ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಕ್ಷೇಪಾರ್ಹ ಪದ ಬಳಸಿದ್ದಾರೆ ಎಂಬ ಆರೋಪದ ಮೇಲೆ ಎಂಎಲ್ಸಿ ಸಿ.ಟಿ.ರವಿಯವರನ್ನು ಪೊಲೀಸರೇ ಕೊಲೆ ಮಾಡಲು ಸಂಚು ರೂಪಿಸಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮಿನಿ ಪಾಕಿಸ್ತಾನ ತಾಯಾರಾಗುತ್ತಿದೆ. ಇಲ್ಲಿ ತಾಲಿಬಾನ್ ಪರ ಆಡಳಿತ ನಡೆಯುತ್ತಿದೆ. ಪೊಲೀಸರು ಸರ್ಕಾರದೊಂದಿಗೆ ಶಾಮೀಲಾಗಿ ಸಿ.ಟಿ.ರವಿಯವರನ್ನು ಕೊಲೆ ಮಾಡಲು ಸಂಚು ರೂಪಿಸಿದ್ದಾರೆ. ಒಂದು ವೇಳೆ ಅವರ ಜೀವಕ್ಕೆ ತೊಂದರೆಯಾದರೆ ಅದಕ್ಕೆ ಪೊಲೀಸರೇ ಕಾರಣ ಎಂದು ಎಚ್ಚರಿಕೆ ಕೊಟ್ಟರು.
ಸಿ.ಟಿ.ರವಿಯನ್ನು ಕೊಲೆ ಮಾಡುವ ಉದ್ದೇಶದಿಂದಲೇ ಕೆಲವು ಗೂಂಡಾಗಳು ಸುವರ್ಣಸೌಧಕ್ಕೆ ಬಂದಿದ್ದರು. ಇವರ ಜೊತೆ ಪೊಲೀಸರು ಶಾಮೀಲಾಗಿದ್ದಾರೆ. ನಾವು ದೂರು ಕೊಟ್ಟರೆ ಸ್ವೀಕಾರ ಮಾಡುವುದಿಲ್ಲ. ಅದೇ ಸಚಿವರ ಕಡೆ ದೂರು ನೀಡಿದರೆ ಕ್ಷಣಾರ್ಧದಲ್ಲೇ ದೂರು ದಾಖಲಾಗಿ ಎಫ್ಐಆರ್ ಆಗುತ್ತದೆ. ಇದನ್ನು ಪ್ರಜಾಪ್ರಭುತ್ವ ಸರ್ಕಾರ ಎನ್ನಬೇಕೇ? ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪೊಲೀಸರು ಎಷ್ಟು ದುರಾಹಂಕಾರಿಗಳು ಎಂದರೆ, ಅವರು ಸಮವಸ್ತ್ರದ ಬದಲು ಕಾಂಗ್ರೆಸ್ ಪಕ್ಷದ ಸಮವಸ್ತ್ರ ಹಾಕಿದರೆ ಒಳ್ಳೆುಯದು. ಇವರು ನಿಷ್ಪಕ್ಷಪಾತವಾಗಿ ತನಿಖೆ ನಡೆಸಬೇಕೇ ವಿನಃ ಸರ್ಕಾರದ ಕೈಗೊಂಬೆಯಂತೆ ವರ್ತಿಸಬಾರದು ಎಂದು ಹೇಳಿದರು.
ಸಿ.ಟಿ.ರವಿ ಮೇಲೆ ದೌರ್ಜನ್ಯ ವಾಡಿದ್ದಾರೆ. ಅವರು ಏಕಾಂಗಿಯಲ್ಲ. ಇಡೀ ಪಕ್ಷವೇ ಅವರ ಹಿಂದೆ ಇರುತ್ತದೆ. ಮುಂದೊಂದು ದಿನ ಈ ಪ್ರಕರಣ ನಿಮಗೆ ತಿರುಗುಬಾಣವಾಗಲಿದೆ ಎಂದು ಅಶೋಕ್ ಕಾಂಗ್ರೆಸ್ಗೆ ಎಚ್ಚರಿಕೆ ಕೊಟ್ಟರು.
ನ್ಯಾಯಾಲಯ ಡಿ.ಕೆ.ಶಿವಕುವಾರ್ ಅವರ ದಾಖಲೆಗಳನ್ನು ಕೇಳುವುದಿಲ್ಲ. ಸದನದಲ್ಲಿ ನಡೆದಿರುವ ದಾಖಲೆಗಳನ್ನು ಪರಿಶೀಲಿಸುತ್ತದೆ. ಬರವಣಿಗೆ ರೆಕಾರ್ಡ್ ಕೂಡ ಆಗುತ್ತದೆ. ಜೊತೆಗೆ ಮೊಬೈಲ್ ರೆಕಾರ್ಡ್ ಮಾಡಲು ಅವಕಾಶವಿರುವುದಿಲ್ಲ. ಇದನ್ನೆಲ್ಲಾ ಪರಿಶೀಲಿಸಿ ಸಭಾಪತಿಗಳು ರೂಲಿಂಗ್ ಕೊಟ್ಟಿದ್ದಾರೆ. ಆದರೂ ಕಾಂಗ್ರೆಸ್ ನಾಯಕರು ತಾವು ಮಾಡಿದ್ದೇ ಸರಿ ಎಂದು ಹೇಳುತ್ತಿದ್ದಾರೆ. ಇದರ ಪ್ರತಿಫಲ ಅನುಭವಿಸುತ್ತೀರಿ ಎಂದು ಎಚ್ಚರಿಸಿದರು.
ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…
ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…
ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…
ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…
ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್ಪೆಕ್ಟರ್ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…