ಬೆಂಗಳೂರು: ಚಿತ್ರದುರ್ಗ ಮೂಲಕ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್, ಪವಿತ್ರಾಗೌಡ ಸೇರಿ ಈವರೆಗೆ ಒಟ್ಟು 17 ಮಂದಿಯನ್ನು ಬಂಧಿಸಲಾಗಿದೆ. ಇದೊಂದು ಗಂಭೀರ ಪ್ರಕರಣವಾಗಿದ್ದು, ಅತ್ಯಂತ ಹೀನ ಮತ್ತು ಹೇಯ ಕೃತ್ಯವಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ. ದಯಾನಂದ್ ಹೇಳಿದರು.
ಮಂಗಳವಾರ (ಜೂನ್.18) ಮಾಧ್ಯಮಗಳೊಂದಿಗೆ ಮಾತನಾಡಿ, ಪೊಲೀಸರ ನಿಷ್ಪಕ್ಷಪಾತ ಹಾಗೂ ಸಮಯಪ್ರಜ್ಞೆಯಿಂ ಈ ಪ್ರಕರಣ ಬೆಳಕಿಗೆ ಬಂದಿದೆ. ಸ್ವಲ್ಪ ನಿರ್ಲಕ್ಷ್ಯ ವಹಿಸಿದ್ದರು ಪ್ರಕರಣವನ್ನು ಬೇರೆ ದಿಕ್ಕಿಗೆ ಬದಲಾಯಿಸಲಾಗುತ್ತಿತ್ತು. ಪೊಲೀಸರು ತ್ವರಿತ ಗತಿಯಲ್ಲಿ ಮಾಹಿತಿ ಕಲೆ ಹಾಕುವ ಮೂಲಕ ಪ್ರಕರಣವನ್ನು ಬಯಲಿಗೆಳೆದಿದ್ದಾರೆ. ಇದೊಂದು ಗಂಭೀರ ಪ್ರಕರಣವಾಗಿದ್ದು, ಮೃತ ವ್ಯಕ್ತಿಯನ್ನು ಅತ್ಯಂತ ದೌರ್ಜನ್ಯಯುತವಾಗಿ ಹತ್ಯೆ ಮಾಡಲಾಗಿದೆ ಎಂದು ದಯಾನಂದ್ ಮಾಹಿತಿ ನೀಡಿದರು.
ಪ್ರಕರಣ ತನಿಖಾ ಹಂತದಲ್ಲಿದ್ದು, ಹೆಚ್ಚಿನ ವಿವರಗಳನ್ನು ಹಂಚಿಕೊಳ್ಳಲು ಸಾಧ್ಯವಿಲ್ಲ. ಆದರೆ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವ ಮೂಲಕ ಮೃತ ವ್ಯಕ್ತಿಯ ಕುಟುಂಬಕ್ಕೆ ನಾವು ನ್ಯಾಯ ಒದಗಿಸಬೇಕಿದೆ. ನ್ಯಾಯಾಲಯದ ಮುಂದೆ ವಿಚಾರಣೆಗೆ ಒಳಪಡಿಸುವ ವೇಳೆ ಸಮರ್ಪಕ ದಾಖಲೆಗಳನ್ನು ಒದಗಿಸಿ ಮೃತ ರೇಣುಕಾಸ್ವಾಮಿಗೆ ನ್ಯಾಯ ಒದಗಿಸುವ ಪ್ರಯತ್ನ ಮಾಡಲಾಗುವುದು ಎಂದು ದಯಾನಂದ್ ಹೇಳಿದರು.
ಮೈಸೂರಿನಿಂದ ಚಾಮರಾಜನಗರಕ್ಕೆ ಪ್ರತಿನಿತ್ಯ ೬ ರೈಲುಗಳು ಸಂಚರಿಸುತ್ತಿವೆ. ಈಗ ಸಂಚರಿಸುವ ರೈಲುಗಳ ಜೊತೆ ಚಾಮರಾಜನಗರದಿಂದ ಮೈಸೂರಿಗೆ ಬೆಳಿಗ್ಗೆ ೪.೪೦ಕ್ಕೆ ,…
ವಸಂತಕುಮಾರ ಮೈಸೂರಮಠ, ಸಾಮಾಜಿಕ ಕಾರ್ಯಕರ್ತರು ಶ್ವಾನ ಮನುಷ್ಯನ ಅತ್ಯತ್ತಮ ಸ್ನೇಹಿತ ಎಂಬುದರಲ್ಲಿ ಸಂದೇಹವಿಲ್ಲ! ಆದರೆ ಅವು ಉಪದ್ರವಕಾರಿ ಯಾದಾಗ ಏನಾದರೂ…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಬ್ರಿಟಿಷ್ ವಸಾಹತುಶಾಹಿ ಆಡಳಿತದ ಕಾಲದಲ್ಲಿ ಹೆಸರಿಸಲಾಗಿದ್ದ ಸರ್ಕಾರಿ ಕಾರ್ಯಾಲಯಗಳು ಮತ್ತು ರಸ್ತೆಗಳ ಹೆಸರುಗಳನ್ನು ಕೇಂದ್ರದಲ್ಲಿ…
ಕೆ.ಬಿ.ರಮೇಶನಾಯಕ ಮೈಸೂರು: ದೇಶದಲ್ಲಿ ಇಂಡಿಗೋ ಏರ್ ಲೈನ್ಸ್ ಸಂಸ್ಥೆಯ ವಿಮಾನಗಳ ಸೇವೆ ವ್ಯತ್ಯಯಗೊಂಡಿದ್ದು, ಮೈಸೂರು ವಿಮಾನ ನಿಲ್ದಾಣದಿಂದ ಹೊರ ರಾಜ್ಯಗಳಿಗೆ…
ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…
ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…