ಬೆಂಗಳೂರು: ತಮ್ಮ ಹಕ್ಕಿಗಾಗಿ ಫ್ರೀಡಂಪಾರ್ಕ್ನಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರ ಟೆಂಟ್ಅನ್ನು ಪೊಲೀಸರ ಮುಖಾಂತರ ಕಿತ್ತುಹಾಕಿಸುವ ಮೂಲಕ ರಾಜ್ಯ ಸರ್ಕಾರ ಹಿಟ್ಲರ್ ಧೋರಣೆ ತೋರಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ʼಎಕ್ಸ್ʼ ನಲ್ಲಿ ಟ್ವೀಟ್ ಮಾಡಿರುವ ಅವರು, ಸ್ವಾಮಿ ಸಿಎಂ ಸಿದ್ದರಾಮಯ್ಯನವರೇ ಚುನಾವಣಾ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರಿಗೆ ನೀಡಿದ ಭರವಸೆಗಳನ್ನು ಮರೆತು ಈಗ ಅವರ ಮೇಲೆ ದರ್ಪ ತೋರಿಸುತ್ತಿದ್ದೀರಾ. ಕೊರೆಯುವ ಚಳಿಯನ್ನು ಲೆಕ್ಕಿಸದೇ 4 ದಿನದಿಂದ ಆಹೋರಾತ್ರಿ ಪ್ರತಿಭಟಿಸುತ್ತಿರುವ ಮಹಿಳೆಯರ ಬಳಿ ಹೋಗಿ ಕನಿಷ್ಠ ಪಕ್ಷ ಅವರ ಸಮಾಧಾನ ಪಡಿಸುವ ಸೌಜನ್ಯವೂ ನಿಮ್ಮ ಸರ್ಕಾರಕ್ಕೆ ಇಲ್ಲ. ಈಗ ಅವರ ಶಾಂತಿಯುತ ಪ್ರತಿಭಟನೆಗೂ ಅಡ್ಡಿಪಡಿಸುವುದು ಯಾವ ನ್ಯಾಯ ಎಂದು ಆರೋಪಿಸಿದರು.
ತಮ್ಮ ನಾಯಕ ರಾಹುಲ್ ಗಾಂಧಿ ಅವರು ಹೋದ ಕಡೆಯೆಲ್ಲಾ ಸಂವಿಧಾನ ಪ್ರದರ್ಶನ ಮಾಡುತ್ತಾರೆ. ಆದರೆ ನೀವು ಸಾಮಾನ್ಯ ನಾಗರೀಕರು ಪ್ರತಿಭಟಿಸುವ ಹಕ್ಕನ್ನು ಕಿತ್ತುಕೊಳ್ಳುತ್ತಿದ್ದಿರಾ. ನಿಮ್ಮ ಹಿಟ್ಲರ್ ಧೋರಣೆ ಜಾಸ್ತಿ ಸಮಯ ನಡೆಯುವುದಿಲ್ಲ. ರಾಜ್ಯದ ಜನತೆ ನಿಮ್ಮ ಸರ್ಕಾರದ ವಿರುದ್ಧ ತಿರುಗಿ ಬೀಳುವ ದಿನ ಬಹಳ ದೂರವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬೆಂಗಳೂರು: ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ…
ಇಂಪಾಲ: ಮಣಿಪುರದಲ್ಲಿ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯ…
ಹುಬ್ಬಳ್ಳಿ: ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂಬ ಸಚಿವ ಜಮೀರ್ ಅಹ್ಮಮದ್ ಖಾನ್ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.…
ಬೆಂಗಳೂರು: ನಮ್ಮ ಅಣ್ಣ ಸಿಎಂ ಆಗಬೇಕು ಎಂಬ ಆಸೆ ಇದೆ. ಆದರೆ ಇವತ್ತೇ ಸಿಎಂ ಆಗಬೇಕು ಅಂತೇನಿಲ್ಲ. ಇನ್ನೂ ಸಮಯವಿದೆ…
ಮಡಿಕೇರಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್.17ರಂದು ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಂಬಂಧಪಟ್ಟ…
ಟೆಹರಾನ್: ಮಧ್ಯಪ್ರಾಚ್ಯದಲ್ಲಿ ಯುದ್ಧದ ಜ್ವಾಲೆ ಮತ್ತಷ್ಟು ಭೀಕರ ಸ್ವರೂಪ ಪಡೆದುಕೊಂಡಿದೆ. ಇಸ್ರೇಲ್ ಈಗ ಇರಾನ್ ನಾಗರಿಕರಿಗೆ ಅತ್ಯಂತ ಗಂಭೀರವಾದ ಎಚ್ಚರಿಕೆಯನ್ನು…