತಾ ಅಂಬರೀಶ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕಳೆದ ಬಾರಿ ಪಕ್ಷೇತರವಾಗಿ ಸ್ಪರ್ಧೆ ಮಾಡಿದ್ದೆ, ಬೇಕದಾದವರು ಜೊತೆಯಲ್ಲಿದ್ದರು. ಯಾವುದೇ ಅನುಭವ ಇಲ್ಲದೇ ಮೊದಲ ಚುನಾವಣೆ ಗೆದ್ದಿದ್ದೆ. ಈಗ ಚಿಹ್ನೆಯಿಂದ ನಿಲ್ಲುತ್ತಿದ್ದೇನೆ. ಈ ಬಾರಿಯ ಚುನಾವಣೆ ಬೇರೆ ರೀತಿ ಇರಲಿದೆ ಎಂದರು.

ಇನ್ನು ಚುನಾವಣಾ ಪ್ರಚಾರಕ್ಕೆ ಸಂಬಂಧಿಸಿದಂತೆ ನಟರಾದ ದರ್ಶನ್‌ ಹಾಗೂ ಯಶ್‌ ಕ್ಯಾಂಪೆನ್‌ ಮಾಡಲಿದ್ದಾರಾ ಎಂಬ ಪ್ರಶ್ನೆಗೆ, ಕಳೆದ ಚುನಾವಣೆಯಲ್ಲಿ ಅವರು ಕೇವಲ ಬೆಂಬಲ ನೀಡಿಲ್ಲ ಬದಲಾಗಿ ತ್ಯಾಗ ಮಾಡಿದ್ದರು. ಸದ್ಯ ಇಬ್ಬರು ಬೇರೆ ಬೇರೆ ಚಿತ್ರಗಳನ್ನು ಮಾಡುತ್ತಿದ್ದು, ಚುನಾವಣಾ ಪ್ರಚಾರಕ್ಕೆ ಬಂದರೆ ಸ್ವಾಗತಿಸುತ್ತೇನೆ. ಅದರೆ, ಎಲ್ಲವನ್ನು ಬಿಟ್ಟು ಕ್ಯಾಂಪೆನ್‌ ಮಾಡಿ ಎನ್ನುವುದು ಸರಿಯಲ್ಲ ಎಂದು ಉತ್ತರಿಸಿದರು.

ಯಶ್‌ ಚುನಾವಣಾ ಪ್ರಚಾರಕ್ಕೆ ಬರುವುದಿಲ್ಲ ಎಂಬ ಹೇಳಿಕೆಗೆ, ಅಂದು ನನ್ನ ಜೊತೆ ಮನೆಯ ಮಕ್ಕಳಂತೆ ಚುನಾವಣಾ ಕಣದಲ್ಲಿ ನಿಂತಿದ್ದಾರು. ಇಂದು ಅವರು ಬಂದರೆ ಸ್ವಾಗತಾರ್ಹ, ಪ್ರಚಾರಕ್ಕೆ ಬರಲಿಲ್ಲ ಎಂದರೂ ಸಹಾ ಯಾವುದೇ ಮನಸ್ಥಾಪ ಇರುವುದಿಲ್ಲ ಎಂದು ಸಂಸದೆ ಸುಮಲತಾ ಅಂಬರೀಶ್‌ ಸ್ಪಷ್ಟಪಡಿಸಿದರು.

andolana

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

4 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

6 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

6 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

7 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

8 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

8 hours ago