ರಾಜ್ಯ

ಆಶಾ ಕಾರ್ಯಕರ್ತೆಯರ ಪ್ರತಿಭಟನೆಗೆ ಪೊಲೀಸರ ಅಡ್ಡಿ: ಆರ್‌.ಅಶೋಕ್‌ ಆಕ್ರೋಶ

ಬೆಂಗಳೂರು: ತಮ್ಮ ಹಕ್ಕಿಗಾಗಿ ಫ್ರೀಡಂಪಾರ್ಕ್‌ನಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರ ಟೆಂಟ್‌ಅನ್ನು ಪೊಲೀಸರ ಮುಖಾಂತರ ಕಿತ್ತುಹಾಕಿಸುವ ಮೂಲಕ ರಾಜ್ಯ ಸರ್ಕಾರ ಹಿಟ್ಲರ್‌ ಧೋರಣೆ ತೋರಿದೆ ಎಂದು ವಿಪಕ್ಷ ನಾಯಕ ಆರ್‌. ಅಶೋಕ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ʼಎಕ್ಸ್‌ʼ ನಲ್ಲಿ ಟ್ವೀಟ್‌ ಮಾಡಿರುವ ಅವರು, ಸ್ವಾಮಿ ಸಿಎಂ ಸಿದ್ದರಾಮಯ್ಯನವರೇ ಚುನಾವಣಾ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರಿಗೆ ನೀಡಿದ ಭರವಸೆಗಳನ್ನು ಮರೆತು ಈಗ ಅವರ ಮೇಲೆ ದರ್ಪ ತೋರಿಸುತ್ತಿದ್ದೀರಾ. ಕೊರೆಯುವ ಚಳಿಯನ್ನು ಲೆಕ್ಕಿಸದೇ 4 ದಿನದಿಂದ ಆಹೋರಾತ್ರಿ ಪ್ರತಿಭಟಿಸುತ್ತಿರುವ ಮಹಿಳೆಯರ ಬಳಿ ಹೋಗಿ ಕನಿಷ್ಠ ಪಕ್ಷ ಅವರ ಸಮಾಧಾನ ಪಡಿಸುವ ಸೌಜನ್ಯವೂ ನಿಮ್ಮ ಸರ್ಕಾರಕ್ಕೆ ಇಲ್ಲ. ಈಗ ಅವರ ಶಾಂತಿಯುತ ಪ್ರತಿಭಟನೆಗೂ ಅಡ್ಡಿಪಡಿಸುವುದು ಯಾವ ನ್ಯಾಯ ಎಂದು ಆರೋಪಿಸಿದರು.

ತಮ್ಮ ನಾಯಕ ರಾಹುಲ್‌ ಗಾಂಧಿ ಅವರು ಹೋದ ಕಡೆಯೆಲ್ಲಾ ಸಂವಿಧಾನ ಪ್ರದರ್ಶನ ಮಾಡುತ್ತಾರೆ. ಆದರೆ ನೀವು ಸಾಮಾನ್ಯ ನಾಗರೀಕರು ಪ್ರತಿಭಟಿಸುವ ಹಕ್ಕನ್ನು ಕಿತ್ತುಕೊಳ್ಳುತ್ತಿದ್ದಿರಾ. ನಿಮ್ಮ ಹಿಟ್ಲರ್‌ ಧೋರಣೆ ಜಾಸ್ತಿ ಸಮಯ ನಡೆಯುವುದಿಲ್ಲ. ರಾಜ್ಯದ ಜನತೆ ನಿಮ್ಮ ಸರ್ಕಾರದ ವಿರುದ್ಧ ತಿರುಗಿ ಬೀಳುವ ದಿನ ಬಹಳ ದೂರವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಆಂದೋಲನ ಡೆಸ್ಕ್

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

5 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

6 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

6 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

7 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

8 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

12 hours ago