ರಾಜ್ಯ

ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದೂಡಿದ ಹೈಕೋರ್ಟ್

ಬೆಂಗಳೂರು: ತಮ್ಮ ವಿರದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣ ರದ್ದು ಕೋರಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಸೆ.19ಕ್ಕೆ ಮುಂದೂಡಿದೆ.

ಪೋಕ್ಸೋ ಪ್ರಕರಣ ರದ್ದುಪಡಿಸುವಂತೆ ಹಾಗೂ ಇದೇ ಪ್ರಕರಣದಲ್ಲಿ ಜಾಮೀನು ಮಂಜೂರು ಮಾಡುವಂತೆ ಕೋರಿ ಮಾಜಿ ಸಿಎಂ ಯಡಿಯೂರಪ್ಪ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಅರ್ಜಿ ವಿಚಾರಣೆ ನಡೆಸಿದೆ.

ಇನ್ನೂ ವಿಚಾರಣೆಯನ್ನ ಮುಂದೂಡುವಂತೆ ಎಸ್‍ಪಿಪಿ ನಾಗೇಶ್ ನಾಯಕ್ ಮನವಿ ಮಾಡಿದರು. ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯ ವಿಚಾರಣೆ ಮುಂದೂಡಿ ಆದೇಶಿಸಿತು.

ಪ್ರಕರಣ ಹಿನ್ನೆಲೆ ಏನು?

ಮಹಿಳೆಯೊಬ್ಬರು ತಮ್ಮ ಪುತ್ರಿಯ ಮೇಲೆ ಬಿಎಸ್‍ವೈ ಲೈಂಗಿಕ ದೌರ್ಜನ್ಯ ಮಾಡಿದ್ದಾರೆ ಎಂದು ಆರೋಪಿಸಿದ್ದರು. ಈ ಬಗ್ಗೆ ಅವರು ನೀಡಿದ ದೂರಿನ ಅಡಿ, ಮಾರ್ಚ್ 14ರಂದು ಸದಾಶಿವನಗರ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾದ ನಂತರ ಸರ್ಕಾರ ಇದನ್ನು ಸಿಐಡಿಗೆ ವರ್ಗಾಯಿಸಿತ್ತು. ಏಪ್ರಿಲ್ 12 ರಂದು ತನಿಖಾಧಿಕಾರಿಯ ಮುಂದೆ ಯಡಿಯೂರಪ್ಪ ಹಾಜರಾಗಿ ವಿಚಾರಣೆಗೆ ಸಹಕರಿಸಿದ್ದರು.

ಈ ಪ್ರಕರಣ ದಾಖಲಾದ ನಂತರ ಸಂತ್ರಸ್ತೆ ಮೃತಪಟ್ಟಿದ್ದಾರೆ. ಈಗ ಸಂತ್ರಸ್ತೆಯ ಪುತ್ರ ಹೈಕೋರ್ಟ್ ಮೆಟ್ಟಿಲೇರಿದ್ದರು. ಪ್ರಕರಣ ಸಂಬಂಧ ಸಿಐಡಿ ಒಂದಷ್ಟು ಸಾಕ್ಷ್ಯ ಕಲೆ ಹಾಕಿದೆ. ದೂರುದಾರೆ ನೀಡಿದ್ದ ವಿಡಿಯೋ ಪಡೆದು ಪರಿಶೀಲನೆ ಜೊತೆಗೆ ಬಾಲಕಿ, ಬಿಎಸ್‍ವೈ ಧ್ವನಿ ಸಂಗ್ರಹ ಮಾಡಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ರವಾನೆ ಮಾಡಿದೆ.

ಈ ಎಲ್ಲಾ ಬೆಳವಣಿಗೆಯ ನಡುವೆ ತಮ್ಮ ಮೇಲಿನ ಆರೋಪ ನಿರಾಧಾರವಾದದ್ದು, ತಮ್ಮ ವಿರುದ್ಧ ದಾಖಲಾದ ಪೋಕ್ಸೋ ಪ್ರಕರಣ ರದ್ದುಗೊಳಿಸಬೇಕು ಎಂದು ಬಿಎಸ್‍ವೈ ನ್ಯಾಯಾಲಯದ ಮೊರೆ ಹೋಗಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಚಾರಣಿಗರ ಸುರಕ್ಷತೆಗಾಗಿ ಟ್ರ್ಯಾಕಿಂಗ್ ಆಪ್, ವಿಮೆ : ಸಚಿವ ಈಶ್ವರ ಖಂಡ್ರೆ

ಬೆಂಗಳೂರು : ರಾಜ್ಯದ ಗಿರಿಶ್ರೇಣಿಗಳಿಗೆ ಬರುವ ಚಾರಣಿಗರ ಸುರಕ್ಷತೆಯ ದೃಷ್ಟಿಯಿಂದ ದೇಶಕ್ಕೆ ಮಾದರಿಯಾಗುವಂತಹ ಪ್ರಮಾಣಿತ ಮಾನದಂಡ (ಎಸ್.ಓ.ಪಿ.) ರೂಪಿಸುವಂತೆ ಅರಣ್ಯ,…

44 mins ago

ಅಡುಗೆ ಅನಿಲ,‌ಪೆಟ್ರೋಲಿಯಂ ಉತ್ಪನ್ನಗಳ ಕೊರತೆಗೆ ಕೇಂದ್ರ ಕಾರಣ ; ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ : ದೇಶದಲ್ಲಿ ಅಡುಗೆ ಅನಿಲ, ಪೆಟ್ರೊಲ್ ಡಿಸೇಲ್ ಕೊರತೆಗೆ ಕೇಂದ್ರ ಸರ್ಕಾರವೇ ಹೊಣೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್…

53 mins ago

ಮೈಸೂರು-ಜೋಧ್‌ಪುರ ನಡುವೆ ವಿಶೇಷ ರೈಲು ಸೇವೆ ಆರಂಭ

ಮೈಸೂರು : ಮೈಸೂರು-ಜೋಧ್‌ಪುರ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭವಾಗಿರುವುದಕ್ಕೆ ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಅಧ್ಯಕ್ಷ…

1 hour ago

ಓದುಗರ ಪತ್ರ | ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸ್ಮಾರಕ ನಿರ್ಮಾಣ ಸ್ವಾಗತಾರ್ಹ

೨೦೨೫ರ ಐಪಿಎಲ್ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ೧೮ ವರ್ಷಗಳ ನಂತರ ಐಪಿಎಲ್ ಇತಿಹಾಸದಲ್ಲೇ ಮೊದಲ ಬಾರಿಗೆ ಜಯಶೀಲರಾಗಿ…

2 hours ago

ಓದುಗರ ಪತ್ರ | ಆಟೋ ಚಾಲಕರಿಗೆ ಸರ್ಕಾರ ಪರಿಹಾರ ನೀಡಲಿ

ಇರಾನ್ ಮೇಲೆ ಅಮೆರಿಕ ಹಾಗೂ ಇಸ್ರೇಲ್ ಯುದ್ಧ ನಡೆಸುತ್ತಿರುವುದರಿಂದ ಕೊಲ್ಲಿ ರಾಷ್ಟ್ರಗಳಿಂದ ಹಾರ್ಮುಜ್ ಜಲಸಂಧಿಯ ಮೂಲಕ ಪೂರೈಕೆಯಾಗುತ್ತಿದ್ದ ಕಚ್ಚಾ ತೈಲ…

2 hours ago

ಓದುಗರ ಪತ್ರ | ಜನಗಣತಿ ದೇಶದ ಏಳಿಗೆಯ ದಿಕ್ಸೂಚಿ

ಜನಗಣತಿ ಕಾರ್ಯದಲ್ಲಿ ಗಣತಿದಾರರು ತಮ್ಮ ವ್ಯಾಪ್ತಿಯ ಪ್ರತಿಯೊಂದು ಮನೆಗೂ ಭೇಟಿ ನೀಡಬೇಕು. ಗುರುತಿನ ಚೀಟಿ ಧರಿಸಿ, ಸೌಜನ್ಯದಿಂದ ಮಾಹಿತಿ ಸಂಗ್ರಹಿಸಿ.…

2 hours ago