ರಾಜ್ಯ

ನಾನು ನಂದಿನಿ ಹಾಡಿನ ಖ್ಯಾತಿಯ ವಿಕ್ಕಿಪೀಡಿಯಾ ವಿಕಾಸ್‌ಗೆ ಶಾಕ್‌ ಕೊಟ್ಟ ಪೊಲೀಸರು

ಬೆಂಗಳೂರು: ಮಾದಕವಸ್ತು ವ್ಯಸನದ ಬಗ್ಗೆ ವಿಡಿಯೋ ಮಾಡಿ, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದ ನಾನು ನಂದಿನಿ, ಬೆಂಗಳೂರಿಗೆ ಬಂದೀನಿ ಹಾಡಿನ ಖ್ಯಾತಿಯ ವಿಕ್ಕಿಪೀಡಿಯಾ ವಿಕಾಸ್‌ಗೆ ಪೊಲೀಸರು ಬಿಗ್‌ ಶಾಕ್‌ ಕೊಟ್ಟಿದ್ದಾರೆ.

ಡ್ರಗ್ಸ್‌ ಪದ ಬಳಸಿ ಮಾಡಿದ್ದ ವಿಡಿಯೋವನ್ನು ಪೊಲೀಸರು ಡಿಲೀಟ್‌ ಮಾಡಿಸಿದ್ದಾರೆ. ಬೆಂಗಳೂರಿನ ಬೈಯ್ಯಪ್ಪನಹಳ್ಳಿ ಪೊಲೀಸರು, ವಿಕಾಸ್‌ಗೆ ದೂರವಾಣಿ ಕರೆ ಮಾಡಿ ಡ್ರಗ್ಸ್‌ ಪದ ಬಳಸಿ ಮಾಡಲಾಗಿದ್ದ ವಿಡಿಯೋವನ್ನು ತೆಗೆಸಿದ್ದಾರೆ.

ಭಿನ್ನ ವಿಭಿನ್ನ ರೀಲ್ಸ್‌ಗಳನ್ನು ಶೇರ್‌ ಮಾಡಿ ಸಖತ್‌ ಸುದ್ದಿಯಲ್ಲಿ ಇರುತ್ತಿದ್ದ ಕಂಟೆಂಟ್‌ ಕ್ರಿಯೇಟರ್‌ ವಿಕ್ಕಿಪೀಡಿಯಾ ವಿಕಾಸ್‌ ಅವರು, ಡ್ರಗ್ಸ್‌ ವಿಚಾರಕ್ಕೆ ಸಂಬಂಧಿಸಿದಂತೆ ಒಂದು ರೀಲ್ಸ್‌ ಮಾಡಿ ತಮ್ಮ ಇನ್ಸ್‌ಸ್ಟಾಗ್ರಾಮ್‌ ಖಾತೆಯಲ್ಲಿ ಶೇರ್‌ ಮಾಡಿಕೊಂಡಿದ್ದರು. ಇದೇ ರೀಲ್ಸ್‌ ಈಗ ಪೊಲೀಸ್‌ ಠಾಣೆ ಮೆಟ್ಟಿಲೇರುವಂತೆ ಮಾಡಿದ್ದು, ಇದೀಗ ಅದನ್ನು ಬೈಯ್ಯಪ್ಪನಹಳ್ಳಿ ಪೊಲೀಸರು ಡಿಲೀಟ್‌ ಮಾಡಿಸಿದ್ದಾರೆ.

ಇಂದಿನ ಯುವಕರು ಎಂಜಾಯ್‌ಗೋಸ್ಕರ ಅಂತ ಮದ್ಯಪಾನ ಮಾಡುವುದು, ಸಿಗರೇಟ್‌ ಸೇದೋದು, ಹುಡುಗೀರ್‌ ಹಿಂದೆ ಹೋಗ್ತಾರೆ. ಆದರೆ, ನಾನು ಎಂಜಾಯ್‌ಮೆಂಟ್‌ ಮಾಡಲು ಡ್ರಗ್ಸ್‌ ತಗೋತೀನಿ ಎನ್ನುವ ರೀತಿಯಲ್ಲಿ ವಿಕಾಸ್‌ ಹಾಗೂ ಅವರ ಸ್ನೇಹಿತ ವಿಡಿಯೋ ಮಾಡಿದ್ದರು. ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್‌ ಮಾಡಿಕೊಂಡಿದ್ದರು.

ಇದನ್ನು ಗಮನಿಸಿದ ಪೊಲೀಸರು ಕೂಡಲೇ ವಿಕಾಸ್‌ಗೆ ಕರೆ ಮಾಡಿ ಆ ವಿಡಿಯೋವನ್ನು ತೆಗೆಸಿದ್ದಾರೆ. ಅಲ್ಲದೇ ಮತ್ತೆ ಎಂದು ಈ ರೀತಿಯ ವಿಡಿಯೋ ಮಾಡದಂತೆ ಸೂಚನೆ ಕೊಟ್ಟಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

40 mins ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

1 hour ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

1 hour ago

ಕರ್ನಾಟಕ ಪಬ್ಲಿಕ್ ಶಾಲೆಗೆ ಮೇಲ್ದರ್ಜೇಗೇರಿಸಲು ಅಗತ್ಯ ಕ್ರಮ: ʻಜಿಟಿಡಿʼ

ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ…

2 hours ago

ಪಶ್ಚಿಮಘಟ್ಟ: 16114 ಚ.ಕಿ.ಮೀ. ಪರಿಸರ ಸೂಕ್ಷ್ಮ ಪ್ರದೇಶ ಮಿತಿ ಸೂಕ್ತ :ಈಶ್ವರ ಖಂಡ್ರೆ

ಪಶ್ಚಿಮಘಟ್ಟ ಕುರಿತ ಕಸ್ತೂರಿ ರಂಗನ್ ವರದಿ ಬಗ್ಗೆ ಬಾಧ್ಯಸ್ಥರ ಸಭೆ ಬೆಂಗಳೂರು: ರಾಜ್ಯದ ವಿವಿಧ ಅರಣ್ಯ ಮತ್ತು ವನ್ಯಜೀವಿ ತಾಣಗಳ ಸುತ್ತ…

2 hours ago

ರಾಜ್ಯದಲ್ಲಿ ತುರ್ತು ಪರಿಸ್ಥಿತಿ, ರಾಜ್ಯಪಾಲರ ಅಧಿಕಾರ ಕಿತ್ತುಕೊಳ್ಳುವ ಪ್ರಯತ್ನ: ಆರ್‌.ಅಶೋಕ

ಕಾಂಗ್ರೆಸ್‌ ಮಾಡುವ ಪಾಪಕ್ಕೆ ಮುಂದಿನ ದಿನಗಳಲ್ಲಿ ಪಶ್ಚಾತ್ತಾಪ ಪಡಬೇಕಾಗುತ್ತದೆ ದೊಡ್ಡಬಳ್ಳಾಪುರ: ಕರ್ನಾಟಕದಲ್ಲಿ ತುರ್ತು ಪರಿಸ್ಥಿತಿ ಸೃಷ್ಟಿಯಾಗಿದ್ದು, ಪೊಲೀಸರನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ…

2 hours ago