ರಾಜ್ಯ

ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದೂಡಿದ ಹೈಕೋರ್ಟ್

ಬೆಂಗಳೂರು: ತಮ್ಮ ವಿರದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣ ರದ್ದು ಕೋರಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಸೆ.19ಕ್ಕೆ ಮುಂದೂಡಿದೆ.

ಪೋಕ್ಸೋ ಪ್ರಕರಣ ರದ್ದುಪಡಿಸುವಂತೆ ಹಾಗೂ ಇದೇ ಪ್ರಕರಣದಲ್ಲಿ ಜಾಮೀನು ಮಂಜೂರು ಮಾಡುವಂತೆ ಕೋರಿ ಮಾಜಿ ಸಿಎಂ ಯಡಿಯೂರಪ್ಪ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಅರ್ಜಿ ವಿಚಾರಣೆ ನಡೆಸಿದೆ.

ಇನ್ನೂ ವಿಚಾರಣೆಯನ್ನ ಮುಂದೂಡುವಂತೆ ಎಸ್‍ಪಿಪಿ ನಾಗೇಶ್ ನಾಯಕ್ ಮನವಿ ಮಾಡಿದರು. ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯ ವಿಚಾರಣೆ ಮುಂದೂಡಿ ಆದೇಶಿಸಿತು.

ಪ್ರಕರಣ ಹಿನ್ನೆಲೆ ಏನು?

ಮಹಿಳೆಯೊಬ್ಬರು ತಮ್ಮ ಪುತ್ರಿಯ ಮೇಲೆ ಬಿಎಸ್‍ವೈ ಲೈಂಗಿಕ ದೌರ್ಜನ್ಯ ಮಾಡಿದ್ದಾರೆ ಎಂದು ಆರೋಪಿಸಿದ್ದರು. ಈ ಬಗ್ಗೆ ಅವರು ನೀಡಿದ ದೂರಿನ ಅಡಿ, ಮಾರ್ಚ್ 14ರಂದು ಸದಾಶಿವನಗರ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾದ ನಂತರ ಸರ್ಕಾರ ಇದನ್ನು ಸಿಐಡಿಗೆ ವರ್ಗಾಯಿಸಿತ್ತು. ಏಪ್ರಿಲ್ 12 ರಂದು ತನಿಖಾಧಿಕಾರಿಯ ಮುಂದೆ ಯಡಿಯೂರಪ್ಪ ಹಾಜರಾಗಿ ವಿಚಾರಣೆಗೆ ಸಹಕರಿಸಿದ್ದರು.

ಈ ಪ್ರಕರಣ ದಾಖಲಾದ ನಂತರ ಸಂತ್ರಸ್ತೆ ಮೃತಪಟ್ಟಿದ್ದಾರೆ. ಈಗ ಸಂತ್ರಸ್ತೆಯ ಪುತ್ರ ಹೈಕೋರ್ಟ್ ಮೆಟ್ಟಿಲೇರಿದ್ದರು. ಪ್ರಕರಣ ಸಂಬಂಧ ಸಿಐಡಿ ಒಂದಷ್ಟು ಸಾಕ್ಷ್ಯ ಕಲೆ ಹಾಕಿದೆ. ದೂರುದಾರೆ ನೀಡಿದ್ದ ವಿಡಿಯೋ ಪಡೆದು ಪರಿಶೀಲನೆ ಜೊತೆಗೆ ಬಾಲಕಿ, ಬಿಎಸ್‍ವೈ ಧ್ವನಿ ಸಂಗ್ರಹ ಮಾಡಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ರವಾನೆ ಮಾಡಿದೆ.

ಈ ಎಲ್ಲಾ ಬೆಳವಣಿಗೆಯ ನಡುವೆ ತಮ್ಮ ಮೇಲಿನ ಆರೋಪ ನಿರಾಧಾರವಾದದ್ದು, ತಮ್ಮ ವಿರುದ್ಧ ದಾಖಲಾದ ಪೋಕ್ಸೋ ಪ್ರಕರಣ ರದ್ದುಗೊಳಿಸಬೇಕು ಎಂದು ಬಿಎಸ್‍ವೈ ನ್ಯಾಯಾಲಯದ ಮೊರೆ ಹೋಗಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕಳಪೆ ಪ್ರಗತಿ ಸಾಧಿಸಿದ 5 ಪಿಡಿಒಗಳಿಗೆ ಕಾರಣ ಕೇಳಿ ನೋಟಿಸ್ ನೀಡಿದ ಸಿಇಒ ನಂದಿನಿ

ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…

10 hours ago

ಅಕ್ರಮ ನಾಟ ಸಾಗಾಟ : ಲಾರಿ ಸಮೇತ ಮೂವರ ಬಂಧನ

ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…

10 hours ago

ಡೆವಿಲ್‌ ಅಬ್ಬರ | ಮೊದಲ ದಿನದ ಗಳಿಗೆ ಎಷ್ಟು?

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…

10 hours ago

ಮಳವಳ್ಳಿ | ವಿದ್ಯುತ್‌ ಸ್ಪರ್ಶ ; ಕಾರ್ಮಿಕ ಸಾವು

ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…

10 hours ago

2027ರ ಜನಗಣತಿ | 11,718 ಕೋಟಿ ನೀಡಲು ಕೇಂದ್ರ ಸಂಪುಟ ಅನುಮೋದನೆ

ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…

10 hours ago

ಇಂಡಿಗೋ ಬಿಕ್ಕಟ್ಟು | ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳ ಅಮಾನತ್ತು

ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…

11 hours ago