ಬೆಂಗಳೂರು: ತಮ್ಮ ವಿರದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣ ರದ್ದು ಕೋರಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಸೆ.19ಕ್ಕೆ ಮುಂದೂಡಿದೆ.
ಪೋಕ್ಸೋ ಪ್ರಕರಣ ರದ್ದುಪಡಿಸುವಂತೆ ಹಾಗೂ ಇದೇ ಪ್ರಕರಣದಲ್ಲಿ ಜಾಮೀನು ಮಂಜೂರು ಮಾಡುವಂತೆ ಕೋರಿ ಮಾಜಿ ಸಿಎಂ ಯಡಿಯೂರಪ್ಪ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಅರ್ಜಿ ವಿಚಾರಣೆ ನಡೆಸಿದೆ.
ಇನ್ನೂ ವಿಚಾರಣೆಯನ್ನ ಮುಂದೂಡುವಂತೆ ಎಸ್ಪಿಪಿ ನಾಗೇಶ್ ನಾಯಕ್ ಮನವಿ ಮಾಡಿದರು. ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯ ವಿಚಾರಣೆ ಮುಂದೂಡಿ ಆದೇಶಿಸಿತು.
ಪ್ರಕರಣ ಹಿನ್ನೆಲೆ ಏನು?
ಮಹಿಳೆಯೊಬ್ಬರು ತಮ್ಮ ಪುತ್ರಿಯ ಮೇಲೆ ಬಿಎಸ್ವೈ ಲೈಂಗಿಕ ದೌರ್ಜನ್ಯ ಮಾಡಿದ್ದಾರೆ ಎಂದು ಆರೋಪಿಸಿದ್ದರು. ಈ ಬಗ್ಗೆ ಅವರು ನೀಡಿದ ದೂರಿನ ಅಡಿ, ಮಾರ್ಚ್ 14ರಂದು ಸದಾಶಿವನಗರ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾದ ನಂತರ ಸರ್ಕಾರ ಇದನ್ನು ಸಿಐಡಿಗೆ ವರ್ಗಾಯಿಸಿತ್ತು. ಏಪ್ರಿಲ್ 12 ರಂದು ತನಿಖಾಧಿಕಾರಿಯ ಮುಂದೆ ಯಡಿಯೂರಪ್ಪ ಹಾಜರಾಗಿ ವಿಚಾರಣೆಗೆ ಸಹಕರಿಸಿದ್ದರು.
ಈ ಪ್ರಕರಣ ದಾಖಲಾದ ನಂತರ ಸಂತ್ರಸ್ತೆ ಮೃತಪಟ್ಟಿದ್ದಾರೆ. ಈಗ ಸಂತ್ರಸ್ತೆಯ ಪುತ್ರ ಹೈಕೋರ್ಟ್ ಮೆಟ್ಟಿಲೇರಿದ್ದರು. ಪ್ರಕರಣ ಸಂಬಂಧ ಸಿಐಡಿ ಒಂದಷ್ಟು ಸಾಕ್ಷ್ಯ ಕಲೆ ಹಾಕಿದೆ. ದೂರುದಾರೆ ನೀಡಿದ್ದ ವಿಡಿಯೋ ಪಡೆದು ಪರಿಶೀಲನೆ ಜೊತೆಗೆ ಬಾಲಕಿ, ಬಿಎಸ್ವೈ ಧ್ವನಿ ಸಂಗ್ರಹ ಮಾಡಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ರವಾನೆ ಮಾಡಿದೆ.
ಈ ಎಲ್ಲಾ ಬೆಳವಣಿಗೆಯ ನಡುವೆ ತಮ್ಮ ಮೇಲಿನ ಆರೋಪ ನಿರಾಧಾರವಾದದ್ದು, ತಮ್ಮ ವಿರುದ್ಧ ದಾಖಲಾದ ಪೋಕ್ಸೋ ಪ್ರಕರಣ ರದ್ದುಗೊಳಿಸಬೇಕು ಎಂದು ಬಿಎಸ್ವೈ ನ್ಯಾಯಾಲಯದ ಮೊರೆ ಹೋಗಿದ್ದರು.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…