ಬೆಂಗಳೂರು: ನಟ ದರ್ಶನ್ ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪದಲ್ಲಿ ಜೈಲಿನಿಂದ ಬಿಡುಗಡೆಯಾಗಿದ್ದರು, ಪೊಲೀಸರ ಉಪಟಳ ತಪ್ಪಿಲ್ಲ. ಇದೀಗ ದರ್ಶನ್ ಬಳಿಯಿರುವ ಬಂದೂಕು ಪರವಾನಗಿ(ಗನ್ ಲೈಸೆನ್ಸ್) ರದ್ದುಗೊಳಿಸಲು ಪೊಲೀಸರು ಮುಂದಾಗಿದ್ದಾರೆ.
ಈ ಸಂಬಂಧ ದರ್ಶನ್ಗೆ ನೋಟಿಸ್ ಜಾರಿ ಮಾಡಿರುವ ಪೊಲೀಸ್ ಆಡಳಿತ ವಿಭಾಗದ ಡಿಸಿಪಿ ಪದ್ಮಿನಿ ಸಾಹೂ, ಗನ್ ಲೈಸೆನ್ಸ್ ಬಗ್ಗೆ ವಾರದಲ್ಲಿ ಸ್ಪಷ್ಟನೆ ನೀಡುವಂತೆ ತಿಳಿಸಿದ್ದಾರೆ.
ಕೊಲೆ ಆರೋಪದಿಂದ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ನೀವು ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆಗಳಿವೆ. ನಿಮ್ಮ ಬಳಿಯಿರುವ ಪರವಾನಗಿ ಹೊಂದಿರುವ ಬಂದೂಕು ಬಳಸಿ ಸಾಕ್ಷಿಗಳನ್ನು ಬೆದರಿಸುವ ಬಗ್ಗೆ ಅನುಮಾನಗಳಿದ್ದು, ಶಸ್ತ್ರಾಸ್ತ್ರ ಪರವಾನ ರದ್ದು ಮಾಡಬೇಕಿದೆ. ಹೀಗಾಗಿ ಈ ಬಗ್ಗೆ ಒಂದು ವಾರದೊಳಗೆ ಉತ್ತರ ನೀಡಬೇಕು ಎಂದು ನೋಟಿಸ್ನಲ್ಲಿ ಸೂಚಿಸಲಾಗಿದೆ.
ಜನವರಿ 7 ರಂದು ಕಳುಹಿಸಿರುವ ನೋಟಿಸ್ನ್ನು ದರ್ಶನ್ ಜನವರಿ 10 ರಂದು ಸ್ವೀಕರಿಸಿದ್ದಾರೆ.
ದರ್ಶನ್ ನೋಟಿಸ್ಗೆ ಉತ್ತರ ನೀಡಿದ ಬಳಿಕ ಬಂದೂಕು ಪರವಾನಗಿ ರದ್ದುಪಡಿಸುವ ಕುರಿತು ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್ಎಸ್ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…
ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…
ಹೇಮಂತ್ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…