ರಾಜ್ಯ

ಬಾಂಬ್‌ ಸ್ಫೋಟ ಪ್ರಕರಣವನ್ನು ಸಮರ್ಥಿಸಿಕೊಳ್ಳುವುದು ಅಪರಾಧ: ಸಂಸದೆ ಸುಮಲತಾ

ಮಂಡ್ಯ: ಬೆಂಗಳೂರಿನ ಪ್ರಸಿದ್ಧ ರಾಮೇಶ್ವರಂ ಕಫೆಯ ಮೇಲೆ ನಡೆದ ಬಾಂಬ್‌ ದಾಳಿ ಅತ್ಯಂತ ಭಯಾನಕ ವಿಚಾರ, ಇದನ್ನು ಯಾರು ಸಮರ್ಥಿಸಿಕೊಳ್ಳುವ ಕೆಲಸ ಮಾಡಬಾರದು ಮತ್ತು ಅವರ ಪರವಾಗಿ ಹೇಳಿಕೆ ನೀಡುವುದು ಅಪರಾಧವಾಗಿದೆ ಎಂದು ಸಂಸದೆ ಸುಮಲತಾ ಅಂಬರೀಶ್‌ ಹೇಳಿದ್ದಾರೆ.

ನಗರದಲ್ಲಿಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕುಕ್ಕರ್‌ ಬ್ಲಾಸ್ಟ್‌ ಗೂ ಇದಕ್ಕೂ ಸಾಮ್ಯತೆಯಿದೆ ಎಂದು ಹೇಳುತ್ತಾರೆ. ಅದೇನೆ ಇರಲಿ, ಪೊಲೀಸರು ಆದಷ್ಟು ಬೇಗ ಆರೋಪಿಗಳನ್ನು ಬಂಧಿಸುತ್ತಾರೆ ಎನ್ನುವ ವಿಶ್ವಾಸವಿದೆ ಎಂದು ಹೇಳಿದರು.

ವಿಧಾನಸೌಧದಲ್ಲಿ ಪಾಕಿಸ್ತಾನ್‌ ಪರ ಘೋಷಣೆ ಕೂಗಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಪಾಕ್‌ ಪರ ಘೋಷಣೆ ಕೂಗಿರುವುದು ಎಫ್‌ಎಲ್‌ಎಸ್‌ ವರದಿಯಿಂದ ಸತ್ಯಾಂಶ ಹೊರ ಬಂದಿದ್ದರು, ತಪ್ಪು ಮಾಡಿದವರನ್ನು ಖಂಡಿಸದೇ ರಕ್ಷಣೆ ಮಾಡುವುದು ಸರಿಯಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.

ಬಿಜೆಪಿಯಿಂದ ಲೋಕ ಟಿಕೆಟ್‌ ಸಿಗಲಿದೆ: ಮಂಡ್ಯ ಕಣದಿಂದ ಶೇ 100 ರಷ್ಟು ನನಗೆ ಬಿಜೆಪಿಯಿಂದ ಟಿಕೆಟ್‌ ಸಿಗಲಿದೆ. ರಾಜ್ಯದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ವೇಳೆ ನನ್ನ ಹೆಸರು ಇರಲಿದೆ. ಟಿಕೆಟ್‌ಗಾಗಿ ದೆಹಲಿಗೆ ಹೋಗುವ ಅವಶ್ಯಕತೆಯಿಲ್ಲ. ಹೈ ಕರೆದರೆ ಮಾತ್ರ ಹೋಗುತ್ತೇನೆ ಎಂದು ಸಂಸದೆ ಸುಮಲತಾ ಅಂಬರೀಶ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕಳೆದ ಬಾರಿ ಪಕ್ಷೇತರವಾಗಿ ಸ್ಪರ್ಧೆ ಮಾಡಿದ್ದೆ, ಬೇಕದಾದವರು ಜೊತೆಯಲ್ಲಿದ್ದರು. ಯಾವುದೇ ಅನುಭವ ಇಲ್ಲದೇ ಮೊದಲ ಚುನಾವಣೆ ಗೆದ್ದಿದ್ದೆ. ಈಗ ಚಿಹ್ನೆಯಿಂದ ನಿಲ್ಲುತ್ತಿದ್ದೇನೆ. ಈ ಬಾರಿಯ ಚುನಾವಣೆ ಬೇರೆ ರೀತಿ ಇರಲಿದೆ ಎಂದರು.

ಇನ್ನು ಚುನಾವಣಾ ಪ್ರಚಾರಕ್ಕೆ ಸಂಬಂಧಿಸಿದಂತೆ ನಟರಾದ ದರ್ಶನ್‌ ಹಾಗೂ ಯಶ್‌ ಕ್ಯಾಂಪೆನ್‌ ಮಾಡಲಿದ್ದಾರಾ ಎಂಬ ಪ್ರಶ್ನೆಗೆ, ಕಳೆದ ಚುನಾವಣೆಯಲ್ಲಿ ಅವರು ಕೇವಲ ಬೆಂಬಲ ನೀಡಿಲ್ಲ ಬದಲಾಗಿ ತ್ಯಾಗ ಮಾಡಿದ್ದರು. ಸದ್ಯ ಇಬ್ಬರು ಬೇರೆ ಬೇರೆ ಚಿತ್ರಗಳನ್ನು ಮಾಡುತ್ತಿದ್ದು, ಚುನಾವಣಾ ಪ್ರಚಾರಕ್ಕೆ ಬಂದರೆ ಸ್ವಾಗತಿಸುತ್ತೇನೆ. ಅದರೆ, ಎಲ್ಲವನ್ನು ಬಿಟ್ಟು ಕ್ಯಾಂಪೆನ್‌ ಮಾಡಿ ಎನ್ನುವುದು ಸರಿಯಲ್ಲ ಎಂದು ಉತ್ತರಿಸಿದರು.

ಯಶ್‌ ಚುನಾವಣಾ ಪ್ರಚಾರಕ್ಕೆ ಬರುವುದಿಲ್ಲ ಎಂಬ ಹೇಳಿಕೆಗೆ, ಅಂದು ನನ್ನ ಜೊತೆ ಮನೆಯ ಮಕ್ಕಳಂತೆ ಚುನಾವಣಾ ಕಣದಲ್ಲಿ ನಿಂತಿದ್ದಾರು. ಇಂದು ಅವರು ಬಂದರೆ ಸ್ವಾಗತಾರ್ಹ, ಪ್ರಚಾರಕ್ಕೆ ಬರಲಿಲ್ಲ ಎಂದರೂ ಸಹಾ ಯಾವುದೇ ಮನಸ್ಥಾಪ ಇರುವುದಿಲ್ಲ ಎಂದು ಸಂಸದೆ ಸುಮಲತಾ ಅಂಬರೀಶ್‌ ಸ್ಪಷ್ಟಪಡಿಸಿದರು.

andolana

Recent Posts

ಹೇಮಾವತಿ ನದಿ ಹಿನ್ನೀರಿನಲ್ಲಿ ಕಣ್ಮರೆಯಾಗಿದ್ದ ಇಬ್ಬರ ಮೃತದೇಹ ಪತ್ತೆ

ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…

13 mins ago

ಮಧ್ಯಪ್ರಾಚ್ಯ ಮತ್ತೆ ಉದ್ವಿಗ್ನ: ಹಾರ್ಮುಜ್‌ ಜಲಸಂಧಿ ಮುಚ್ಚಿದ ಇರಾನ್‌

ಟೆಹರಾನ್:‌ ಹಾರ್ಮುಜ್‌ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್‌ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…

30 mins ago

ರಾಜ್ಯದಲ್ಲಿ ನೈರುತ್ಯ ಮುಂಗಾರು ಮತ್ತೆ ದುರ್ಬಲ: ತೀವ್ರಗೊಂಡ ಬರದ ಛಾಯೆ

ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…

48 mins ago

ಕಣಿಯನಹುಂಡಿ ತೋಟದ ಮನೆಯಲ್ಲಿ ನೆರವೇರಲಿದೆ ಎಸ್‌.ಜಾನಕಿ ಅವರ ಅಂತ್ಯಕ್ರಿಯೆ

ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…

2 hours ago

ಜಾನಕಿ ಅಮ್ಮ ಮೊದಲು, ಕೊನೆಯ ಹಾಡು ಹಾಡಿದ್ದು, ಗಾಯನ ನಿಲ್ಲಿಸಿದ್ದು ಮೈಸೂರಿನಲ್ಲೇ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಜೀವಮಾನದ ಮೊದಲ ಸಾರ್ವಜನಿಕ ಗಾಯನ ಕಾರ್ಯಕ್ರಮ ಮೈಸೂರಿನಿಂದಲೇ ಆರಂಭವಾಗಿತ್ತು. ಅಚ್ಚರಿಯೆಂದರೆ ಅವರ…

3 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಎಸ್‌ಐಆರ್ : ಕರ್ನಾಟಕದ ಕ್ರಮ ಬಿಜೆಪಿಗೆ ಕಹಿ ಗುಳಿಗೆ !

ಕಳೆದ ಒಂದು ವರ್ಷದಿಂದ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆಯದೇ ಸದ್ದು. ಇದೇನು ಹೊಸ ಬೆಳವಣಿಗೆಯಲ್ಲ. ಇದುವರೆಗೆ ಚುನಾವಣಾ ಆಯೋಗ ದೇಶದಾದ್ಯಂತ…

3 hours ago