ಬೆಂಗಳೂರು: ಚಿತ್ರದುರ್ಗ ಮೂಲಕ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್, ಪವಿತ್ರಾಗೌಡ ಸೇರಿ ಈವರೆಗೆ ಒಟ್ಟು 17 ಮಂದಿಯನ್ನು ಬಂಧಿಸಲಾಗಿದೆ. ಇದೊಂದು ಗಂಭೀರ ಪ್ರಕರಣವಾಗಿದ್ದು, ಅತ್ಯಂತ ಹೀನ ಮತ್ತು ಹೇಯ ಕೃತ್ಯವಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ. ದಯಾನಂದ್ ಹೇಳಿದರು.
ಮಂಗಳವಾರ (ಜೂನ್.18) ಮಾಧ್ಯಮಗಳೊಂದಿಗೆ ಮಾತನಾಡಿ, ಪೊಲೀಸರ ನಿಷ್ಪಕ್ಷಪಾತ ಹಾಗೂ ಸಮಯಪ್ರಜ್ಞೆಯಿಂ ಈ ಪ್ರಕರಣ ಬೆಳಕಿಗೆ ಬಂದಿದೆ. ಸ್ವಲ್ಪ ನಿರ್ಲಕ್ಷ್ಯ ವಹಿಸಿದ್ದರು ಪ್ರಕರಣವನ್ನು ಬೇರೆ ದಿಕ್ಕಿಗೆ ಬದಲಾಯಿಸಲಾಗುತ್ತಿತ್ತು. ಪೊಲೀಸರು ತ್ವರಿತ ಗತಿಯಲ್ಲಿ ಮಾಹಿತಿ ಕಲೆ ಹಾಕುವ ಮೂಲಕ ಪ್ರಕರಣವನ್ನು ಬಯಲಿಗೆಳೆದಿದ್ದಾರೆ. ಇದೊಂದು ಗಂಭೀರ ಪ್ರಕರಣವಾಗಿದ್ದು, ಮೃತ ವ್ಯಕ್ತಿಯನ್ನು ಅತ್ಯಂತ ದೌರ್ಜನ್ಯಯುತವಾಗಿ ಹತ್ಯೆ ಮಾಡಲಾಗಿದೆ ಎಂದು ದಯಾನಂದ್ ಮಾಹಿತಿ ನೀಡಿದರು.
ಪ್ರಕರಣ ತನಿಖಾ ಹಂತದಲ್ಲಿದ್ದು, ಹೆಚ್ಚಿನ ವಿವರಗಳನ್ನು ಹಂಚಿಕೊಳ್ಳಲು ಸಾಧ್ಯವಿಲ್ಲ. ಆದರೆ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವ ಮೂಲಕ ಮೃತ ವ್ಯಕ್ತಿಯ ಕುಟುಂಬಕ್ಕೆ ನಾವು ನ್ಯಾಯ ಒದಗಿಸಬೇಕಿದೆ. ನ್ಯಾಯಾಲಯದ ಮುಂದೆ ವಿಚಾರಣೆಗೆ ಒಳಪಡಿಸುವ ವೇಳೆ ಸಮರ್ಪಕ ದಾಖಲೆಗಳನ್ನು ಒದಗಿಸಿ ಮೃತ ರೇಣುಕಾಸ್ವಾಮಿಗೆ ನ್ಯಾಯ ಒದಗಿಸುವ ಪ್ರಯತ್ನ ಮಾಡಲಾಗುವುದು ಎಂದು ದಯಾನಂದ್ ಹೇಳಿದರು.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…