ರಾಜ್ಯ

ಸೆಪ್ಟೆಂಬರ್‌ ವೇಳೆಗೆ ಬಿಜೆಪಿಯಲ್ಲೂ ರಾಜಕೀಯ ಕ್ರಾಂತಿ: ಸಚಿವ ಕೆ.ಎನ್.ರಾಜಣ್ಣ

ತುಮಕೂರು: ಸೆಪ್ಟೆಂಬರ್ ವೇಳೆಗೆ ರಾಜಕೀಯ ಕ್ರಾಂತಿಯಾಗಲಿದೆ ಎಂಬ ಹೇಳಿಕೆಯನ್ನು ಪುನರುಚ್ಚರಿಸಿರುವ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರು, ಈ ರೀತಿಯ ಕ್ರಾಂತಿ ಕಾಂಗ್ರೆಸ್ ಪಕ್ಷದಲ್ಲೇ ನಡೆಯುತ್ತದೆ ಎಂದು ಏಕೆ ಭಾವಿಸಬೇಕು. ಬಿಜೆಪಿಯಲ್ಲೂ ಆಗಬಹುದು ಅಥವಾ ಕೇಂದ್ರ ಸರ್ಕಾರದಲ್ಲೂ ಆಗಬಹುದು ಎಂದು ಹೇಳಿದ್ದಾರೆ.

ಈ ಕುರಿತು ತುಮಕೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಸೆಪ್ಟೆಂಬರ್‌ನಲ್ಲಿ ಚಳಿ ಇರುತ್ತದೆ. ಅದಕ್ಕಾಗಿ ಸ್ವಲ್ಪ ಬಿಸಿಯಾಗಲಿ ಎಂದು ರಾಜಕೀಯ ಕ್ರಾಂತಿಯ ಬಗ್ಗೆ ಹೇಳಿದ್ದೇನೆ. ರಾಜಕೀಯ ಬದಲಾವಣೆಯ ಬಗ್ಗೆ ಸೆಪ್ಟೆಂಬರ್‌ನಲ್ಲೇ ಹೇಳುತ್ತೇನೆ, ಈಗ ಹೇಳುವುದಿಲ್ಲ ಎಂದರು.

ಕ್ರಾಂತಿ ಎಂದರೆ ಹಲವು ರೀತಿಗಳಿವೆ. ಬಾಬು ಜಗಜೀವನರಾವ್ ಹಸಿರು ಕ್ರಾಂತಿ ಮಾಡಿದರು. 1919ರ ಅಕ್ಟೋಬರ್‌ನಲ್ಲಿ ರಷ್ಯಾದಲ್ಲಾದ ಕ್ರಾಂತಿಯನ್ನೇ ನೆನಪಿಸಿಕೊಳ್ಳಬೇಕೇ? ಎಂದರು.

ಕಾಂಗ್ರೆಸ್‍ನಲ್ಲೇ ಕ್ರಾಂತಿಯಾಗುತ್ತದೆ ಎಂದು ಭಾವಿಸಬಾರದು. ಬಿಜೆಪಿಯಲ್ಲೂ ಕ್ರಾಂತಿಯಾಗಬಹುದು. ಆರ್ಎಸ್‍ಎಸ್‍ನಲ್ಲಿ 75 ವರ್ಷಗಳ ಬಳಿಕ ಯಾರೂ ಜವಾಬ್ದಾರಿ ಸ್ಥಾನದಲ್ಲಿರಬಾರದು ಎಂದು ನಿಯಮ ಇದೆ. ಅದರಿಂದಾಗಿಯೇ ಎಲ್.ಕೆ.ಅಡ್ವಾಣಿಯವರನ್ನು ಬದಿಗಿರಿಸಿ ನರೇಂದ್ರ ಮೋದಿ ರಾಜಕೀಯ ಮುನ್ನೆಲೆಗೆ ಬಂದರು. ಅದೇ ನಿಯಮ ಈಗ ಮೋದಿಯವರಿಗೂ ಅನ್ವಯವಾಗುತ್ತದೆ. ಮಾರ್ಗದರ್ಶಕ ಮಂಡಳಿಗೆ ಮೋದಿ ಹೋಗಬೇಕಾಗುತ್ತದೆ. ಕೇಂದ್ರದಲ್ಲೂ ಬದಲಾವಣೆಯಾಗುತ್ತದೆ. ಬೇರೆಯವರಿಗೆ ಅವಕಾಶ ಸಿಗುತ್ತದೆ. ಅದು ಕ್ರಾಂತಿಯಲ್ಲವೇ? ಎಂದು ಪ್ರಶ್ನೆ ಮಾಡಿದರು.

ಇನ್ನು ಡಿ.ಕೆ.ಶಿವಕುಮಾರ್ ಪ್ರಧಾನಿಯಾಗುತ್ತಾರೋ, ಮುಖ್ಯಮಂತ್ರಿಯಾಗುತ್ತಾರೋ ಎಂಬುದನ್ನು ಹೈಕಮಾಂಡ್ ನಿರ್ಧಾರ ಮಾಡುತ್ತದೆ. ಇದೇ.30ರಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಬೆಂಗಳೂರಿಗೆ ಬರುತ್ತಿದ್ದಾರೆ ಎಂದು ಮಾಧ್ಯಮದಲ್ಲಿ ನೋಡಿದ್ದೇನೆ. ಅವರು ಬಂದು ಈ ರೀತಿ ಮಾತನಾಡಬೇಡಿ ಎಂದು ತಾಕೀತು ಮಾಡಿದರೂ ನಾನು ಕೇರ್ ಮಾಡುವುದಿಲ್ಲ ಎಂದು ಹೇಳಬೇಕೆಂಬುದು ಮಾಧ್ಯಮಗಳ ನಿರೀಕ್ಷೆ. ಆದರೆ ನಾನು ಆ ರೀತಿ ಹೇಳುವುದಿಲ್ಲ ಎಂದರು.

ಆಂದೋಲನ ಡೆಸ್ಕ್

Recent Posts

ಪ್ರಮಾಣ ವಚನ ಸಮಾರಂಭಕ್ಕೆ ವಿಜಯ್‌ ಪತ್ನಿ, ಮಕ್ಕಳು ಗೈರು

ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…

7 hours ago

ಮಡಿಕೇರಿ | ನೀರಿನಲ್ಲಿ ಮುಳುಗಿ ಯುವಕ ಸಾವು

ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…

7 hours ago

ಗಡಿ ಜಿಲ್ಲೆಯಲ್ಲೂ ತಮಿಳು ಸಿಎಂ ವಿಜಯ್‌ ಹವಾ!

ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…

8 hours ago

ಪ್ರಧಾನಿ ಸಂಚಾರ ಮಾರ್ಗದಲ್ಲಿ ಜಿಲಿಟೆನ್ ಕಡ್ಡಿ ಪತ್ತೆ ; ಕೆಲಕಾಲ ಆತಂಕ ; ಓರ್ವ ವಶಕ್ಕೆ

ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…

8 hours ago

ತಮಿಳುನಾಡು | ತಿರುಚಿರಾಪಳ್ಳಿ ಕ್ಷೇತ್ರಕ್ಕೆ ವಿಜಯ್ ರಾಜೀನಾಮೆ

ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…

9 hours ago

ಹುಣಸೂರು | ಭಾರೀ ಗಾಳಿ-ಮಳೆಗೆ ಹಾರಿಹೋದ ಚಾವಣಿ

ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…

9 hours ago