ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಕ್ಷೇಪಾರ್ಹ ಪದ ಬಳಸಿದ್ದಾರೆ ಎಂಬ ಆರೋಪದ ಮೇಲೆ ಎಂಎಲ್ಸಿ ಸಿ.ಟಿ.ರವಿಯವರನ್ನು ಪೊಲೀಸರೇ ಕೊಲೆ ಮಾಡಲು ಸಂಚು ರೂಪಿಸಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮಿನಿ ಪಾಕಿಸ್ತಾನ ತಾಯಾರಾಗುತ್ತಿದೆ. ಇಲ್ಲಿ ತಾಲಿಬಾನ್ ಪರ ಆಡಳಿತ ನಡೆಯುತ್ತಿದೆ. ಪೊಲೀಸರು ಸರ್ಕಾರದೊಂದಿಗೆ ಶಾಮೀಲಾಗಿ ಸಿ.ಟಿ.ರವಿಯವರನ್ನು ಕೊಲೆ ಮಾಡಲು ಸಂಚು ರೂಪಿಸಿದ್ದಾರೆ. ಒಂದು ವೇಳೆ ಅವರ ಜೀವಕ್ಕೆ ತೊಂದರೆಯಾದರೆ ಅದಕ್ಕೆ ಪೊಲೀಸರೇ ಕಾರಣ ಎಂದು ಎಚ್ಚರಿಕೆ ಕೊಟ್ಟರು.
ಸಿ.ಟಿ.ರವಿಯನ್ನು ಕೊಲೆ ಮಾಡುವ ಉದ್ದೇಶದಿಂದಲೇ ಕೆಲವು ಗೂಂಡಾಗಳು ಸುವರ್ಣಸೌಧಕ್ಕೆ ಬಂದಿದ್ದರು. ಇವರ ಜೊತೆ ಪೊಲೀಸರು ಶಾಮೀಲಾಗಿದ್ದಾರೆ. ನಾವು ದೂರು ಕೊಟ್ಟರೆ ಸ್ವೀಕಾರ ಮಾಡುವುದಿಲ್ಲ. ಅದೇ ಸಚಿವರ ಕಡೆ ದೂರು ನೀಡಿದರೆ ಕ್ಷಣಾರ್ಧದಲ್ಲೇ ದೂರು ದಾಖಲಾಗಿ ಎಫ್ಐಆರ್ ಆಗುತ್ತದೆ. ಇದನ್ನು ಪ್ರಜಾಪ್ರಭುತ್ವ ಸರ್ಕಾರ ಎನ್ನಬೇಕೇ? ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪೊಲೀಸರು ಎಷ್ಟು ದುರಾಹಂಕಾರಿಗಳು ಎಂದರೆ, ಅವರು ಸಮವಸ್ತ್ರದ ಬದಲು ಕಾಂಗ್ರೆಸ್ ಪಕ್ಷದ ಸಮವಸ್ತ್ರ ಹಾಕಿದರೆ ಒಳ್ಳೆುಯದು. ಇವರು ನಿಷ್ಪಕ್ಷಪಾತವಾಗಿ ತನಿಖೆ ನಡೆಸಬೇಕೇ ವಿನಃ ಸರ್ಕಾರದ ಕೈಗೊಂಬೆಯಂತೆ ವರ್ತಿಸಬಾರದು ಎಂದು ಹೇಳಿದರು.
ಸಿ.ಟಿ.ರವಿ ಮೇಲೆ ದೌರ್ಜನ್ಯ ವಾಡಿದ್ದಾರೆ. ಅವರು ಏಕಾಂಗಿಯಲ್ಲ. ಇಡೀ ಪಕ್ಷವೇ ಅವರ ಹಿಂದೆ ಇರುತ್ತದೆ. ಮುಂದೊಂದು ದಿನ ಈ ಪ್ರಕರಣ ನಿಮಗೆ ತಿರುಗುಬಾಣವಾಗಲಿದೆ ಎಂದು ಅಶೋಕ್ ಕಾಂಗ್ರೆಸ್ಗೆ ಎಚ್ಚರಿಕೆ ಕೊಟ್ಟರು.
ನ್ಯಾಯಾಲಯ ಡಿ.ಕೆ.ಶಿವಕುವಾರ್ ಅವರ ದಾಖಲೆಗಳನ್ನು ಕೇಳುವುದಿಲ್ಲ. ಸದನದಲ್ಲಿ ನಡೆದಿರುವ ದಾಖಲೆಗಳನ್ನು ಪರಿಶೀಲಿಸುತ್ತದೆ. ಬರವಣಿಗೆ ರೆಕಾರ್ಡ್ ಕೂಡ ಆಗುತ್ತದೆ. ಜೊತೆಗೆ ಮೊಬೈಲ್ ರೆಕಾರ್ಡ್ ಮಾಡಲು ಅವಕಾಶವಿರುವುದಿಲ್ಲ. ಇದನ್ನೆಲ್ಲಾ ಪರಿಶೀಲಿಸಿ ಸಭಾಪತಿಗಳು ರೂಲಿಂಗ್ ಕೊಟ್ಟಿದ್ದಾರೆ. ಆದರೂ ಕಾಂಗ್ರೆಸ್ ನಾಯಕರು ತಾವು ಮಾಡಿದ್ದೇ ಸರಿ ಎಂದು ಹೇಳುತ್ತಿದ್ದಾರೆ. ಇದರ ಪ್ರತಿಫಲ ಅನುಭವಿಸುತ್ತೀರಿ ಎಂದು ಎಚ್ಚರಿಸಿದರು.
ಬೆಂಗಳೂರು: ಬಡವರ ಮತಗಳನ್ನು ತೆಗೆಯಲು ಎಸ್ಐಆರ್ ಮೂಲಕ ಸಂಚು ಮಾಡಲಾಗಿದೆ. ನಾವುಗಳು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ನಮ್ಮ ಪಕ್ಷದ…
ಬೆಂಗಳೂರು: ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ಗೆ ರಾಜ್ಯ ಸರ್ಕಾರ ರಿಲೀಫ್ ನೀಡಿದೆ. ವಾಟಾಳ್ ನಾಗರಾಜ್ ಮೇಲಿನ ಕೇಸ್ಗಳನ್ನು ಸರ್ಕಾರ ಹಿಂಪಡೆಯಲು…
ಬೆಂಗಳೂರು: ಕಾನೂನಾತ್ಮಕವಾಗಿ 52 ಪ್ರಕರಣಗಳನ್ನು ಹಿಂಪಡೆಯಬಹುದು ಎಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್…
ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣದ ಪ್ರಸಿದ್ಧ ವೆಲ್ಲೆಸ್ಲಿ ಸೇತುವೆ ಆತ್ಮಹತ್ಯೆ ಹಾಟ್ಸ್ಪಾಟ್ ಆಗುತ್ತಿದ್ದು, ಸೇತುವೆ ಮೇಲಿಂದ ನದಿಗೆ ಧುಮುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ…
ನವದೆಹಲಿ: ಆಫ್ರಿಕಾದ ಹಲವು ಭಾಗಗಳಲ್ಲಿ ಕೋವಿಡ್ಗಿಂತಲೂ ಡೆಡ್ಲಿಯಾದ ಎಬೋಲಾ ವೈರಸ್ ಹಾವಳಿ ಕಂಡುಬಂದಿರುವ ಹಿನ್ನೆಲೆಯಲ್ಲಿ ಭಾರತದಲ್ಲೂ ಕಟ್ಟೆಚ್ಚರಕ್ಕೆ ಆದೇಶ ನೀಡಲಾಗಿದೆ.…
ನವದೆಹಲಿ: ಕರ್ನಾಟಕ ನಾಲ್ಕು ಸೇರಿದಂತೆ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಮಲ್ಲಿಕಾರ್ಜುನ ಖರ್ಗೆ, ಎಚ್.ಡಿ.ದೇವೇಗೌಡ, ಈರಣ್ಣ ಕಡಾಡಿ,…