Change in State Politics is Certain: Minister K.N. Rajanna
ತುಮಕೂರು: ಸೆಪ್ಟೆಂಬರ್ ವೇಳೆಗೆ ರಾಜಕೀಯ ಕ್ರಾಂತಿಯಾಗಲಿದೆ ಎಂಬ ಹೇಳಿಕೆಯನ್ನು ಪುನರುಚ್ಚರಿಸಿರುವ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರು, ಈ ರೀತಿಯ ಕ್ರಾಂತಿ ಕಾಂಗ್ರೆಸ್ ಪಕ್ಷದಲ್ಲೇ ನಡೆಯುತ್ತದೆ ಎಂದು ಏಕೆ ಭಾವಿಸಬೇಕು. ಬಿಜೆಪಿಯಲ್ಲೂ ಆಗಬಹುದು ಅಥವಾ ಕೇಂದ್ರ ಸರ್ಕಾರದಲ್ಲೂ ಆಗಬಹುದು ಎಂದು ಹೇಳಿದ್ದಾರೆ.
ಈ ಕುರಿತು ತುಮಕೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಸೆಪ್ಟೆಂಬರ್ನಲ್ಲಿ ಚಳಿ ಇರುತ್ತದೆ. ಅದಕ್ಕಾಗಿ ಸ್ವಲ್ಪ ಬಿಸಿಯಾಗಲಿ ಎಂದು ರಾಜಕೀಯ ಕ್ರಾಂತಿಯ ಬಗ್ಗೆ ಹೇಳಿದ್ದೇನೆ. ರಾಜಕೀಯ ಬದಲಾವಣೆಯ ಬಗ್ಗೆ ಸೆಪ್ಟೆಂಬರ್ನಲ್ಲೇ ಹೇಳುತ್ತೇನೆ, ಈಗ ಹೇಳುವುದಿಲ್ಲ ಎಂದರು.
ಕ್ರಾಂತಿ ಎಂದರೆ ಹಲವು ರೀತಿಗಳಿವೆ. ಬಾಬು ಜಗಜೀವನರಾವ್ ಹಸಿರು ಕ್ರಾಂತಿ ಮಾಡಿದರು. 1919ರ ಅಕ್ಟೋಬರ್ನಲ್ಲಿ ರಷ್ಯಾದಲ್ಲಾದ ಕ್ರಾಂತಿಯನ್ನೇ ನೆನಪಿಸಿಕೊಳ್ಳಬೇಕೇ? ಎಂದರು.
ಕಾಂಗ್ರೆಸ್ನಲ್ಲೇ ಕ್ರಾಂತಿಯಾಗುತ್ತದೆ ಎಂದು ಭಾವಿಸಬಾರದು. ಬಿಜೆಪಿಯಲ್ಲೂ ಕ್ರಾಂತಿಯಾಗಬಹುದು. ಆರ್ಎಸ್ಎಸ್ನಲ್ಲಿ 75 ವರ್ಷಗಳ ಬಳಿಕ ಯಾರೂ ಜವಾಬ್ದಾರಿ ಸ್ಥಾನದಲ್ಲಿರಬಾರದು ಎಂದು ನಿಯಮ ಇದೆ. ಅದರಿಂದಾಗಿಯೇ ಎಲ್.ಕೆ.ಅಡ್ವಾಣಿಯವರನ್ನು ಬದಿಗಿರಿಸಿ ನರೇಂದ್ರ ಮೋದಿ ರಾಜಕೀಯ ಮುನ್ನೆಲೆಗೆ ಬಂದರು. ಅದೇ ನಿಯಮ ಈಗ ಮೋದಿಯವರಿಗೂ ಅನ್ವಯವಾಗುತ್ತದೆ. ಮಾರ್ಗದರ್ಶಕ ಮಂಡಳಿಗೆ ಮೋದಿ ಹೋಗಬೇಕಾಗುತ್ತದೆ. ಕೇಂದ್ರದಲ್ಲೂ ಬದಲಾವಣೆಯಾಗುತ್ತದೆ. ಬೇರೆಯವರಿಗೆ ಅವಕಾಶ ಸಿಗುತ್ತದೆ. ಅದು ಕ್ರಾಂತಿಯಲ್ಲವೇ? ಎಂದು ಪ್ರಶ್ನೆ ಮಾಡಿದರು.
ಇನ್ನು ಡಿ.ಕೆ.ಶಿವಕುಮಾರ್ ಪ್ರಧಾನಿಯಾಗುತ್ತಾರೋ, ಮುಖ್ಯಮಂತ್ರಿಯಾಗುತ್ತಾರೋ ಎಂಬುದನ್ನು ಹೈಕಮಾಂಡ್ ನಿರ್ಧಾರ ಮಾಡುತ್ತದೆ. ಇದೇ.30ರಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಬೆಂಗಳೂರಿಗೆ ಬರುತ್ತಿದ್ದಾರೆ ಎಂದು ಮಾಧ್ಯಮದಲ್ಲಿ ನೋಡಿದ್ದೇನೆ. ಅವರು ಬಂದು ಈ ರೀತಿ ಮಾತನಾಡಬೇಡಿ ಎಂದು ತಾಕೀತು ಮಾಡಿದರೂ ನಾನು ಕೇರ್ ಮಾಡುವುದಿಲ್ಲ ಎಂದು ಹೇಳಬೇಕೆಂಬುದು ಮಾಧ್ಯಮಗಳ ನಿರೀಕ್ಷೆ. ಆದರೆ ನಾನು ಆ ರೀತಿ ಹೇಳುವುದಿಲ್ಲ ಎಂದರು.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…