ರಾಜ್ಯ

ಸಿ.ಟಿ ರವಿ ಕೊಲೆಗೆ ಪೊಲೀಸರ ಸಂಚು: ಅಶೋಕ್‌ ಆರೋಪ

ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಕ್ಷೇಪಾರ್ಹ ಪದ ಬಳಸಿದ್ದಾರೆ ಎಂಬ ಆರೋಪದ ಮೇಲೆ ಎಂಎಲ್‌ಸಿ ಸಿ.ಟಿ.ರವಿಯವರನ್ನು ಪೊಲೀಸರೇ ಕೊಲೆ ಮಾಡಲು ಸಂಚು ರೂಪಿಸಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮಿನಿ ಪಾಕಿಸ್ತಾನ ತಾಯಾರಾಗುತ್ತಿದೆ. ಇಲ್ಲಿ ತಾಲಿಬಾನ್ ಪರ ಆಡಳಿತ ನಡೆಯುತ್ತಿದೆ. ಪೊಲೀಸರು ಸರ್ಕಾರದೊಂದಿಗೆ ಶಾಮೀಲಾಗಿ ಸಿ.ಟಿ.ರವಿಯವರನ್ನು ಕೊಲೆ ಮಾಡಲು ಸಂಚು ರೂಪಿಸಿದ್ದಾರೆ. ಒಂದು ವೇಳೆ ಅವರ ಜೀವಕ್ಕೆ ತೊಂದರೆಯಾದರೆ ಅದಕ್ಕೆ ಪೊಲೀಸರೇ ಕಾರಣ ಎಂದು ಎಚ್ಚರಿಕೆ ಕೊಟ್ಟರು.

ಸಿ.ಟಿ.ರವಿಯನ್ನು ಕೊಲೆ ಮಾಡುವ ಉದ್ದೇಶದಿಂದಲೇ ಕೆಲವು ಗೂಂಡಾಗಳು ಸುವರ್ಣಸೌಧಕ್ಕೆ ಬಂದಿದ್ದರು. ಇವರ ಜೊತೆ ಪೊಲೀಸರು ಶಾಮೀಲಾಗಿದ್ದಾರೆ. ನಾವು ದೂರು ಕೊಟ್ಟರೆ ಸ್ವೀಕಾರ ಮಾಡುವುದಿಲ್ಲ. ಅದೇ ಸಚಿವರ ಕಡೆ ದೂರು ನೀಡಿದರೆ ಕ್ಷಣಾರ್ಧದಲ್ಲೇ ದೂರು ದಾಖಲಾಗಿ ಎಫ್‌ಐಆರ್ ಆಗುತ್ತದೆ. ಇದನ್ನು ಪ್ರಜಾಪ್ರಭುತ್ವ ಸರ್ಕಾರ ಎನ್ನಬೇಕೇ? ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪೊಲೀಸರು ಎಷ್ಟು ದುರಾಹಂಕಾರಿಗಳು ಎಂದರೆ, ಅವರು ಸಮವಸ್ತ್ರದ ಬದಲು ಕಾಂಗ್ರೆಸ್ ಪಕ್ಷದ ಸಮವಸ್ತ್ರ ಹಾಕಿದರೆ ಒಳ್ಳೆುಯದು. ಇವರು ನಿಷ್ಪಕ್ಷಪಾತವಾಗಿ ತನಿಖೆ ನಡೆಸಬೇಕೇ ವಿನಃ ಸರ್ಕಾರದ ಕೈಗೊಂಬೆಯಂತೆ ವರ್ತಿಸಬಾರದು ಎಂದು ಹೇಳಿದರು.

ಸಿ.ಟಿ.ರವಿ ಮೇಲೆ ದೌರ್ಜನ್ಯ ವಾಡಿದ್ದಾರೆ. ಅವರು ಏಕಾಂಗಿಯಲ್ಲ. ಇಡೀ ಪಕ್ಷವೇ ಅವರ ಹಿಂದೆ ಇರುತ್ತದೆ. ಮುಂದೊಂದು ದಿನ ಈ ಪ್ರಕರಣ ನಿಮಗೆ ತಿರುಗುಬಾಣವಾಗಲಿದೆ ಎಂದು ಅಶೋಕ್ ಕಾಂಗ್ರೆಸ್‌ಗೆ ಎಚ್ಚರಿಕೆ ಕೊಟ್ಟರು.
ನ್ಯಾಯಾಲಯ ಡಿ.ಕೆ.ಶಿವಕುವಾರ್ ಅವರ ದಾಖಲೆಗಳನ್ನು ಕೇಳುವುದಿಲ್ಲ. ಸದನದಲ್ಲಿ ನಡೆದಿರುವ ದಾಖಲೆಗಳನ್ನು ಪರಿಶೀಲಿಸುತ್ತದೆ. ಬರವಣಿಗೆ ರೆಕಾರ್ಡ್ ಕೂಡ ಆಗುತ್ತದೆ. ಜೊತೆಗೆ ಮೊಬೈಲ್ ರೆಕಾರ್ಡ್ ಮಾಡಲು ಅವಕಾಶವಿರುವುದಿಲ್ಲ. ಇದನ್ನೆಲ್ಲಾ ಪರಿಶೀಲಿಸಿ ಸಭಾಪತಿಗಳು ರೂಲಿಂಗ್ ಕೊಟ್ಟಿದ್ದಾರೆ. ಆದರೂ ಕಾಂಗ್ರೆಸ್ ನಾಯಕರು ತಾವು ಮಾಡಿದ್ದೇ ಸರಿ ಎಂದು ಹೇಳುತ್ತಿದ್ದಾರೆ. ಇದರ ಪ್ರತಿಫಲ ಅನುಭವಿಸುತ್ತೀರಿ ಎಂದು ಎಚ್ಚರಿಸಿದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಲೆನಾಡಿನಲ್ಲಿ ಮಳೆಯ ಅಬ್ಬರ: ಜೋಗ ಜಲಪಾತಕ್ಕೆ ಜೀವಕಳೆ

ಶಿವಮೊಗ್ಗ: ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ವಿಶ್ವವಿಖ್ಯಾತ ಜೋಗ ಜಲಪಾತ ಜೀವಕಳೆ ಪಡೆದುಕೊಂಡಿದೆ. ಕಳೆದ ನಾಲ್ಕೈದು ದಿನಗಳಿಂದ ಶಿವಮೊಗ್ಗದಲ್ಲಿ ಭಾರೀ…

3 hours ago

ಕೊಡಗು ಜಿಲ್ಲೆಯ ಮಳೆ ವಿವರ

ಕೊಡಗು: ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ರೈತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ. ಜಿಲ್ಲೆಯ ಮಳೆಯ ವಿವರ ಈ…

4 hours ago

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026: ಗಜಪಡೆ ಆಯ್ಕೆ ಪ್ರಕ್ರಿಯೆಗೆ ಚಾಲನೆ

ಮಡಿಕೇರಿ: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಗಜಪಡೆಗೆ ಆಯ್ಕೆ ಪ್ರಕ್ರಿಯೆಗೆ ಅಧಿಕೃತ ಚಾಲನೆ ಸಿಕ್ಕಿದೆ. ಇದರ ಭಾಗವಾಗಿ…

5 hours ago

ವಯನಾಡಿನಲ್ಲಿ ಮೇಘಸ್ಫೋಟ: ಇಬ್ಬರು ಕಾರ್ಮಿಕರು ಜೀವಂತ ಸಮಾಧಿ: 30 ಮಂದಿ ನಾಪತ್ತೆ

ತಿರುವನಂತಪುರಂ: ವಯನಾಡಿನಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಮೆಪ್ಪಾಡಿಯಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ. ವಯನಾಡಿನ ಸುರಂಗ ನಿರ್ಮಾಣ ಪ್ರದೇಶದ ಮೀನಾಕ್ಷಿ…

5 hours ago

ಬ್ರಿಡ್ಜ್‌ ಮ್ಯಾನ್‌ ಖ್ಯಾತಿಯ ಪದ್ಮಶ್ರೀ ಡಾ.ಗಿರೀಶ್‌ ಭಾರದ್ವಾಜ್‌ ನಿಧನ

ಮಂಗಳೂರು: ತೂಗುಸೇತುವೆಗಳ ಸರದಾರ, ಸುಳ್ಯದ ವಿಶ್ವೇಶ್ವರಯ್ಯ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಎಂಜಿನಿಯರ್‌ ಡಾ.ಗಿರೀಶ್‌ ಭಾರದ್ವಾಜ್‌ ಅವರು ಇಂದು ನಿಧನರಾಗಿದ್ದಾರೆ.…

5 hours ago

ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆ

ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆಯಾಗಿದೆ. ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಲಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಪರದಂಡ…

7 hours ago