ರಾಜ್ಯ

ಸೆಪ್ಟೆಂಬರ್‌ ವೇಳೆಗೆ ಬಿಜೆಪಿಯಲ್ಲೂ ರಾಜಕೀಯ ಕ್ರಾಂತಿ: ಸಚಿವ ಕೆ.ಎನ್.ರಾಜಣ್ಣ

ತುಮಕೂರು: ಸೆಪ್ಟೆಂಬರ್ ವೇಳೆಗೆ ರಾಜಕೀಯ ಕ್ರಾಂತಿಯಾಗಲಿದೆ ಎಂಬ ಹೇಳಿಕೆಯನ್ನು ಪುನರುಚ್ಚರಿಸಿರುವ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರು, ಈ ರೀತಿಯ ಕ್ರಾಂತಿ ಕಾಂಗ್ರೆಸ್ ಪಕ್ಷದಲ್ಲೇ ನಡೆಯುತ್ತದೆ ಎಂದು ಏಕೆ ಭಾವಿಸಬೇಕು. ಬಿಜೆಪಿಯಲ್ಲೂ ಆಗಬಹುದು ಅಥವಾ ಕೇಂದ್ರ ಸರ್ಕಾರದಲ್ಲೂ ಆಗಬಹುದು ಎಂದು ಹೇಳಿದ್ದಾರೆ.

ಈ ಕುರಿತು ತುಮಕೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಸೆಪ್ಟೆಂಬರ್‌ನಲ್ಲಿ ಚಳಿ ಇರುತ್ತದೆ. ಅದಕ್ಕಾಗಿ ಸ್ವಲ್ಪ ಬಿಸಿಯಾಗಲಿ ಎಂದು ರಾಜಕೀಯ ಕ್ರಾಂತಿಯ ಬಗ್ಗೆ ಹೇಳಿದ್ದೇನೆ. ರಾಜಕೀಯ ಬದಲಾವಣೆಯ ಬಗ್ಗೆ ಸೆಪ್ಟೆಂಬರ್‌ನಲ್ಲೇ ಹೇಳುತ್ತೇನೆ, ಈಗ ಹೇಳುವುದಿಲ್ಲ ಎಂದರು.

ಕ್ರಾಂತಿ ಎಂದರೆ ಹಲವು ರೀತಿಗಳಿವೆ. ಬಾಬು ಜಗಜೀವನರಾವ್ ಹಸಿರು ಕ್ರಾಂತಿ ಮಾಡಿದರು. 1919ರ ಅಕ್ಟೋಬರ್‌ನಲ್ಲಿ ರಷ್ಯಾದಲ್ಲಾದ ಕ್ರಾಂತಿಯನ್ನೇ ನೆನಪಿಸಿಕೊಳ್ಳಬೇಕೇ? ಎಂದರು.

ಕಾಂಗ್ರೆಸ್‍ನಲ್ಲೇ ಕ್ರಾಂತಿಯಾಗುತ್ತದೆ ಎಂದು ಭಾವಿಸಬಾರದು. ಬಿಜೆಪಿಯಲ್ಲೂ ಕ್ರಾಂತಿಯಾಗಬಹುದು. ಆರ್ಎಸ್‍ಎಸ್‍ನಲ್ಲಿ 75 ವರ್ಷಗಳ ಬಳಿಕ ಯಾರೂ ಜವಾಬ್ದಾರಿ ಸ್ಥಾನದಲ್ಲಿರಬಾರದು ಎಂದು ನಿಯಮ ಇದೆ. ಅದರಿಂದಾಗಿಯೇ ಎಲ್.ಕೆ.ಅಡ್ವಾಣಿಯವರನ್ನು ಬದಿಗಿರಿಸಿ ನರೇಂದ್ರ ಮೋದಿ ರಾಜಕೀಯ ಮುನ್ನೆಲೆಗೆ ಬಂದರು. ಅದೇ ನಿಯಮ ಈಗ ಮೋದಿಯವರಿಗೂ ಅನ್ವಯವಾಗುತ್ತದೆ. ಮಾರ್ಗದರ್ಶಕ ಮಂಡಳಿಗೆ ಮೋದಿ ಹೋಗಬೇಕಾಗುತ್ತದೆ. ಕೇಂದ್ರದಲ್ಲೂ ಬದಲಾವಣೆಯಾಗುತ್ತದೆ. ಬೇರೆಯವರಿಗೆ ಅವಕಾಶ ಸಿಗುತ್ತದೆ. ಅದು ಕ್ರಾಂತಿಯಲ್ಲವೇ? ಎಂದು ಪ್ರಶ್ನೆ ಮಾಡಿದರು.

ಇನ್ನು ಡಿ.ಕೆ.ಶಿವಕುಮಾರ್ ಪ್ರಧಾನಿಯಾಗುತ್ತಾರೋ, ಮುಖ್ಯಮಂತ್ರಿಯಾಗುತ್ತಾರೋ ಎಂಬುದನ್ನು ಹೈಕಮಾಂಡ್ ನಿರ್ಧಾರ ಮಾಡುತ್ತದೆ. ಇದೇ.30ರಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಬೆಂಗಳೂರಿಗೆ ಬರುತ್ತಿದ್ದಾರೆ ಎಂದು ಮಾಧ್ಯಮದಲ್ಲಿ ನೋಡಿದ್ದೇನೆ. ಅವರು ಬಂದು ಈ ರೀತಿ ಮಾತನಾಡಬೇಡಿ ಎಂದು ತಾಕೀತು ಮಾಡಿದರೂ ನಾನು ಕೇರ್ ಮಾಡುವುದಿಲ್ಲ ಎಂದು ಹೇಳಬೇಕೆಂಬುದು ಮಾಧ್ಯಮಗಳ ನಿರೀಕ್ಷೆ. ಆದರೆ ನಾನು ಆ ರೀತಿ ಹೇಳುವುದಿಲ್ಲ ಎಂದರು.

ಆಂದೋಲನ ಡೆಸ್ಕ್

Recent Posts

ಕೇರ್ ಟೇಕರ್ ಕೆಲಸಕ್ಕೆ ಸೇರಿ ಮನೆ ದರೋಡೆ; ಆರೋಪಿ ಬಂಧನ

ಮಡಿಕೇರಿ: ವಯೋವೃದ್ಧರೊಬ್ಬರ ಮನೆಯಲ್ಲಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ…

10 hours ago

ಮಹದೇಶ್ವರ ಬೆಟ್ಟ : ವಿವಿಧ ಸೇವೆಗಳಿಂದ 1.16 ಕೋಟಿ ಸಂಗ್ರಹ

ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ ಜಾತ್ರಾ…

10 hours ago

ಹೊರ್ಮುಜ್‌ ಜಲಸಂಧಿ ಶತ್ರುಗಳಿಗೆ ಮಾತ್ರ ಮುಚ್ಚಿದೆ : ಇರಾನ್

ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…

11 hours ago

ಹುಣಸೂರು | ಗುಡುಗು-ಸಿಡಿಲು ಸಹಿತ ಸಾಧಾರಣ ಮಳೆ

ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು…

11 hours ago

ಕುಕ್ಕರಹಳ್ಳಿ ಕೆರೆಯಲ್ಲಿ ಕಟ್ಟಡ ನಿರ್ಮಾಣಕ್ಕೆ ವಿರೋಧ ; ಪ್ರತಿಭಟನೆ

ಮೈಸೂರು : ಕುಕ್ಕರಹಳ್ಳಿ ಕೆರೆಯ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ವತಿಯಿಂದ ಕುಕ್ಕರಹಳ್ಳಿ…

11 hours ago

2 ಸಾವಿರ ಬೋಧಕ ಹುದ್ದೆಗಳಿಗೆ ನೇಮಕಾತಿ : ಉನ್ನತ ಶಿಕ್ಷಣ ಸಚಿವ ಸುಧಾಕರ್‌

ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ…

12 hours ago