ಮಂಡ್ಯದ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ತೆರವುಗೊಳಿಸಿದ ಬೆನ್ನಲ್ಲೇ ರಾಜ್ಯದ ವಿವಿಧೆಡೆ ಧ್ವಜ ಯುದ್ಧ ಶುರುವಾದಂತಿದೆ. ನಿನ್ನೆ ( ಜನವರಿ 29 ) ಈ ಸಂಬಂಧ ಮಂಡ್ಯದಲ್ಲಿ ಕುಮಾರಸ್ವಾಮಿ ಸೇರಿದಂತೆ ಹಲವು ನಾಯಕರ ನೇತೃತ್ವದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಹಿಂದೂಪರ ಸಂಘಟನೆಗಳ ಜತೆಗೂಡಿ ಪ್ರತಿಭಟನೆ ನಡೆಸಿದ್ದರು.
ಇದಾದ ಬೆನ್ನಲ್ಲೇ ರಾಜ್ಯದ ವಿವಿಧ ಸ್ಥಳಗಳಲ್ಲಿ ಹಾರುತ್ತಿರುವ ಬಾವುಟಗಳ ವಿರುದ್ಧ ಹಿಂದೂಪರ ಕಾರ್ಯರ್ತರು ದನಿ ಎತ್ತಿದ್ದಾರೆ. ಕೆರಗೋಡಿನಲ್ಲಿ ಹನುಮ ಧ್ವಜದ ಬದಲು ರಾಷ್ಟ್ರಧ್ವಜ ಹಾರಿಸಿ ʼಸಾರ್ವಜನಿಕ ಸ್ಥಳಗಳಲ್ಲಿ ರಾಷ್ಟ್ರಧ್ವಜದ ಬದಲು ಯಾವುದೇ ಧಾರ್ಮಿಕ ಧ್ವಜ ಹಾರಿಸುವಂತಿಲ್ಲʼ ಎಂದು ಕಾಂಗ್ರೆಸ್ನ ಹಲವರು ಹೇಳಿದ್ದರು. ಹಾಗಿದ್ದರೆ ಬೆಂಗಳೂರಿನ ಶಿವಾಜಿನಗರದ ಚಾಂದಿನಿ ಚೌಕ್ನಲ್ಲಿರುವ ಹಸಿರು ಧ್ವಜಕ್ಕೆ ಅನುಮತಿ ಹೇಗೆ ಸಿಕ್ಕಿತು ಎಂದು ಪ್ರಶ್ನೆಯನ್ನು ಹಾಕಿದ್ದರು.
ಹೀಗೆ ಸಾಮಾಜಿಕ ಜಾಲತಾಣದಲ್ಲಿ ಈ ಧ್ವಜದ ಕುರಿತು ಭಾರೀ ವಿರೋಧ ವ್ಯಕ್ತವಾದ ಬೆನ್ನಲ್ಲೇ ಪೊಲೀಸರು ಹಸಿರು ಧ್ವಜವನ್ನು ತೆರವುಗೊಳಿಸಿ ರಾಷ್ಟ್ರಧ್ವಜವನ್ನು ಹಾರಿಸಿದ್ದಾರೆ. ಸದ್ಯ ಚಾಂದಿನಿ ಚೌಕ್ನಲ್ಲಿ ತ್ರಿರಂಗ ಹಾರುತ್ತಿರುವ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…