Change in State Politics is Certain: Minister K.N. Rajanna
ತುಮಕೂರು: ಸೆಪ್ಟೆಂಬರ್ ವೇಳೆಗೆ ರಾಜಕೀಯ ಕ್ರಾಂತಿಯಾಗಲಿದೆ ಎಂಬ ಹೇಳಿಕೆಯನ್ನು ಪುನರುಚ್ಚರಿಸಿರುವ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರು, ಈ ರೀತಿಯ ಕ್ರಾಂತಿ ಕಾಂಗ್ರೆಸ್ ಪಕ್ಷದಲ್ಲೇ ನಡೆಯುತ್ತದೆ ಎಂದು ಏಕೆ ಭಾವಿಸಬೇಕು. ಬಿಜೆಪಿಯಲ್ಲೂ ಆಗಬಹುದು ಅಥವಾ ಕೇಂದ್ರ ಸರ್ಕಾರದಲ್ಲೂ ಆಗಬಹುದು ಎಂದು ಹೇಳಿದ್ದಾರೆ.
ಈ ಕುರಿತು ತುಮಕೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಸೆಪ್ಟೆಂಬರ್ನಲ್ಲಿ ಚಳಿ ಇರುತ್ತದೆ. ಅದಕ್ಕಾಗಿ ಸ್ವಲ್ಪ ಬಿಸಿಯಾಗಲಿ ಎಂದು ರಾಜಕೀಯ ಕ್ರಾಂತಿಯ ಬಗ್ಗೆ ಹೇಳಿದ್ದೇನೆ. ರಾಜಕೀಯ ಬದಲಾವಣೆಯ ಬಗ್ಗೆ ಸೆಪ್ಟೆಂಬರ್ನಲ್ಲೇ ಹೇಳುತ್ತೇನೆ, ಈಗ ಹೇಳುವುದಿಲ್ಲ ಎಂದರು.
ಕ್ರಾಂತಿ ಎಂದರೆ ಹಲವು ರೀತಿಗಳಿವೆ. ಬಾಬು ಜಗಜೀವನರಾವ್ ಹಸಿರು ಕ್ರಾಂತಿ ಮಾಡಿದರು. 1919ರ ಅಕ್ಟೋಬರ್ನಲ್ಲಿ ರಷ್ಯಾದಲ್ಲಾದ ಕ್ರಾಂತಿಯನ್ನೇ ನೆನಪಿಸಿಕೊಳ್ಳಬೇಕೇ? ಎಂದರು.
ಕಾಂಗ್ರೆಸ್ನಲ್ಲೇ ಕ್ರಾಂತಿಯಾಗುತ್ತದೆ ಎಂದು ಭಾವಿಸಬಾರದು. ಬಿಜೆಪಿಯಲ್ಲೂ ಕ್ರಾಂತಿಯಾಗಬಹುದು. ಆರ್ಎಸ್ಎಸ್ನಲ್ಲಿ 75 ವರ್ಷಗಳ ಬಳಿಕ ಯಾರೂ ಜವಾಬ್ದಾರಿ ಸ್ಥಾನದಲ್ಲಿರಬಾರದು ಎಂದು ನಿಯಮ ಇದೆ. ಅದರಿಂದಾಗಿಯೇ ಎಲ್.ಕೆ.ಅಡ್ವಾಣಿಯವರನ್ನು ಬದಿಗಿರಿಸಿ ನರೇಂದ್ರ ಮೋದಿ ರಾಜಕೀಯ ಮುನ್ನೆಲೆಗೆ ಬಂದರು. ಅದೇ ನಿಯಮ ಈಗ ಮೋದಿಯವರಿಗೂ ಅನ್ವಯವಾಗುತ್ತದೆ. ಮಾರ್ಗದರ್ಶಕ ಮಂಡಳಿಗೆ ಮೋದಿ ಹೋಗಬೇಕಾಗುತ್ತದೆ. ಕೇಂದ್ರದಲ್ಲೂ ಬದಲಾವಣೆಯಾಗುತ್ತದೆ. ಬೇರೆಯವರಿಗೆ ಅವಕಾಶ ಸಿಗುತ್ತದೆ. ಅದು ಕ್ರಾಂತಿಯಲ್ಲವೇ? ಎಂದು ಪ್ರಶ್ನೆ ಮಾಡಿದರು.
ಇನ್ನು ಡಿ.ಕೆ.ಶಿವಕುಮಾರ್ ಪ್ರಧಾನಿಯಾಗುತ್ತಾರೋ, ಮುಖ್ಯಮಂತ್ರಿಯಾಗುತ್ತಾರೋ ಎಂಬುದನ್ನು ಹೈಕಮಾಂಡ್ ನಿರ್ಧಾರ ಮಾಡುತ್ತದೆ. ಇದೇ.30ರಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಬೆಂಗಳೂರಿಗೆ ಬರುತ್ತಿದ್ದಾರೆ ಎಂದು ಮಾಧ್ಯಮದಲ್ಲಿ ನೋಡಿದ್ದೇನೆ. ಅವರು ಬಂದು ಈ ರೀತಿ ಮಾತನಾಡಬೇಡಿ ಎಂದು ತಾಕೀತು ಮಾಡಿದರೂ ನಾನು ಕೇರ್ ಮಾಡುವುದಿಲ್ಲ ಎಂದು ಹೇಳಬೇಕೆಂಬುದು ಮಾಧ್ಯಮಗಳ ನಿರೀಕ್ಷೆ. ಆದರೆ ನಾನು ಆ ರೀತಿ ಹೇಳುವುದಿಲ್ಲ ಎಂದರು.
ಮಹೇಶ್ ಕರೋಠಿ ಕಿಕ್ಕೇರಿ: ಇಲ್ಲಿಗೆ ಸಮೀಪದ ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕ್ಯಾತನಹಳ್ಳಿ ಗ್ರಾಮದಲ್ಲಿ ಕಳೆದ ೨-೩ ವರ್ಷಗಳಿಂದ ಹಲವು…
ನೆಂಟರಿಷ್ಟರು ಮನೆಗೆ ಬಂದರು ಎಂದರೆ... ಏನು ಎತ್ತ, ಹೇಗೆ ಅವರ ಆತಿಥ್ಯ? ಇಂಥ ಸಂಕಷ್ಟಗಳಿಗೆಲ್ಲಾ ಕಾರಣ,ಬಂದ್ ಆಗಿರುವ ಆ ಹಾರ್ಮುಜ್…
ಮೈಸೂರಿನಿಂದ ಎಚ್.ಡಿ.ಕೋಟೆ ಮಾರ್ಗದಲ್ಲಿ ಬರುವ ಮಾದಾಪುರ ಗ್ರಾಮದಿಂದ ಕೆ. ಬೆಳತ್ತೂರು ಹಾಗೂ ಲೆಂಕೆ ಗ್ರಾಮದವರೆಗೂ ರಸ್ತೆ ಡಾಂಬರೀಕರಣವಾಗಿದೆ. ಈ ರಸ್ತೆಯಲ್ಲಿ…
ಜಾತ್ರೆಗಳು ಹಾಗೂ ಹಬ್ಬಗಳು ಗ್ರಾಮದ ಎಲ್ಲಾ ಜನರು ಒಟ್ಟುಗೂಡಿ ಮಾಡುವ ಕಾರ್ಯಕ್ರಮವಾಗಿವೆ. ಇದರಲ್ಲಿ ಜನರ ಒಗ್ಗಟ್ಟು, ಪರಸ್ಪರ ಸಹಕಾರ ಕಾಣುತ್ತೇವೆ.…
ಮೈಸೂರಿನ ಬಹುತೇಕ ಎಲ್ಲ ಬಡಾವಣೆಗಳಲ್ಲೂ, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್)ದಿಂದ ಅಂಡರ್ ಗ್ರೌಂಡ್ ಕೇಬಲ್ ಅನ್ನು ಅಳಡಿಸುತ್ತಿದ್ದು, ಕಾಮಗಾರಿಯ…
ಮೀಸಲಾತಿ ವ್ಯವಸ್ಥೆ ಜಾರಿ ಸಂಬಂಧ ಪರ ಮತ್ತು ವಿರೋಧದ ಚರ್ಚೆ ಹಾದಿ ಬೀದಿ, ಹಳ್ಳಿಯ ಪಂಚಾಯಿತಿ ಕಟ್ಟೆಗಳಲ್ಲಿ ಮತ್ತು ಖಾಸಗಿಯಾಗಿ…