ಬೆಂಗಳೂರು: ನಟ ದರ್ಶನ್ ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪದಲ್ಲಿ ಜೈಲಿನಿಂದ ಬಿಡುಗಡೆಯಾಗಿದ್ದರು, ಪೊಲೀಸರ ಉಪಟಳ ತಪ್ಪಿಲ್ಲ. ಇದೀಗ ದರ್ಶನ್ ಬಳಿಯಿರುವ ಬಂದೂಕು ಪರವಾನಗಿ(ಗನ್ ಲೈಸೆನ್ಸ್) ರದ್ದುಗೊಳಿಸಲು ಪೊಲೀಸರು ಮುಂದಾಗಿದ್ದಾರೆ.
ಈ ಸಂಬಂಧ ದರ್ಶನ್ಗೆ ನೋಟಿಸ್ ಜಾರಿ ಮಾಡಿರುವ ಪೊಲೀಸ್ ಆಡಳಿತ ವಿಭಾಗದ ಡಿಸಿಪಿ ಪದ್ಮಿನಿ ಸಾಹೂ, ಗನ್ ಲೈಸೆನ್ಸ್ ಬಗ್ಗೆ ವಾರದಲ್ಲಿ ಸ್ಪಷ್ಟನೆ ನೀಡುವಂತೆ ತಿಳಿಸಿದ್ದಾರೆ.
ಕೊಲೆ ಆರೋಪದಿಂದ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ನೀವು ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆಗಳಿವೆ. ನಿಮ್ಮ ಬಳಿಯಿರುವ ಪರವಾನಗಿ ಹೊಂದಿರುವ ಬಂದೂಕು ಬಳಸಿ ಸಾಕ್ಷಿಗಳನ್ನು ಬೆದರಿಸುವ ಬಗ್ಗೆ ಅನುಮಾನಗಳಿದ್ದು, ಶಸ್ತ್ರಾಸ್ತ್ರ ಪರವಾನ ರದ್ದು ಮಾಡಬೇಕಿದೆ. ಹೀಗಾಗಿ ಈ ಬಗ್ಗೆ ಒಂದು ವಾರದೊಳಗೆ ಉತ್ತರ ನೀಡಬೇಕು ಎಂದು ನೋಟಿಸ್ನಲ್ಲಿ ಸೂಚಿಸಲಾಗಿದೆ.
ಜನವರಿ 7 ರಂದು ಕಳುಹಿಸಿರುವ ನೋಟಿಸ್ನ್ನು ದರ್ಶನ್ ಜನವರಿ 10 ರಂದು ಸ್ವೀಕರಿಸಿದ್ದಾರೆ.
ದರ್ಶನ್ ನೋಟಿಸ್ಗೆ ಉತ್ತರ ನೀಡಿದ ಬಳಿಕ ಬಂದೂಕು ಪರವಾನಗಿ ರದ್ದುಪಡಿಸುವ ಕುರಿತು ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಪಿರಿಯಾಪಟ್ಟಣ: ಮೈಸೂರು ಜಿಲ್ಲೆಯ ಹಲವೆಡೆ ವರ್ಷದ ಮೊದಲ ಮಳೆಯಾಗುತ್ತಿದ್ದು, ಪಿರಿಯಾಪಟ್ಟಣದಲ್ಲಿ ಸಿಡಿಲು ಬಡಿದು ತೆಂಗಿನ ಮರ ಧಗಧಗನೇ ಹೊತ್ತಿ ಉರಿದಿದೆ.…
ಸರಗೂರು: ಕ್ಷೇತ್ರದ ಆದಿ ದೇವತೆ ಇಟ್ನಾ ಗ್ರಾಮದ ಶ್ರೀ ಚಿಕ್ಕದೇವಮ್ಮ ಬೆಟ್ಟದ ಯುಗಾದಿ ಹಬ್ಬದ ಜಾತ್ರಾ ಮಹೋತ್ಸವ ಮಾರ್ಚ್.19ರ ಯುಗಾದಿಯಂದು…
ಬೆಂಗಳೂರು: ವಿಧಾನಸಭೆಯಲ್ಲಿ ಅಪರೂಪದ ಅಚ್ಚರಿಯ ಪ್ರಸಂಗ ನಡೆದಿದ್ದು, ಸಚಿವರು ಹಾಗೂ ಅಧಿಕಾರಿಗಳ ವಿರುದ್ಧ ಗರಂ ಆದ ಸ್ಪೀಕರ್ ಯು.ಟಿ.ಖಾದರ್ ಅವರು…
ಮೈಸೂರು: ನಿತ್ಯ ಸಾವಿರಾರು ಜನರು ಓಡಾಡುವ ಫುಟ್ಪಾತ್ನಲ್ಲಿ ಈಗ ಅವೈಜ್ಞಾನಿಕ ಟಾಂಗಾ ಸ್ಟ್ಯಾಂಡ್ ನಿರ್ಮಾಣ ಮಾಡಲು ಮುಂದಾಗುತ್ತಿದ್ದು, ಪಾಲಿಕೆ ನಡೆಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಒಳಮೀಸಲಾತಿ ವಿಚಾರದಲ್ಲಿ ನಾಗಮೋಹನ್ ದಾಸ್ ನೀಡಿರುವ ವರದಿಯು ಅವೈಜ್ಞಾನಿಕವಾಗಿದ್ದು ಹಂಚಿಕೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ಧ ಕಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…