ರಾಜ್ಯ

ಇದೊಂದು ಅತ್ಯಂತ ಹೇಯ ಮತ್ತು ಹೀನ ಕೃತ್ಯ: ಪೊಲೀಸ್‌ ಆಯಕ್ತ ಬಿ.ದಯಾನಂದ್‌

ಬೆಂಗಳೂರು: ಚಿತ್ರದುರ್ಗ ಮೂಲಕ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌, ಪವಿತ್ರಾಗೌಡ ಸೇರಿ ಈವರೆಗೆ ಒಟ್ಟು 17 ಮಂದಿಯನ್ನು ಬಂಧಿಸಲಾಗಿದೆ. ಇದೊಂದು ಗಂಭೀರ ಪ್ರಕರಣವಾಗಿದ್ದು, ಅತ್ಯಂತ ಹೀನ ಮತ್ತು ಹೇಯ ಕೃತ್ಯವಾಗಿದೆ ಎಂದು ಬೆಂಗಳೂರು ನಗರ ಪೊಲೀಸ್‌ ಆಯುಕ್ತರಾದ ಬಿ. ದಯಾನಂದ್‌ ಹೇಳಿದರು.

ಮಂಗಳವಾರ (ಜೂನ್‌.18) ಮಾಧ್ಯಮಗಳೊಂದಿಗೆ ಮಾತನಾಡಿ, ಪೊಲೀಸರ ನಿಷ್ಪಕ್ಷಪಾತ ಹಾಗೂ ಸಮಯಪ್ರಜ್ಞೆಯಿಂ ಈ ಪ್ರಕರಣ ಬೆಳಕಿಗೆ ಬಂದಿದೆ. ಸ್ವಲ್ಪ ನಿರ್ಲಕ್ಷ್ಯ ವಹಿಸಿದ್ದರು ಪ್ರಕರಣವನ್ನು ಬೇರೆ ದಿಕ್ಕಿಗೆ ಬದಲಾಯಿಸಲಾಗುತ್ತಿತ್ತು. ಪೊಲೀಸರು ತ್ವರಿತ ಗತಿಯಲ್ಲಿ ಮಾಹಿತಿ ಕಲೆ ಹಾಕುವ ಮೂಲಕ ಪ್ರಕರಣವನ್ನು ಬಯಲಿಗೆಳೆದಿದ್ದಾರೆ. ಇದೊಂದು ಗಂಭೀರ ಪ್ರಕರಣವಾಗಿದ್ದು, ಮೃತ ವ್ಯಕ್ತಿಯನ್ನು ಅತ್ಯಂತ ದೌರ್ಜನ್ಯಯುತವಾಗಿ ಹತ್ಯೆ ಮಾಡಲಾಗಿದೆ ಎಂದು ದಯಾನಂದ್‌ ಮಾಹಿತಿ ನೀಡಿದರು.

ಪ್ರಕರಣ ತನಿಖಾ ಹಂತದಲ್ಲಿದ್ದು, ಹೆಚ್ಚಿನ ವಿವರಗಳನ್ನು ಹಂಚಿಕೊಳ್ಳಲು ಸಾಧ್ಯವಿಲ್ಲ. ಆದರೆ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವ ಮೂಲಕ ಮೃತ ವ್ಯಕ್ತಿಯ ಕುಟುಂಬಕ್ಕೆ ನಾವು ನ್ಯಾಯ ಒದಗಿಸಬೇಕಿದೆ. ನ್ಯಾಯಾಲಯದ ಮುಂದೆ ವಿಚಾರಣೆಗೆ ಒಳಪಡಿಸುವ ವೇಳೆ ಸಮರ್ಪಕ ದಾಖಲೆಗಳನ್ನು ಒದಗಿಸಿ ಮೃತ ರೇಣುಕಾಸ್ವಾಮಿಗೆ ನ್ಯಾಯ ಒದಗಿಸುವ ಪ್ರಯತ್ನ ಮಾಡಲಾಗುವುದು ಎಂದು ದಯಾನಂದ್‌ ಹೇಳಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ:  ಚಾ.ನಗರ-ಮೈಸೂರು ನಡುವೆ ಹೆಚ್ಚಿನ ರೈಲು ಸೌಲಭ್ಯ ಕಲ್ಪಿಸಿ

ಮೈಸೂರಿನಿಂದ ಚಾಮರಾಜನಗರಕ್ಕೆ ಪ್ರತಿನಿತ್ಯ ೬ ರೈಲುಗಳು ಸಂಚರಿಸುತ್ತಿವೆ. ಈಗ ಸಂಚರಿಸುವ ರೈಲುಗಳ ಜೊತೆ ಚಾಮರಾಜನಗರದಿಂದ ಮೈಸೂರಿಗೆ ಬೆಳಿಗ್ಗೆ ೪.೪೦ಕ್ಕೆ ,…

18 mins ago

ಉಪದ್ರವಕಾರಿ ಶ್ವಾನಗಳ ನಿಯಂತ್ರಣಕ್ಕೆ ಪರಿಹಾರ ಕ್ರಮ ಅಗತ್ಯ

ವಸಂತಕುಮಾರ ಮೈಸೂರಮಠ, ಸಾಮಾಜಿಕ ಕಾರ್ಯಕರ್ತರು ಶ್ವಾನ ಮನುಷ್ಯನ ಅತ್ಯತ್ತಮ ಸ್ನೇಹಿತ ಎಂಬುದರಲ್ಲಿ ಸಂದೇಹವಿಲ್ಲ! ಆದರೆ ಅವು ಉಪದ್ರವಕಾರಿ ಯಾದಾಗ ಏನಾದರೂ…

34 mins ago

ಶಿವಾಜಿ ಗಣೇಶನ್‌ ವಾರದ ಅಂಕಣ: ಹೆಸರಿನಲ್ಲೇನಿದೆ; ಆಡಳಿತದಲ್ಲಿ ಬದಲಾಗಬೇಕು

ದೆಹಲಿ ಕಣ್ಣೋಟ  ಶಿವಾಜಿ ಗಣೇಶನ್‌ ಬ್ರಿಟಿಷ್ ವಸಾಹತುಶಾಹಿ ಆಡಳಿತದ ಕಾಲದಲ್ಲಿ ಹೆಸರಿಸಲಾಗಿದ್ದ ಸರ್ಕಾರಿ ಕಾರ್ಯಾಲಯಗಳು ಮತ್ತು ರಸ್ತೆಗಳ ಹೆಸರುಗಳನ್ನು ಕೇಂದ್ರದಲ್ಲಿ…

1 hour ago

ಇದ್ದೆರಡು ಇಂಡಿಗೋ ರದ್ದು

ಕೆ.ಬಿ.ರಮೇಶನಾಯಕ ಮೈಸೂರು: ದೇಶದಲ್ಲಿ ಇಂಡಿಗೋ ಏರ್ ಲೈನ್ಸ್ ಸಂಸ್ಥೆಯ ವಿಮಾನಗಳ ಸೇವೆ ವ್ಯತ್ಯಯಗೊಂಡಿದ್ದು, ಮೈಸೂರು ವಿಮಾನ ನಿಲ್ದಾಣದಿಂದ ಹೊರ ರಾಜ್ಯಗಳಿಗೆ…

2 hours ago

ಸಿಎಂಗೆ ವಿದ್ಯಾರ್ಥಿಗಳ ಪತ್ರ

ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…

4 hours ago

ದಿವ್ಯ ಎಂಬ ಅಂದಿನ ಕಾಲದ ಪಣ ಪರೀಕ್ಷೆ

ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…

4 hours ago