ರಾಜ್ಯ

ಸಿ.ಟಿ ರವಿ ಕೊಲೆಗೆ ಪೊಲೀಸರ ಸಂಚು: ಅಶೋಕ್‌ ಆರೋಪ

ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಕ್ಷೇಪಾರ್ಹ ಪದ ಬಳಸಿದ್ದಾರೆ ಎಂಬ ಆರೋಪದ ಮೇಲೆ ಎಂಎಲ್‌ಸಿ ಸಿ.ಟಿ.ರವಿಯವರನ್ನು ಪೊಲೀಸರೇ ಕೊಲೆ ಮಾಡಲು ಸಂಚು ರೂಪಿಸಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮಿನಿ ಪಾಕಿಸ್ತಾನ ತಾಯಾರಾಗುತ್ತಿದೆ. ಇಲ್ಲಿ ತಾಲಿಬಾನ್ ಪರ ಆಡಳಿತ ನಡೆಯುತ್ತಿದೆ. ಪೊಲೀಸರು ಸರ್ಕಾರದೊಂದಿಗೆ ಶಾಮೀಲಾಗಿ ಸಿ.ಟಿ.ರವಿಯವರನ್ನು ಕೊಲೆ ಮಾಡಲು ಸಂಚು ರೂಪಿಸಿದ್ದಾರೆ. ಒಂದು ವೇಳೆ ಅವರ ಜೀವಕ್ಕೆ ತೊಂದರೆಯಾದರೆ ಅದಕ್ಕೆ ಪೊಲೀಸರೇ ಕಾರಣ ಎಂದು ಎಚ್ಚರಿಕೆ ಕೊಟ್ಟರು.

ಸಿ.ಟಿ.ರವಿಯನ್ನು ಕೊಲೆ ಮಾಡುವ ಉದ್ದೇಶದಿಂದಲೇ ಕೆಲವು ಗೂಂಡಾಗಳು ಸುವರ್ಣಸೌಧಕ್ಕೆ ಬಂದಿದ್ದರು. ಇವರ ಜೊತೆ ಪೊಲೀಸರು ಶಾಮೀಲಾಗಿದ್ದಾರೆ. ನಾವು ದೂರು ಕೊಟ್ಟರೆ ಸ್ವೀಕಾರ ಮಾಡುವುದಿಲ್ಲ. ಅದೇ ಸಚಿವರ ಕಡೆ ದೂರು ನೀಡಿದರೆ ಕ್ಷಣಾರ್ಧದಲ್ಲೇ ದೂರು ದಾಖಲಾಗಿ ಎಫ್‌ಐಆರ್ ಆಗುತ್ತದೆ. ಇದನ್ನು ಪ್ರಜಾಪ್ರಭುತ್ವ ಸರ್ಕಾರ ಎನ್ನಬೇಕೇ? ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪೊಲೀಸರು ಎಷ್ಟು ದುರಾಹಂಕಾರಿಗಳು ಎಂದರೆ, ಅವರು ಸಮವಸ್ತ್ರದ ಬದಲು ಕಾಂಗ್ರೆಸ್ ಪಕ್ಷದ ಸಮವಸ್ತ್ರ ಹಾಕಿದರೆ ಒಳ್ಳೆುಯದು. ಇವರು ನಿಷ್ಪಕ್ಷಪಾತವಾಗಿ ತನಿಖೆ ನಡೆಸಬೇಕೇ ವಿನಃ ಸರ್ಕಾರದ ಕೈಗೊಂಬೆಯಂತೆ ವರ್ತಿಸಬಾರದು ಎಂದು ಹೇಳಿದರು.

ಸಿ.ಟಿ.ರವಿ ಮೇಲೆ ದೌರ್ಜನ್ಯ ವಾಡಿದ್ದಾರೆ. ಅವರು ಏಕಾಂಗಿಯಲ್ಲ. ಇಡೀ ಪಕ್ಷವೇ ಅವರ ಹಿಂದೆ ಇರುತ್ತದೆ. ಮುಂದೊಂದು ದಿನ ಈ ಪ್ರಕರಣ ನಿಮಗೆ ತಿರುಗುಬಾಣವಾಗಲಿದೆ ಎಂದು ಅಶೋಕ್ ಕಾಂಗ್ರೆಸ್‌ಗೆ ಎಚ್ಚರಿಕೆ ಕೊಟ್ಟರು.
ನ್ಯಾಯಾಲಯ ಡಿ.ಕೆ.ಶಿವಕುವಾರ್ ಅವರ ದಾಖಲೆಗಳನ್ನು ಕೇಳುವುದಿಲ್ಲ. ಸದನದಲ್ಲಿ ನಡೆದಿರುವ ದಾಖಲೆಗಳನ್ನು ಪರಿಶೀಲಿಸುತ್ತದೆ. ಬರವಣಿಗೆ ರೆಕಾರ್ಡ್ ಕೂಡ ಆಗುತ್ತದೆ. ಜೊತೆಗೆ ಮೊಬೈಲ್ ರೆಕಾರ್ಡ್ ಮಾಡಲು ಅವಕಾಶವಿರುವುದಿಲ್ಲ. ಇದನ್ನೆಲ್ಲಾ ಪರಿಶೀಲಿಸಿ ಸಭಾಪತಿಗಳು ರೂಲಿಂಗ್ ಕೊಟ್ಟಿದ್ದಾರೆ. ಆದರೂ ಕಾಂಗ್ರೆಸ್ ನಾಯಕರು ತಾವು ಮಾಡಿದ್ದೇ ಸರಿ ಎಂದು ಹೇಳುತ್ತಿದ್ದಾರೆ. ಇದರ ಪ್ರತಿಫಲ ಅನುಭವಿಸುತ್ತೀರಿ ಎಂದು ಎಚ್ಚರಿಸಿದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕಳಪೆ ಪ್ರಗತಿ ಸಾಧಿಸಿದ 5 ಪಿಡಿಒಗಳಿಗೆ ಕಾರಣ ಕೇಳಿ ನೋಟಿಸ್ ನೀಡಿದ ಸಿಇಒ ನಂದಿನಿ

ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…

10 hours ago

ಅಕ್ರಮ ನಾಟ ಸಾಗಾಟ : ಲಾರಿ ಸಮೇತ ಮೂವರ ಬಂಧನ

ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…

10 hours ago

ಡೆವಿಲ್‌ ಅಬ್ಬರ | ಮೊದಲ ದಿನದ ಗಳಿಗೆ ಎಷ್ಟು?

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…

10 hours ago

ಮಳವಳ್ಳಿ | ವಿದ್ಯುತ್‌ ಸ್ಪರ್ಶ ; ಕಾರ್ಮಿಕ ಸಾವು

ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…

10 hours ago

2027ರ ಜನಗಣತಿ | 11,718 ಕೋಟಿ ನೀಡಲು ಕೇಂದ್ರ ಸಂಪುಟ ಅನುಮೋದನೆ

ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…

10 hours ago

ಇಂಡಿಗೋ ಬಿಕ್ಕಟ್ಟು | ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳ ಅಮಾನತ್ತು

ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…

11 hours ago