ರಾಜ್ಯ

ಬಾಂಬ್‌ ಸ್ಫೋಟ ಪ್ರಕರಣವನ್ನು ಸಮರ್ಥಿಸಿಕೊಳ್ಳುವುದು ಅಪರಾಧ: ಸಂಸದೆ ಸುಮಲತಾ

ಮಂಡ್ಯ: ಬೆಂಗಳೂರಿನ ಪ್ರಸಿದ್ಧ ರಾಮೇಶ್ವರಂ ಕಫೆಯ ಮೇಲೆ ನಡೆದ ಬಾಂಬ್‌ ದಾಳಿ ಅತ್ಯಂತ ಭಯಾನಕ ವಿಚಾರ, ಇದನ್ನು ಯಾರು ಸಮರ್ಥಿಸಿಕೊಳ್ಳುವ ಕೆಲಸ ಮಾಡಬಾರದು ಮತ್ತು ಅವರ ಪರವಾಗಿ ಹೇಳಿಕೆ ನೀಡುವುದು ಅಪರಾಧವಾಗಿದೆ ಎಂದು ಸಂಸದೆ ಸುಮಲತಾ ಅಂಬರೀಶ್‌ ಹೇಳಿದ್ದಾರೆ.

ನಗರದಲ್ಲಿಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕುಕ್ಕರ್‌ ಬ್ಲಾಸ್ಟ್‌ ಗೂ ಇದಕ್ಕೂ ಸಾಮ್ಯತೆಯಿದೆ ಎಂದು ಹೇಳುತ್ತಾರೆ. ಅದೇನೆ ಇರಲಿ, ಪೊಲೀಸರು ಆದಷ್ಟು ಬೇಗ ಆರೋಪಿಗಳನ್ನು ಬಂಧಿಸುತ್ತಾರೆ ಎನ್ನುವ ವಿಶ್ವಾಸವಿದೆ ಎಂದು ಹೇಳಿದರು.

ವಿಧಾನಸೌಧದಲ್ಲಿ ಪಾಕಿಸ್ತಾನ್‌ ಪರ ಘೋಷಣೆ ಕೂಗಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಪಾಕ್‌ ಪರ ಘೋಷಣೆ ಕೂಗಿರುವುದು ಎಫ್‌ಎಲ್‌ಎಸ್‌ ವರದಿಯಿಂದ ಸತ್ಯಾಂಶ ಹೊರ ಬಂದಿದ್ದರು, ತಪ್ಪು ಮಾಡಿದವರನ್ನು ಖಂಡಿಸದೇ ರಕ್ಷಣೆ ಮಾಡುವುದು ಸರಿಯಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.

ಬಿಜೆಪಿಯಿಂದ ಲೋಕ ಟಿಕೆಟ್‌ ಸಿಗಲಿದೆ: ಮಂಡ್ಯ ಕಣದಿಂದ ಶೇ 100 ರಷ್ಟು ನನಗೆ ಬಿಜೆಪಿಯಿಂದ ಟಿಕೆಟ್‌ ಸಿಗಲಿದೆ. ರಾಜ್ಯದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ವೇಳೆ ನನ್ನ ಹೆಸರು ಇರಲಿದೆ. ಟಿಕೆಟ್‌ಗಾಗಿ ದೆಹಲಿಗೆ ಹೋಗುವ ಅವಶ್ಯಕತೆಯಿಲ್ಲ. ಹೈ ಕರೆದರೆ ಮಾತ್ರ ಹೋಗುತ್ತೇನೆ ಎಂದು ಸಂಸದೆ ಸುಮಲತಾ ಅಂಬರೀಶ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕಳೆದ ಬಾರಿ ಪಕ್ಷೇತರವಾಗಿ ಸ್ಪರ್ಧೆ ಮಾಡಿದ್ದೆ, ಬೇಕದಾದವರು ಜೊತೆಯಲ್ಲಿದ್ದರು. ಯಾವುದೇ ಅನುಭವ ಇಲ್ಲದೇ ಮೊದಲ ಚುನಾವಣೆ ಗೆದ್ದಿದ್ದೆ. ಈಗ ಚಿಹ್ನೆಯಿಂದ ನಿಲ್ಲುತ್ತಿದ್ದೇನೆ. ಈ ಬಾರಿಯ ಚುನಾವಣೆ ಬೇರೆ ರೀತಿ ಇರಲಿದೆ ಎಂದರು.

ಇನ್ನು ಚುನಾವಣಾ ಪ್ರಚಾರಕ್ಕೆ ಸಂಬಂಧಿಸಿದಂತೆ ನಟರಾದ ದರ್ಶನ್‌ ಹಾಗೂ ಯಶ್‌ ಕ್ಯಾಂಪೆನ್‌ ಮಾಡಲಿದ್ದಾರಾ ಎಂಬ ಪ್ರಶ್ನೆಗೆ, ಕಳೆದ ಚುನಾವಣೆಯಲ್ಲಿ ಅವರು ಕೇವಲ ಬೆಂಬಲ ನೀಡಿಲ್ಲ ಬದಲಾಗಿ ತ್ಯಾಗ ಮಾಡಿದ್ದರು. ಸದ್ಯ ಇಬ್ಬರು ಬೇರೆ ಬೇರೆ ಚಿತ್ರಗಳನ್ನು ಮಾಡುತ್ತಿದ್ದು, ಚುನಾವಣಾ ಪ್ರಚಾರಕ್ಕೆ ಬಂದರೆ ಸ್ವಾಗತಿಸುತ್ತೇನೆ. ಅದರೆ, ಎಲ್ಲವನ್ನು ಬಿಟ್ಟು ಕ್ಯಾಂಪೆನ್‌ ಮಾಡಿ ಎನ್ನುವುದು ಸರಿಯಲ್ಲ ಎಂದು ಉತ್ತರಿಸಿದರು.

ಯಶ್‌ ಚುನಾವಣಾ ಪ್ರಚಾರಕ್ಕೆ ಬರುವುದಿಲ್ಲ ಎಂಬ ಹೇಳಿಕೆಗೆ, ಅಂದು ನನ್ನ ಜೊತೆ ಮನೆಯ ಮಕ್ಕಳಂತೆ ಚುನಾವಣಾ ಕಣದಲ್ಲಿ ನಿಂತಿದ್ದಾರು. ಇಂದು ಅವರು ಬಂದರೆ ಸ್ವಾಗತಾರ್ಹ, ಪ್ರಚಾರಕ್ಕೆ ಬರಲಿಲ್ಲ ಎಂದರೂ ಸಹಾ ಯಾವುದೇ ಮನಸ್ಥಾಪ ಇರುವುದಿಲ್ಲ ಎಂದು ಸಂಸದೆ ಸುಮಲತಾ ಅಂಬರೀಶ್‌ ಸ್ಪಷ್ಟಪಡಿಸಿದರು.

andolana

Recent Posts

ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ: ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ನನಗೆ ಯಾವುದೇ ನೋವಿಲ್ಲ. ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಂತ್ರಿಗಳ ಜೊತೆಗಿನ ಉಪಹಾರ ಸಭೆಯಲ್ಲಿ…

18 mins ago

ಬ್ರೇಕ್‌ಫಾಸ್ಟ್‌ ಮೀಟಿಂಗ್:‌ ಸಿದ್ದರಾಮಯ್ಯರನ್ನು ತಬ್ಬಿ ಕಾಲಿಗೆ ಬಿದ್ದ ಡಿಸಿಎಂ ಡಿಕೆಶಿ

ಬೆಂಗಳೂರು: ಇಂದು ಬೆಳಿಗ್ಗೆ ಉಪಹಾರಕ್ಕೆ ಕಾವೇರಿ ನಿವಾಸಕ್ಕೆ ಆಗಮಿಸಿದ ಡಿ.ಕೆ.ಶಿವಕುಮಾರ್‌ ಅವರು ಸಿದ್ದರಾಮಯ್ಯರನ್ನು ತಬ್ಬಿಕೊಂಡು ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ.…

2 hours ago

ಓದುಗರ ಪತ್ರ: ತಡೆಯಲಿ ಸರ್ಕಾರ!

ತಡೆಯಲಿ ಸರ್ಕಾರ! ಏರುತ್ತಲೇ ಇದೆ ಇಂಧನ ಬೆಲೆ ಇಳಿಯುತ್ತಲೇ ಇದೆ ಮಾನವ ಬೆಲೆ! ಈ ಪರಿಯ ಹಾವು-ಏಣಿ ಆಟದಲಿ ಅಧೋಗತಿಗೆ…

2 hours ago

ಓದುಗರ ಪತ್ರ: ಬಿಪಿಎಲ್ ಆದಾಯ ಮಿತಿ ಹೆಚ್ಚಿಸಿ

ರಾಜ್ಯಾದ್ಯಂತ ಹೊಸ ಬಿಪಿಎಲ್ ಕಾರ್ಡ್‌ಗಾಗಿ ಸಲ್ಲಿಕೆಯಾಗಿರುವ ಮೂರು ಲಕ್ಷ ಅರ್ಜಿಗಳು ನಾಲ್ಕು ವರ್ಷಗಳಿಂದ ವಿಲೇವಾರಿಯಾಗದೆ ಬಾಕಿ ಉಳಿದಿರುವುದು ಬೇಸರದ ಸಂಗತಿ.…

2 hours ago

ಓದುಗರ ಪತ್ರ: ರಸ್ತೆಗೆ ಡಾಂಬರೀಕರಣ ಮಾಡಿ

ಚಾಮರಾಜನಗರ ಜಿಲ್ಲೆಯ ಮರಿಯಾಲ ಗ್ರಾಮದ ಪ್ರಮುಖ ರಸ್ತೆಯು ಹಾಳಾಗಿದೆ. ಈ ರಸ್ತೆಯು ಕೆಲ್ಲಂಬಳ್ಳಿ, ಕಸ್ತೂರು ಮೂಲಕ ವಿವಿಧ ಗ್ರಾಮಗಳ ಮೂಲಕ…

2 hours ago

ಓದುಗರ ಪತ್ರ: ವಿಷಯದ ಗಂಭೀರತೆ ಮರೆತ ಪೊಲೀಸರು

ತಮಿಳುನಾಡಿನಲ್ಲಿ, ಕಳೆದ ಕೆಲವು ದಿನಗಳ ಹಿಂದೆ, ೧೦ ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಆಕೆಯನ್ನು ಕೊಲೆಗೈದ ವಿಷಯಕ್ಕೆ ಸಂಬಂಧಿಸಿದಂತೆ…

2 hours ago