ಬೆಂಗಳೂರು: ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಖುದ್ದು ಮಾರ್ಚ್.15 ರಂದು ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರಿನ 1ನೇ ತ್ವರಿತಗತಿ ನ್ಯಾಯಾಲಯ ನೋಟಿಸ್ ನೀಡಿದೆ.
ಬಿಎಸ್ವೈ ವಿರುದ್ಧದ ಪೊಕ್ಸೋ ಪ್ರಕರಣ ವಿಚಾರದಲ್ಲಿ ಇತ್ತೀಚೆಗೆ ಹೈಕೋರ್ಟ್ನ ಧಾರವಾಡ ಪೀಠ ನಿರೀಕ್ಷಣಾ ಜಾಮೀನು ಮಂಜೂರು ಮಾಡಲಾಗಿತ್ತು. ಆದರೆ ಪ್ರಕರಣ ರದ್ದು ಮಾಡಲು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ಧ ಪೀಠವೂ ನಿರಾಕರಿಸಿತ್ತು. ಹೀಗಾಗಿ ಯಡಿಯೂರಪ್ಪ ಬಂಧನದಿಂದ ಪಾರಾದರೂ ವಿಚಾರಣೆ ಎದುರಿಸಲೇಬೇಕಾಗಿದೆ. ಅಂತೆಯೇ ಕೋರ್ಟ್ ದಿನಾಂಕ ನಿಗಧಿಪಡಿಸಿ ಬೆಂಗಳೂರಿನ 1ನೇ ತ್ವರಿತಗತಿ ನ್ಯಾಯಾಲಯ ನೋಟಿಸ್ ಜಾರಿಗೊಳಿಸಿ ವಿಚಾರಣೆಗೆ ಹಾಜರಾಗುವಂತೆ ಆದೇಶ ಹೊರಡಿಸಿದೆ.
ಇನ್ನು ಈ ಪ್ರಕರಣದ ಆರೋಪಿಗಳಾಗಿರುವ ರುದ್ರೇಶ, ವೈ.ಎಂ.ಅರುಣ, ಮರುಳಸಿದ್ದಯ್ಯ ಹಾಗೂ ಜಿ.ಮರಿಸ್ವಾಮಿಗೂ ಅವರಿಗೂ ಸಹ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರಿನ 1ನೇ ತ್ವರಿತಗತಿ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.
ಏನಿದು ಪ್ರಕರಣ?
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪ 2024 ರ ಮಾರ್ಚ್ನಲ್ಲಿ ಕೇಳಿಬಂದಿತ್ತು. ಈ ಬಗ್ಗೆ ಸಂತ್ರಸ್ತೆಯ ತಾಯಿ ಬಿಎಸ್ವೈ ವಿರುದ್ಧ ಆರೋಪ ಮಾಡಿದ್ದರು.
ಕೊಡಗು: ಜಿಲ್ಲೆಯಲ್ಲಿರುವ ಏಕೈಕ ಹಾರಂಗಿ ಜಲಾಶಯ ಮಳೆಗಾಲದಲ್ಲಿ ತುಂಬಿ ನದಿ ಪಾತ್ರದ ಜನರಲ್ಲಿ ಆತಂಕ ಸೃಷ್ಟಿಸಿತ್ತು. ಹಾಗೆ ಅಬ್ಬರಿಸಿದ ಹಾರಂಗಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ವಿದ್ಯುತ್ ಖಾಸಗೀಕರಣ ವಿರೋಧಿಸಿ…
ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ಗ್ರಂಥಾಲಯವಿಲ್ಲದೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ. ಗ್ರಾಮದಲ್ಲಿ ೧೦೦ಕ್ಕೂ ಹೆಚ್ಚು…
ಪತ್ರಿಕಾ ವಿತರಕರು ಅಕ್ಷರಶಃ ಸಮಾಜದ ಅದೃಶ್ಯ ಕಾಯಕಯೋಗಿಗಳು. ಮಳೆ, ಗಾಳಿ, ಚಳಿ ಎನ್ನದೆ ಜ್ಞಾನದೀವಿಗೆ ಹಂಚುವ ಇವರ ಬದುಕು ಇಂದಿಗೂ…
ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿರುವ ಸರ್ಕಾರಿ ಶಾಲೆಯನ್ನು ಉನ್ನತಿಕರಣಗೊಳಿಸದೇ ಇರುವುರಿಂದ ಪೋಷಕರು ಮಕ್ಕಳನ್ನು ಶಾಲೆಗೆ ದಾಖಲಿಸಲು ಹಿಂದೇಟು ಹಾಕುತ್ತಿದ್ದಾರೆ. ಪ್ರಸ್ತುತ…
ಸೈಬರ್ ವಂಚನೆಯ ಸಂತ್ರಸ್ತರಿಗೆ ಗರಿಷ್ಟ ರೂ.೨೫,೦೦೦ ಪರಿಹಾರ ನೀಡುವುದಾಗಿ ಭಾರತದ ರಿಸರ್ವ್ ಬ್ಯಾಂಕ್ ಪ್ರಕಟಿಸಿರುವುದು ಸ್ವಾಗತಾರ್ಹವಾಗಿದೆ. ಆದರೆ, ಅನೇಕ ಸಂದರ್ಭಗಳಲ್ಲಿ…