ರಾಜ್ಯ

ನಾನು ನಂದಿನಿ ಹಾಡಿನ ಖ್ಯಾತಿಯ ವಿಕ್ಕಿಪೀಡಿಯಾ ವಿಕಾಸ್‌ಗೆ ಶಾಕ್‌ ಕೊಟ್ಟ ಪೊಲೀಸರು

ಬೆಂಗಳೂರು: ಮಾದಕವಸ್ತು ವ್ಯಸನದ ಬಗ್ಗೆ ವಿಡಿಯೋ ಮಾಡಿ, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದ ನಾನು ನಂದಿನಿ, ಬೆಂಗಳೂರಿಗೆ ಬಂದೀನಿ ಹಾಡಿನ ಖ್ಯಾತಿಯ ವಿಕ್ಕಿಪೀಡಿಯಾ ವಿಕಾಸ್‌ಗೆ ಪೊಲೀಸರು ಬಿಗ್‌ ಶಾಕ್‌ ಕೊಟ್ಟಿದ್ದಾರೆ.

ಡ್ರಗ್ಸ್‌ ಪದ ಬಳಸಿ ಮಾಡಿದ್ದ ವಿಡಿಯೋವನ್ನು ಪೊಲೀಸರು ಡಿಲೀಟ್‌ ಮಾಡಿಸಿದ್ದಾರೆ. ಬೆಂಗಳೂರಿನ ಬೈಯ್ಯಪ್ಪನಹಳ್ಳಿ ಪೊಲೀಸರು, ವಿಕಾಸ್‌ಗೆ ದೂರವಾಣಿ ಕರೆ ಮಾಡಿ ಡ್ರಗ್ಸ್‌ ಪದ ಬಳಸಿ ಮಾಡಲಾಗಿದ್ದ ವಿಡಿಯೋವನ್ನು ತೆಗೆಸಿದ್ದಾರೆ.

ಭಿನ್ನ ವಿಭಿನ್ನ ರೀಲ್ಸ್‌ಗಳನ್ನು ಶೇರ್‌ ಮಾಡಿ ಸಖತ್‌ ಸುದ್ದಿಯಲ್ಲಿ ಇರುತ್ತಿದ್ದ ಕಂಟೆಂಟ್‌ ಕ್ರಿಯೇಟರ್‌ ವಿಕ್ಕಿಪೀಡಿಯಾ ವಿಕಾಸ್‌ ಅವರು, ಡ್ರಗ್ಸ್‌ ವಿಚಾರಕ್ಕೆ ಸಂಬಂಧಿಸಿದಂತೆ ಒಂದು ರೀಲ್ಸ್‌ ಮಾಡಿ ತಮ್ಮ ಇನ್ಸ್‌ಸ್ಟಾಗ್ರಾಮ್‌ ಖಾತೆಯಲ್ಲಿ ಶೇರ್‌ ಮಾಡಿಕೊಂಡಿದ್ದರು. ಇದೇ ರೀಲ್ಸ್‌ ಈಗ ಪೊಲೀಸ್‌ ಠಾಣೆ ಮೆಟ್ಟಿಲೇರುವಂತೆ ಮಾಡಿದ್ದು, ಇದೀಗ ಅದನ್ನು ಬೈಯ್ಯಪ್ಪನಹಳ್ಳಿ ಪೊಲೀಸರು ಡಿಲೀಟ್‌ ಮಾಡಿಸಿದ್ದಾರೆ.

ಇಂದಿನ ಯುವಕರು ಎಂಜಾಯ್‌ಗೋಸ್ಕರ ಅಂತ ಮದ್ಯಪಾನ ಮಾಡುವುದು, ಸಿಗರೇಟ್‌ ಸೇದೋದು, ಹುಡುಗೀರ್‌ ಹಿಂದೆ ಹೋಗ್ತಾರೆ. ಆದರೆ, ನಾನು ಎಂಜಾಯ್‌ಮೆಂಟ್‌ ಮಾಡಲು ಡ್ರಗ್ಸ್‌ ತಗೋತೀನಿ ಎನ್ನುವ ರೀತಿಯಲ್ಲಿ ವಿಕಾಸ್‌ ಹಾಗೂ ಅವರ ಸ್ನೇಹಿತ ವಿಡಿಯೋ ಮಾಡಿದ್ದರು. ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್‌ ಮಾಡಿಕೊಂಡಿದ್ದರು.

ಇದನ್ನು ಗಮನಿಸಿದ ಪೊಲೀಸರು ಕೂಡಲೇ ವಿಕಾಸ್‌ಗೆ ಕರೆ ಮಾಡಿ ಆ ವಿಡಿಯೋವನ್ನು ತೆಗೆಸಿದ್ದಾರೆ. ಅಲ್ಲದೇ ಮತ್ತೆ ಎಂದು ಈ ರೀತಿಯ ವಿಡಿಯೋ ಮಾಡದಂತೆ ಸೂಚನೆ ಕೊಟ್ಟಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಕಾಡುವುದು ಅನುಮಾನ!

ಕಾಡುವುದು ಅನುಮಾನ! ಈಗ ಎಲ್ಲೆಲ್ಲೂ ಕೃತಕ ಬುದ್ಧಿಮತ್ತೆಯದೆ ಸುದ್ದಿ! ಕೃತಕ ಬುದ್ಧಿಮತ್ತೆಗೆ ನೈಜ ಬುದ್ಧಿಮತ್ತೆ ಮೂಲವಾದರೂ ಕಾಡುವುದು ಅನುಮಾನ ಕೃತಕ…

3 hours ago

ಓದುಗರ ಪತ್ರ: ಎಐ ಸಾಕ್ಷರತೆ ಕಡ್ಡಾಯವಾಗಲಿ

ಇಂದಿನ ತಾಂತ್ರಿಕ ಯುಗದಲ್ಲಿ ಸರ್ಕಾರಗಳು ಕೇವಲ ನಿಯಂತ್ರಕರಾಗಿ ಉಳಿಯದೆ, ಮಾರ್ಗದರ್ಶಕ ಶಕ್ತಿಯಾಗಿಯೂ ಕಾರ್ಯನಿರ್ವಹಿಸಬೇಕಿದೆ. ಮೊದಲನೆಯದಾಗಿ ಶಿಕ್ಷಣ ವ್ಯವಸ್ಥೆಯಲ್ಲಿ ಮೂಲಭೂತ ಬದಲಾವಣೆ…

3 hours ago

ಓದುಗರ ಪತ್ರ: ಉಚಿತ ಕೊಡುಗೆಗಳ ಬಗ್ಗೆ ಪರಾಮರ್ಶೆ ಅಗತ್ಯ

ಉಚಿತ ಕೊಡುಗೆ ಪ್ರಕಟಿಸುವ ರಾಜಕೀಯ ಪಕ್ಷಗಳ ನಡೆಗೆ ಕಳೆದ ಗುರುವಾರ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿರುವುದು ಸ್ವಾಗತಾರ್ಹವಾಗಿದೆ. ಚುನಾವಣೆ ವೇಳೆ…

3 hours ago

ಸಫಾರಿಗೆ ಸ್ಥಳೀಯರ ಸ್ವಾಗತ… ರೈತ ಮುಖಂಡರ ವಿರೋಧ

ಪ್ರಶಾಂತ್ ಎನ್.ಮಲ್ಲಿಕ್ ಇಂದಿನಿಂದ ಬಂಡೀಪುರ-ನಾಗರಹೊಳೆ ರಾಷ್ಟ್ರೀಯ ಉದ್ಯಾನವನಗಳಲ್ಲಿ ವನ್ಯಜೀವಿ ಸಫಾರಿ ಪುನರಾರಂಭ  ಮೈಸೂರು: ಬಂಡೀಪುರ ಹಾಗೂ ನಾಗರಹೊಳೆ ರಾಷ್ಟ್ರೀಯ ಉದ್ಯಾನವನಗಳಲ್ಲಿ…

3 hours ago

ಮಹಾಶಿವರಾತ್ರಿ ಜಾತ್ರೆ; ೩.೩೫ ಕೋಟಿ ರೂ.ಆದಾಯ

ಮಹಾದೇಶ್ ಎಂ.ಗೌಡ ಮಲೆ ಮಹದೇಶ್ವರ ಬೆಟ್ಟಕೆ ಆಗಮಿಸಿದ ಲಕ್ಷಾಂತರ ಭಕ್ತಾದಿಗಳಿಂದ ಕಾಣಿಕೆ ಅರ್ಪಣೆ  ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ…

3 hours ago

ಪಿಯುಸಿ ಪರೀಕ್ಷೆ ಅಕ್ರಮ ತಡೆಗೆ ವೆಬ್ ಕಾಸ್ಟಿಂಗ್ ಕಣ್ಗಾವಲು

ಕೆ.ಬಿ.ರಮೇಶನಾಯಕ ಮೈಸೂರು ಜಿಲ್ಲೆಯಲ್ಲಿ ೫೧ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಕೆ ಪರೀಕ್ಷಾ ಕೇಂದ್ರಗಳ ವೀಕ್ಷಣೆಗೆ ೧೦ ಉಪನ್ಯಾಸಕರ ತಂಡ ರಚನೆ…

3 hours ago