ರಾಜ್ಯ

ಪೊಲೀಸ್‌ ಧ್ವಜ ದಿನಾಚರಣೆ: ನಿಷ್ಠೆ, ದಕ್ಷತೆ ಮೆರೆದ ಪೊಲೀಸ್‌ ಅಧಿಕಾರಿಗಳಿಗೆ ಸಿಎಂ ಚಿನ್ನದ ಪದಕ ನೀಡಿ ಸನ್ಮಾನಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಪೊಲೀಸ್‌ ಧ್ವಜ ದಿನಾಚರಣೆಯಾಗಿರುವ ಹಿನ್ನೆಲೆ ನಿಷ್ಠೆ ಮತ್ತು ದಕ್ಷತೆ ಮೆರೆದ ಪೊಲೀಸ್‌ ಅಧಿಕಾರಿಗಳಿಗೆ ಮುಖ್ಯಮಂತ್ರಿ ಚಿನ್ನದ ಪದಕ ನೀಡಿ ಸನ್ಮಾನಿಸಿದ್ದಾರೆ.

ಕೋರಮಂಗಲ ಕವಾಯತು ಮೈದಾನದಲ್ಲಿ ಇಂದು (ಏಪ್ರಿಲ್‌.2) ನಡೆದ ಪೊಲೀಸ್ ಧ್ವಜ ದಿನಾಚರಣೆಯಲ್ಲಿ ಮುಖ್ಯಮಂತ್ರಿಗಳ ಪದಕ ವಿಜೇತ ಪೊಲೀಸ್ ಸಿಬ್ಬಂದಿಗಳಿಗೆ ಗೌರವಿಸಿ ಮಾತನಾಡಿದ ಅವರು, ಮೂರು ವರ್ಷಗಳಿಂದ ಬಾಕಿ ಉಳಿದಿದ್ದ ಮುಖ್ಯಮಂತ್ರಿಗಳ ಪದಕವನ್ನು ಈ ಬಾರಿ ಒಟ್ಟಾಗಿ ವಿತರಿಸಿದ್ದೇವೆ. ಎಲ್ಲಾ ಪದಕ ಪುರಸ್ಕೃತರಿಗೂ ಅಭಿನಂದನೆಗಳು. ನಿಮ್ಮ‌ ಶ್ರಮ ಮತ್ತು ಸೇವೆ ಶ್ಲಾಘನೀಯ ಎಂದರು.

ಕಾನೂನು ಸುವ್ಯವಸ್ಥೆ ಮತ್ತು ಬಂಡವಾಳ ಹೂಡಿಕೆ, ಅಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿ ಒಂದಕ್ಕೊಂದು ನೇರ ಸಂಬಂಧ ಹೊಂದಿದೆ. ನಿರುದ್ಯೋಗ ಬಹಳ ದೊಡ್ಡ ಸಮಸ್ಯೆ ಆಗ್ತಿದೆ. ಇದನ್ನು ನಿರ್ವಹಿಸಬೇಕಾದರೆ ಕಾನೂನು ಸುವ್ಯವಸ್ಥೆ , ಶಾಂತಿ ಪಾಲನೆ ಉತ್ತಮವಾಗಿರಬೇಕು ಎಂದು ಹೇಳಿದರು.

ತಂತ್ರಜ್ಞಾನದ ಬೆಳವಣಿಗೆಯಿಂದ ಸೈಬರ್ ಅಪರಾಧಗಳು ವ್ಯಾಪಕವಾಗಿ ಹೆಚ್ವುತ್ತಿವೆ. ಅದೇ ತಂತ್ರಜ್ಞಾನದ ಸಾಧ್ಯತೆಗಳನ್ನು ಬಳಸಿಕೊಂಡು ಸೈಬರ್ ಅಪರಾಧಗಳನ್ನು ನಿಗ್ರಹಿಸಬೇಕು. ಮಾದಕ ವಸ್ತು ಮುಕ್ತ ರಾಜ್ಯ ಮಾಡುವುದು ನನ್ನ ಗುರಿ. ಇದಕ್ಕಾಗಿ ಬಹಳಷ್ಟು ಶ್ರಮಿಸಬೇಕು. ಪೊಲೀಸರು ಮಾದಕ ವಸ್ತು ಜಾಲವನ್ನು ಬೇರು ಸಮೇತ ಕಿತ್ತಾಕಲು ಪಣ ತೊಡಬೇಕು ಎಂದು ತಿಳಿಸಿದರು.

ಪದಕಗಳನ್ನು ಪಡೆದವರು ಬೇರೆಯವರಿಗೆ ಪ್ರೇರಣೆ ಆಗಬೇಕು. ಸಿಎಂ ಪದಕ ಪಡೆಯಲು ದಕ್ಷತೆ, ಪ್ರಾಮಾಣಿಕತೆಯಿಂದ ವೃತ್ತಿಪರತೆ ತೋರಿಸಬೇಕು. ಕಳೆದ ಎರಡು ವರ್ಷಗಳಲ್ಲಿ ಅಪರಾಧಗಳ ಸಂಖ್ಯೆ ಇಳಿಮುಖ ಆಗುತ್ತಿದೆ. ಇದು ಇನ್ನಷ್ಟು ಕಡಿಮೆ ಆಗಬೇಕು. ಅಲ್ಲದೇ ಜರ್ಮನಿ ದೇಶದ ಪ್ರಧಾನಿಗಳು, ಪ್ರತಿನಿಧಿಗಳು ರಾಜ್ಯದ ಪೊಲೀಸ್ ಕೌಶಲ್ಯ ಮತ್ತು ವೃತ್ತಿಪರತೆಯನ್ನು ಶ್ಲಾಘಿಸಿದ್ದಾರೆ. ಇದು ಹೆಮ್ಮೆಯ ವಿಷಯ ಎಂದು ಹೇಳಿದರು.

ಪೊಲೀಸರ ಅಗತ್ಯ ಮತ್ತು ಬೇಡಿಕೆಗಳನ್ನು ಈಡೇರಿಸಲು ನಮ್ಮ ಸರ್ಕಾರ ಸದಾ ಸಿದ್ಧ ಇದೆ. ನಾವು ನಿರಂತರವಾಗಿ ನಿಮ್ಮ ಜೊತೆಗಿರುತ್ತವೆ. ಆದರೆ ಕರ್ತವ್ಯಲೋಪವನ್ನು ಮಾತ್ರ ಸಹಿಸುವುದಿಲ್ಲ. ಪೊಲೀಸ್ ಬೀಟ್ ವ್ಯವಸ್ಥೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಿರ್ವಹಿಸಬೇಕು ಎಂದರು.

ಗೂಂಡಾಗಿರಿ, ರೌಡಿಸಂ ಪೂರ್ಣ ಮಟ್ಟ ಹಾಕಿ. ಅಗತ್ಯ ಸಹಕಾರ, ಸವಲತ್ತುಗಳನ್ನು ಕೊಡಲು ಸರ್ಕಾರ ಸಿದ್ಧವಿದೆ. ಮೊನ್ನೆಯ ಬಜೆಟ್ ನಲ್ಲಿ ಇಲಾಖೆ ಮತ್ತು ಸಿಬ್ಬಂದಿಯ ಅನುಕೂಲಕ್ಕೆ ಘೋಷಿಸಿರುವ ಎಲ್ಲವನ್ನೂ ಜಾರಿ ಮಾಡಲಾಗುವುದು ಎಂದು ತಿಳಿಸಿದರು.

 

ಅರ್ಚನ ಎಸ್‌ ಎಸ್

Recent Posts

ಶ್ರೀ ಗುರು ಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

ಮಂಡ್ಯ: ಜಿಲ್ಲೆಯ ನಾಗಮಂಗಲದ ಶ್ರೀ ಆದಿಚುಂಚನಗಿರಿ ಕ್ಷೇತ್ರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಬಹುಕೋಟಿ ರೂ ವೆಚ್ಚದಲ್ಲಿ ನಿರ್ಮಿಸಿರುವ…

30 mins ago

ಅಂಡಮಾನ್‌ ಸಮುದ್ರದಲ್ಲಿ ಮುಳುಗಿದ ವಲಸಿಗರಿದ್ದ ದೋಣಿ: 250 ಜನ ಕಣ್ಮರೆ

ಢಾಕಾ: ಭಾರೀ ಬಿರುಗಾಳಿಯಿಂದ ಅಂಡಮಾನ್‌ ಸಮುದ್ರದಲ್ಲಿ ಜನದಟ್ಟಣೆಯಿಂದ ತುಂಬಿದ್ದ ದೋಣಿ ಮುಳುಗಿ ರೋಹಿಂಗ್ಯಾ ನಿರಾಶ್ರಿತರು ಮತ್ತು ಬಾಂಗ್ಲಾದೇಶಿ ಪ್ರಜೆಗಳು ಸೇರಿದಂತೆ…

1 hour ago

ಹನೂರು| ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ: ರೈತ ಮುಖಂಡರ ಆಕ್ರೋಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಪ್ಪ ಗ್ರಾಮದ ನೀರಿನ…

1 hour ago

ಹನೂರು| ಕುಡಿಯುವ ನೀರಿಗೆ ಹಾಹಾಕಾರ: ಖಾಲಿ ಬಿಂದಿಗೆ ಹಿಡಿದು ಮಹಿಳೆಯರಿಂದ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಹಲವಾರು ದಿನಗಳಿಂದ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡದೆ…

1 hour ago

ಛತ್ತೀಸ್‌ಗಢ ವಿದ್ಯುತ್‌ ಸ್ಥಾವರ ಸ್ಫೋಟ ದುರಂತ: ಸಾವಿನ ಸಂಖ್ಯೆ 14ಕ್ಕೆ ಏರಿಕೆ

ರಾಯಪುರ: ಛತ್ತೀಸ್‌ಗಢದ ಶಕ್ತಿ ಜಿಲ್ಲೆಯ ವಿದ್ಯುತ್‌ ಸ್ಥಾವರದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಘಟನಾ ಸ್ಥಳದಲ್ಲಿ ರಕ್ಷಣಾ…

2 hours ago

ಓದುಗರ ಪತ್ರ: ನಂಜನಗೂಡು ಕೆ.ಹೆಚ್.ಬಿ. ಕಾಲೋನಿ ರಸ್ತೆ ದುರಸ್ತಿ ಮಾಡಿ

ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ತಾಲ್ಲೂಕು ಮಟ್ಟದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್‌ಬಿ) ಯಿಂದ ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಿದ್ದು…

5 hours ago