ರಾಜ್ಯ

ನಾನು ನಂದಿನಿ ಹಾಡಿನ ಖ್ಯಾತಿಯ ವಿಕ್ಕಿಪೀಡಿಯಾ ವಿಕಾಸ್‌ಗೆ ಶಾಕ್‌ ಕೊಟ್ಟ ಪೊಲೀಸರು

ಬೆಂಗಳೂರು: ಮಾದಕವಸ್ತು ವ್ಯಸನದ ಬಗ್ಗೆ ವಿಡಿಯೋ ಮಾಡಿ, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದ ನಾನು ನಂದಿನಿ, ಬೆಂಗಳೂರಿಗೆ ಬಂದೀನಿ ಹಾಡಿನ ಖ್ಯಾತಿಯ ವಿಕ್ಕಿಪೀಡಿಯಾ ವಿಕಾಸ್‌ಗೆ ಪೊಲೀಸರು ಬಿಗ್‌ ಶಾಕ್‌ ಕೊಟ್ಟಿದ್ದಾರೆ.

ಡ್ರಗ್ಸ್‌ ಪದ ಬಳಸಿ ಮಾಡಿದ್ದ ವಿಡಿಯೋವನ್ನು ಪೊಲೀಸರು ಡಿಲೀಟ್‌ ಮಾಡಿಸಿದ್ದಾರೆ. ಬೆಂಗಳೂರಿನ ಬೈಯ್ಯಪ್ಪನಹಳ್ಳಿ ಪೊಲೀಸರು, ವಿಕಾಸ್‌ಗೆ ದೂರವಾಣಿ ಕರೆ ಮಾಡಿ ಡ್ರಗ್ಸ್‌ ಪದ ಬಳಸಿ ಮಾಡಲಾಗಿದ್ದ ವಿಡಿಯೋವನ್ನು ತೆಗೆಸಿದ್ದಾರೆ.

ಭಿನ್ನ ವಿಭಿನ್ನ ರೀಲ್ಸ್‌ಗಳನ್ನು ಶೇರ್‌ ಮಾಡಿ ಸಖತ್‌ ಸುದ್ದಿಯಲ್ಲಿ ಇರುತ್ತಿದ್ದ ಕಂಟೆಂಟ್‌ ಕ್ರಿಯೇಟರ್‌ ವಿಕ್ಕಿಪೀಡಿಯಾ ವಿಕಾಸ್‌ ಅವರು, ಡ್ರಗ್ಸ್‌ ವಿಚಾರಕ್ಕೆ ಸಂಬಂಧಿಸಿದಂತೆ ಒಂದು ರೀಲ್ಸ್‌ ಮಾಡಿ ತಮ್ಮ ಇನ್ಸ್‌ಸ್ಟಾಗ್ರಾಮ್‌ ಖಾತೆಯಲ್ಲಿ ಶೇರ್‌ ಮಾಡಿಕೊಂಡಿದ್ದರು. ಇದೇ ರೀಲ್ಸ್‌ ಈಗ ಪೊಲೀಸ್‌ ಠಾಣೆ ಮೆಟ್ಟಿಲೇರುವಂತೆ ಮಾಡಿದ್ದು, ಇದೀಗ ಅದನ್ನು ಬೈಯ್ಯಪ್ಪನಹಳ್ಳಿ ಪೊಲೀಸರು ಡಿಲೀಟ್‌ ಮಾಡಿಸಿದ್ದಾರೆ.

ಇಂದಿನ ಯುವಕರು ಎಂಜಾಯ್‌ಗೋಸ್ಕರ ಅಂತ ಮದ್ಯಪಾನ ಮಾಡುವುದು, ಸಿಗರೇಟ್‌ ಸೇದೋದು, ಹುಡುಗೀರ್‌ ಹಿಂದೆ ಹೋಗ್ತಾರೆ. ಆದರೆ, ನಾನು ಎಂಜಾಯ್‌ಮೆಂಟ್‌ ಮಾಡಲು ಡ್ರಗ್ಸ್‌ ತಗೋತೀನಿ ಎನ್ನುವ ರೀತಿಯಲ್ಲಿ ವಿಕಾಸ್‌ ಹಾಗೂ ಅವರ ಸ್ನೇಹಿತ ವಿಡಿಯೋ ಮಾಡಿದ್ದರು. ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್‌ ಮಾಡಿಕೊಂಡಿದ್ದರು.

ಇದನ್ನು ಗಮನಿಸಿದ ಪೊಲೀಸರು ಕೂಡಲೇ ವಿಕಾಸ್‌ಗೆ ಕರೆ ಮಾಡಿ ಆ ವಿಡಿಯೋವನ್ನು ತೆಗೆಸಿದ್ದಾರೆ. ಅಲ್ಲದೇ ಮತ್ತೆ ಎಂದು ಈ ರೀತಿಯ ವಿಡಿಯೋ ಮಾಡದಂತೆ ಸೂಚನೆ ಕೊಟ್ಟಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಬಹುನಿರೀಕ್ಷಿತ ಮಾರ್ಕ್‌ ಹಾಗೂ 45 ಸಿನಿಮಾ ಬಿಡುಗಡೆ

ಸ್ಯಾಂಡಲ್‌ವುಡ್‌ನಲ್ಲಿ ಇಂದು ಕ್ರಿಸ್‌ಮಸ್‌ ಹಬ್ಬದ ಸಡಗರದ ನಡುವೆ ಎರಡು ಬಹುನಿರೀಕ್ಷಿತ ಸಿನಿಮಾಗಳು ಅಬ್ಬರದಿಂದ ತೆರೆಗೆ ಬಂದಿವೆ, ಹ್ಯಾಟ್ರಿಕ್‌ ಹೀರೋ ಶಿವರಾಜ್‌ಕುಮಾರ್‌,…

3 mins ago

ಕಾಡಾನೆಗಳು ಊರಿಗೆ ಬರದಂತೆ ಎಐ ಆಧಾರಿತ ಕ್ಯಾಮರಾ ಅಳವಡಿಕೆ

ಮೈಸೂರು: ಕಾಡಾನೆಗಳು ಊರಿಗೆ ಬರದಂತೆ ಅರಣ್ಯ ಇಲಾಖೆಯು ಎಐ ಆಧಾರಿರ ಕೂಗು ಕ್ಯಾಮರಾವನ್ನು ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅಳವಡಿಸಿದೆ.…

41 mins ago

ಚಿತ್ರದುರ್ಗದಲ್ಲಿ ಬಸ್‌ ಅಪಘಾತ ಪ್ರಕರಣ: ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹಿರಿಯೂರು ಬಳಿ ಸಂಭವಿಸಿದ ಭೀಕರ ಬಸ್‌ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ರೂ…

2 hours ago

ಚಿತ್ರದುರ್ಗದಲ್ಲಿ ಬಸ್‌ ಅಪಘಾತ ಪ್ರಕರಣ: ಹಾಸನ ಮೂಲದ ಇಬ್ಬರು ಟೆಕ್ಕಿಗಳು ಕಣ್ಮರೆ

ಹಾಸನ: ಚಿತ್ರದುರ್ಗ ಜಿಲ್ಲೆ ಹಿರಿಯೂರು ಬಳಿ ಸಂಭವಿಸಿದ ಭೀಕರ ಬಸ್‌ ಅಪಘಾತದಲ್ಲಿ ಹಾಸನದ ಚನ್ನರಾಯಪಟ್ಟಣ ಮೂಲದ ಇಬ್ಬರು ಯುವತಿಯರು ಕಣ್ಮರೆಯಾಗಿದ್ದಾರೆ.…

2 hours ago

ಚಿತ್ರದುರ್ಗದಲ್ಲಿ ಬಸ್‌ ದುರಂತ ಪ್ರಕರಣ: ಕಂಬನಿ ಮಿಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಬಳಿ ಸಂಭವಿಸಿದ ಕಂಟೇನರ್‌ ಹಾಗೂ ಖಾಸಗಿ ಬಸ್‌ ಭೀಕರ ಅಪಘಾತದಲ್ಲಿ ಮೃತಪಟ್ಟವರಿಗೆ…

2 hours ago

ಎಲ್ಲೆಡೆ ಕ್ರಿಸ್‌ಮಸ್ ಹಬ್ಬದ ಸಂಭ್ರಮ: ಗಣ್ಯರಿಂದ ಶುಭಾಶಯಗಳ ಮಹಾಪೂರ

ಬೆಂಗಳೂರು: ಮಧ್ಯರಾತ್ರಿಯಿಂದಲೇ ಎಲ್ಲೆಡೆ ಕ್ರಿಸ್‌ಮಸ್‌ ಸಡಗರ ಮನೆ ಮಾಡಿದೆ. ಪ್ರತಿ ವರ್ಷದಂತೆ ಈ ವರ್ಷವು ಸಹ ಕ್ರಿಸ್‌ಮಸ್‌ ಹಬ್ಬವು ನಂಬಿಕೆಯೆಂಬ…

2 hours ago