Mysore
22
clear sky

Social Media

ಸೋಮವಾರ, 09 ಮಾರ್ಚ್ 2026
Light
Dark

ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ಇದ್ದ ಹೋಟೆಲ್‌ ಮೇಲೆ ಪೊಲೀಸರ ದಾಳಿ

ಹೈದರಾಬಾದ್‌: ತೆಲಂಗಾಣ ರಾಜ್ಯ ವಿಧಾನಸಭಾ ಚುನಾವಣೆಗೆ ಕ್ಷಣಗಣನೆ ಪ್ರಾರಂಭವಾಗಿದ್ದು, ಸ್ಥಳಿಯ ಪ್ರಾದೇಶಕ ಪಕ್ಷಗಳನ್ನು ಒಳಗೊಂಡಂತೆ ರಾಷ್ಟ್ರೀಯ ಪಕ್ಷಗಳು ತಂತ್ರ ಪ್ರತಿತಂತ್ರಗಳನ್ನು ರೂಪಿಸುತ್ತಿವೆ. ಈ ವೇಳೆ ರಾಷ್ಟ್ರೀಯ ಪಕ್ಷದ ಇತರೇ ರಾಜ್ಯಗಳ ಗಟಾನುಗಟಿ ನಾಯಕರು ತೆಲಂಗಾಣದಲ್ಲಿ ಬೀಡು ಬಿಟ್ಟಿದ್ದಾರೆ. ತಮ್ಮ ಪಕ್ಷದ ಅಭ್ಯರ್ಥಿಗಳ ಪ್ರಚಾರಕ್ಕಾಗಿ ಕರ್ನಾಟಕದಿಂದ ಕಾಂಗ್ರೆಸ್‌ ಹಾಗೂ ಬಿಜೆಪಿಯ ಅನೇಕ ನಾಯಕರು ತೆರಳಿದ್ದಾರೆ. ಕಾಂಗ್ರೆಸ್‌ ನಾಯಕ ಹಾಗೂ ರಾಜ್ಯ ಸಚಿವ ಜಮೀರ್‌ ಅಹಮ್ಮದ್‌ ಕೂಡ ಪ್ರಚಾರ ಕಾರ್ಯದಲ್ಲಿ ತೊಡಗಿದ್ದು, ನಿನ್ನೆ ತಡ ರಾತ್ರಿ ಜಮೀರ್‌ ಅವರು ತಂಗಿದ್ದ ಹೈದರಾಬಾದ್‌ನ ಪಾರ್ಕ್‌ ಹಯಾತ್‌ ಹೋಟೆಲ್‌ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.

ಪೊಲೀಸರ ದಾಳಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿರುವ ಸಚಿವ ಜಮೀರ್‌ ಅಹಮ್ಮದ್‌ ಖಾನ್‌, ಈ ರೀತಿ ದಾಳಿ ಮಾಡಿಸುವ ಮೂಲಕ ನಮ್ಮನ್ನು ಹೆದರಿಸಿ ವಾಪಸ್‌ ಕಳಿಸಲು ಪ್ರಯತ್ನ ಮಾಡಲಾಗುತ್ತಿ. ಆದರೇ ಯಾವುದೇ ಕಾರಣಕ್ಕು ಈ ರೀತಿಯ ಕುಂತಂತ್ರಗಳಿಗೆ ನಾವು ಹೆದರುವುದಿಲ್ಲ ಮತ್ತು ಹೆಜ್ಜೆ ಹಿಂದೆ ಇಡುವ ಪ್ರಶ್ನೆ ಇಲ್ಲ ಅಂತಾ ಹೇಳಿದ್ದಾರೆ

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!