Mysore
22
overcast clouds

Social Media

ಸೋಮವಾರ, 03 ಆಗಸ್ಟ್ 2026
Light
Dark

ಬಳ್ಳಾರಿ ಹಿಂಸಾಚಾರಕ್ಕೆ ರಾಜಕೀಯ ಅಸೂಯೆ ಕಾರಣ: ಕಾಂಗ್ರೆಸ್‍ನ ಸತ್ಯಶೋಧನಾ ಸಮಿತಿ ವರದಿ

ಬೆಂಗಳೂರು: ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ರಾಜಶೇಖರ್ ಸಾವಿಗೆ ಕಾರಣವಾದ ಬಳ್ಳಾರಿ ಹಿಂಸಾಚಾರಕ್ಕೆ ರಾಜಕೀಯ ಅಸೂಯೆ ಕಾರಣ ಎಂದು ಕಾಂಗ್ರೆಸ್‍ನ ಸತ್ಯಶೋಧನಾ ಸಮಿತಿ ವರದಿ ನೀಡಿದೆ.

ಖಾತರಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ. ರೇವಣ್ಣ ನೇತೃತ್ವದ ಸಮಿತಿಯು ಮೊನ್ನೆ ಗುರುವಾರ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ತನ್ನ ವರದಿಯನ್ನು ಸಲ್ಲಿಸಿದೆ. ಪರಿಸ್ಥಿತಿಯನ್ನು ಮುಂಚಿತವಾಗಿ ನಿಭಾಯಿಸುವಲ್ಲಿ ಮತ್ತು ಉಲ್ಬಣಗೊಳ್ಳದಂತೆ ತಡೆಯುವಲ್ಲಿ ಗಂಭೀರ ಪೊಲೀಸ್ ಲೋಪವನ್ನು ರೇವಣ್ಣ ಅವರು ಎತ್ತಿ ತೋರಿಸಿದ್ದಾರೆ.

ವಿಶೇಷವಾಗಿ ಬಳ್ಳಾರಿ ಜಿಲ್ಲೆಯಲ್ಲಿ ರಾಜಕಾರಣಿಗಳು ಖಾಸಗಿ ಗನ್ ಮೆನ್‍ಗಳನ್ನು ನೇಮಿಸಿಕೊಳ್ಳುತ್ತಿದ್ದು, ಹೆಚ್ಚುತ್ತಿರುವ ಬೆದರಿಕೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಬಳ್ಳಾರಿ ಹಿಂಸಾಚಾರವು ನಗರದಲ್ಲಿ ಮಹರ್ಷಿ ವಾಲ್ಮೀಕಿ ಪ್ರತಿಮೆ ಸ್ಥಾಪನೆಗೆ ನೇತೃತ್ವ ವಹಿಸಿದ್ದ ಮತ್ತು ಭಾರಿ ಬೆಂಬಲವನ್ನು ಗಳಿಸಿದ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ವಿರುದ್ಧ ಬಿಜೆಪಿ ನಾಯಕರ ರಾಜಕೀಯ ಅಸೂಯೆಯ ಪರಿಣಾಮವಾಗಿದೆ ಎಂದು ಸಮಿತಿ ವರದಿಯಲ್ಲಿ ತಿಳಿಸಿದೆ.

ರಾಯಚೂರು ಸಂಸದ ಕುಮಾರ್ ನಾಯಕ್, ಚಳ್ಳಕೆರೆ ಶಾಸಕ ಟಿ. ರಘು ಮೂರ್ತಿ, ವಿಧಾನ ಪರಿಷತ್ ಸದಸ್ಯರಾದ ಎಫ್.ಎಚ್.ಜಕ್ಕಪ್ಪನವರ್ ಮತ್ತು ಬಸನಗೌಡ ಬಾದರ್ಲಿ ಮತ್ತು ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಅವರನ್ನು ಸಮಿತಿಯು ಒಳಗೊಂಡಿತ್ತು.

Tags:
error: Content is protected !!