ಬೆಂಗಳೂರು : ದೇಶದ ಹಿರಿಮೆಯನ್ನು ಎತ್ತಿ ಹಿಡಿಯಬೇಕಿದ್ದ ಹಾಕಿ ತಂಡದ ಸದಸ್ಯನೊಬ್ಬ ತಲೆ ತಗ್ಗಿಸುವಂತಹ ಕೆಲಸ ಮಾಡಿದ್ದಾನೆ. ಹೌದು, ಭಾರತೀಯ ಹಾಕಿ ತಂಡದ ಸದಸ್ಯನ ಮೇಲೆ ಪೋಕ್ಸೊ ಪ್ರಕರಣ ದಾಖಲಾಗಿದೆ. ಯುವತಿಯೊಬ್ಬಳನ್ನು ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ್ದಾನೆ ಎಂಬ ಆರೋಪ ಕೇಳಿ ಬಂದಿದ್ದು, ಈ ಸಂಬಂಧ ಜ್ಞಾನ ಭಾರತಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ವರುಣ್ ಕುಮಾರ್ ಮೂಲತಃ ಹಿಮಾಚಲ ಪ್ರದೇಶ ಮೂಲದವನಾಗಿದ್ದು, ಭಾರತೀಯ ಹಾಕಿ ತಂಡದ ಡಿಫೆಂಡರ್ ಆಗಿದ್ದಾನೆ. 2017ರಲ್ಲಿ ಭಾರತ ತಂಡದ ಪರ ಪಾದಾರ್ಪಣೆ ಮಾಡಿದ್ದ.
2022ರ ಬರ್ಮಿಂಗ್ ಹ್ಯಾಂ – ಕಾಮನ್ ವೆಲ್ತ್ ಗೇಮ್ಸ್ನಲ್ಲಿ ಬೆಳ್ಳಿ ಪದಕ ಗೆದ್ದಿದ್ದ. 2022ರ ಏಷ್ಯನ್ ಗೇಮ್ಸ್ನಲ್ಲಿ ಚಿನ್ನ ಗೆದ್ದ ತಂಡದಲ್ಲಿದ್ದ. 2020 ರ ಟೋಕಿಯೋ ಒಲಿಂಪಿಕ್ಸ್ನಲ್ಲಿ ಕಂಚಿನ ಪದಕ ಗೆದ್ದ ಭಾರತ ತಂಡದ ಸದಸ್ಯನಾಗಿದ್ದ.
ಕಂಚಿನ ಸಾಧನೆ ಬಳಿಕ ವರುಣ್ ಕುಮಾರ್ 1 ಕೋಟಿ ಬಹುಮಾನ ಸಿಕ್ಕಿತ್ತು.ಹಿಮಾಚಲ ಪ್ರದೇಶ ಸರ್ಕಾರ 1 ಕೋಟಿ ಬಹುಮಾನ ಘೋಷಿಸಿತ್ತು. 2021 ನೇ ಸಾಲಿನ ಅರ್ಜುನ ಪ್ರಶಸ್ತಿಗೂ ವರುಣ್ ಕುಮಾರ್ ಭಾಜನರಾಗಿದ್ದ ಎಂದು ತಿಳಿದು ಬಂದಿದೆ
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…
ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…