ಬೆಂಗಳೂರು: ನಟ ದರ್ಶನ್ ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪದಲ್ಲಿ ಜೈಲಿನಿಂದ ಬಿಡುಗಡೆಯಾಗಿದ್ದರು, ಪೊಲೀಸರ ಉಪಟಳ ತಪ್ಪಿಲ್ಲ. ಇದೀಗ ದರ್ಶನ್ ಬಳಿಯಿರುವ ಬಂದೂಕು ಪರವಾನಗಿ(ಗನ್ ಲೈಸೆನ್ಸ್) ರದ್ದುಗೊಳಿಸಲು ಪೊಲೀಸರು ಮುಂದಾಗಿದ್ದಾರೆ.
ಈ ಸಂಬಂಧ ದರ್ಶನ್ಗೆ ನೋಟಿಸ್ ಜಾರಿ ಮಾಡಿರುವ ಪೊಲೀಸ್ ಆಡಳಿತ ವಿಭಾಗದ ಡಿಸಿಪಿ ಪದ್ಮಿನಿ ಸಾಹೂ, ಗನ್ ಲೈಸೆನ್ಸ್ ಬಗ್ಗೆ ವಾರದಲ್ಲಿ ಸ್ಪಷ್ಟನೆ ನೀಡುವಂತೆ ತಿಳಿಸಿದ್ದಾರೆ.
ಕೊಲೆ ಆರೋಪದಿಂದ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ನೀವು ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆಗಳಿವೆ. ನಿಮ್ಮ ಬಳಿಯಿರುವ ಪರವಾನಗಿ ಹೊಂದಿರುವ ಬಂದೂಕು ಬಳಸಿ ಸಾಕ್ಷಿಗಳನ್ನು ಬೆದರಿಸುವ ಬಗ್ಗೆ ಅನುಮಾನಗಳಿದ್ದು, ಶಸ್ತ್ರಾಸ್ತ್ರ ಪರವಾನ ರದ್ದು ಮಾಡಬೇಕಿದೆ. ಹೀಗಾಗಿ ಈ ಬಗ್ಗೆ ಒಂದು ವಾರದೊಳಗೆ ಉತ್ತರ ನೀಡಬೇಕು ಎಂದು ನೋಟಿಸ್ನಲ್ಲಿ ಸೂಚಿಸಲಾಗಿದೆ.
ಜನವರಿ 7 ರಂದು ಕಳುಹಿಸಿರುವ ನೋಟಿಸ್ನ್ನು ದರ್ಶನ್ ಜನವರಿ 10 ರಂದು ಸ್ವೀಕರಿಸಿದ್ದಾರೆ.
ದರ್ಶನ್ ನೋಟಿಸ್ಗೆ ಉತ್ತರ ನೀಡಿದ ಬಳಿಕ ಬಂದೂಕು ಪರವಾನಗಿ ರದ್ದುಪಡಿಸುವ ಕುರಿತು ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯಲ್ಲಿ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಿವಿಯ ಆವರಣದಲ್ಲಿ ವಿದ್ಯಾರ್ಥಿ ನಿಲಯಗಳ ವ್ಯವಸ್ಥೆಯೂ ಇದೆ. ಸ್ಥಳೀಯ…
ಇತ್ತೀಚಿನ ದಿನಗಳಲ್ಲಿ ಅಲ್ಲಲ್ಲಿ ಜಾತಿ ಸಂಘರ್ಷ, ಧರ್ಮ ಸಂಘರ್ಷ, ಜನಾಂಗೀಯ ಸಂಘರ್ಷಗಳು ನಡೆಯುತ್ತಲೇ ಇವೆ. ‘ಸರ್ವ ಜನಾಂಗದ ಶಾಂತಿಯ ತೋಟ’…
ಹಿರಿಯ ಕಾರ್ಮಿಕ ಧುರೀಣ, ಕಮ್ಯುನಿಸ್ಟ್ ಪಕ್ಷದ ಹಿರಿಯ ನಾಯಕ ಅನಂತ ಸುಬ್ಬರಾವ್ ಕಳೆದ ಸುಮಾರು ೪-೫ ದಶಕಗಳಿಂದ ಕಾರ್ಮಿಕ ಚಳವಳಿಗಳಲ್ಲಿ…
ಕೆ.ಎಸ್. ಚಂದ್ರಶೇಖರ್ ಮೂರ್ತಿ ದುಸ್ಥಿತಿಯಲ್ಲಿ ದೇಶದ ಪ್ರಪ್ರಥಮ ತಗಡೂರು ಖಾದಿ ಕೇಂದ್ರ ಜ.೩೦, ೧೯೪೮ರಂದು ಅಹಿಂಸಾ ಪ್ರತಿಪಾದಕ, ಸ್ವಾತಂತ್ರ್ಯ ಹೋರಾಟಗಾರ…
ಹೊಸ ವರ್ಷದಲ್ಲಿ ಕನ್ನಡ ಚಿತ್ರರಂಗದ ಚಟುವಟಿಕೆಗಳು ಗರಿಗೆದರಿವೆ. ಒಂದೆಡೆ ನಿರ್ಮಾಪಕರ ಸಂಘ ಮತ್ತು ಚಲನಚಿತ್ರ ವಾಣಿಜ್ಯ ಮಂಡಳಿಗಳ ಚುನಾವಣೆಯ ಬಿರುಸು,…
ಚಾಮರಾಜನಗರ: ಚಳಿ ಇನ್ನೂ ದೂರ ಸರಿದಿಲ್ಲ. ಆದರೂ ಬಿಸಿಲು ಬೆವರು ಹರಿಯುವ ಮಟ್ಟಿಗೆ ಸುಡುತ್ತಿದೆ. ನೆಲ ದಿನೇ ದಿನೇ ಕಾದ…