ರಾಜ್ಯ

ಸೆಪ್ಟೆಂಬರ್‌ ವೇಳೆಗೆ ಬಿಜೆಪಿಯಲ್ಲೂ ರಾಜಕೀಯ ಕ್ರಾಂತಿ: ಸಚಿವ ಕೆ.ಎನ್.ರಾಜಣ್ಣ

ತುಮಕೂರು: ಸೆಪ್ಟೆಂಬರ್ ವೇಳೆಗೆ ರಾಜಕೀಯ ಕ್ರಾಂತಿಯಾಗಲಿದೆ ಎಂಬ ಹೇಳಿಕೆಯನ್ನು ಪುನರುಚ್ಚರಿಸಿರುವ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರು, ಈ ರೀತಿಯ ಕ್ರಾಂತಿ ಕಾಂಗ್ರೆಸ್ ಪಕ್ಷದಲ್ಲೇ ನಡೆಯುತ್ತದೆ ಎಂದು ಏಕೆ ಭಾವಿಸಬೇಕು. ಬಿಜೆಪಿಯಲ್ಲೂ ಆಗಬಹುದು ಅಥವಾ ಕೇಂದ್ರ ಸರ್ಕಾರದಲ್ಲೂ ಆಗಬಹುದು ಎಂದು ಹೇಳಿದ್ದಾರೆ.

ಈ ಕುರಿತು ತುಮಕೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಸೆಪ್ಟೆಂಬರ್‌ನಲ್ಲಿ ಚಳಿ ಇರುತ್ತದೆ. ಅದಕ್ಕಾಗಿ ಸ್ವಲ್ಪ ಬಿಸಿಯಾಗಲಿ ಎಂದು ರಾಜಕೀಯ ಕ್ರಾಂತಿಯ ಬಗ್ಗೆ ಹೇಳಿದ್ದೇನೆ. ರಾಜಕೀಯ ಬದಲಾವಣೆಯ ಬಗ್ಗೆ ಸೆಪ್ಟೆಂಬರ್‌ನಲ್ಲೇ ಹೇಳುತ್ತೇನೆ, ಈಗ ಹೇಳುವುದಿಲ್ಲ ಎಂದರು.

ಕ್ರಾಂತಿ ಎಂದರೆ ಹಲವು ರೀತಿಗಳಿವೆ. ಬಾಬು ಜಗಜೀವನರಾವ್ ಹಸಿರು ಕ್ರಾಂತಿ ಮಾಡಿದರು. 1919ರ ಅಕ್ಟೋಬರ್‌ನಲ್ಲಿ ರಷ್ಯಾದಲ್ಲಾದ ಕ್ರಾಂತಿಯನ್ನೇ ನೆನಪಿಸಿಕೊಳ್ಳಬೇಕೇ? ಎಂದರು.

ಕಾಂಗ್ರೆಸ್‍ನಲ್ಲೇ ಕ್ರಾಂತಿಯಾಗುತ್ತದೆ ಎಂದು ಭಾವಿಸಬಾರದು. ಬಿಜೆಪಿಯಲ್ಲೂ ಕ್ರಾಂತಿಯಾಗಬಹುದು. ಆರ್ಎಸ್‍ಎಸ್‍ನಲ್ಲಿ 75 ವರ್ಷಗಳ ಬಳಿಕ ಯಾರೂ ಜವಾಬ್ದಾರಿ ಸ್ಥಾನದಲ್ಲಿರಬಾರದು ಎಂದು ನಿಯಮ ಇದೆ. ಅದರಿಂದಾಗಿಯೇ ಎಲ್.ಕೆ.ಅಡ್ವಾಣಿಯವರನ್ನು ಬದಿಗಿರಿಸಿ ನರೇಂದ್ರ ಮೋದಿ ರಾಜಕೀಯ ಮುನ್ನೆಲೆಗೆ ಬಂದರು. ಅದೇ ನಿಯಮ ಈಗ ಮೋದಿಯವರಿಗೂ ಅನ್ವಯವಾಗುತ್ತದೆ. ಮಾರ್ಗದರ್ಶಕ ಮಂಡಳಿಗೆ ಮೋದಿ ಹೋಗಬೇಕಾಗುತ್ತದೆ. ಕೇಂದ್ರದಲ್ಲೂ ಬದಲಾವಣೆಯಾಗುತ್ತದೆ. ಬೇರೆಯವರಿಗೆ ಅವಕಾಶ ಸಿಗುತ್ತದೆ. ಅದು ಕ್ರಾಂತಿಯಲ್ಲವೇ? ಎಂದು ಪ್ರಶ್ನೆ ಮಾಡಿದರು.

ಇನ್ನು ಡಿ.ಕೆ.ಶಿವಕುಮಾರ್ ಪ್ರಧಾನಿಯಾಗುತ್ತಾರೋ, ಮುಖ್ಯಮಂತ್ರಿಯಾಗುತ್ತಾರೋ ಎಂಬುದನ್ನು ಹೈಕಮಾಂಡ್ ನಿರ್ಧಾರ ಮಾಡುತ್ತದೆ. ಇದೇ.30ರಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಬೆಂಗಳೂರಿಗೆ ಬರುತ್ತಿದ್ದಾರೆ ಎಂದು ಮಾಧ್ಯಮದಲ್ಲಿ ನೋಡಿದ್ದೇನೆ. ಅವರು ಬಂದು ಈ ರೀತಿ ಮಾತನಾಡಬೇಡಿ ಎಂದು ತಾಕೀತು ಮಾಡಿದರೂ ನಾನು ಕೇರ್ ಮಾಡುವುದಿಲ್ಲ ಎಂದು ಹೇಳಬೇಕೆಂಬುದು ಮಾಧ್ಯಮಗಳ ನಿರೀಕ್ಷೆ. ಆದರೆ ನಾನು ಆ ರೀತಿ ಹೇಳುವುದಿಲ್ಲ ಎಂದರು.

ಆಂದೋಲನ ಡೆಸ್ಕ್

Recent Posts

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

4 hours ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

5 hours ago

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

7 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

9 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

10 hours ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

1 day ago